Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವೋಸ್ ಆರ್ಥಿಕ ಶೃಂಗಸಭೆ- ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕವೇ ಫೇವರೇಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದಾವೋಸ್ ಆರ್ಥಿಕ ಶೃಂಗಸಭೆ- ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕವೇ ಫೇವರೇಟ್

Latest

ದಾವೋಸ್ ಆರ್ಥಿಕ ಶೃಂಗಸಭೆ- ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕವೇ ಫೇವರೇಟ್

Public TV
Last updated: January 22, 2020 9:25 pm
Public TV
Share
3 Min Read
CM BSY FOREIGN 3
SHARE

ದಾವೊಸ್ (ಸ್ವಿಟ್ಜರ್ಲೆಂಡ್): ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೂರನೇ ದಿನವಾದ ಇಂದು ಕರ್ನಾಟಕದ ಪಾಲಿಗೆ ಫಲಪ್ರದವಾಗಿ ಪರಿಣಮಿಸಿತು. ಮುಖ್ಯಮಂತ್ರಿ ಬಿ.ಎಸ್‍ಯಡಿಯೂರಪ್ಪ ಅವರು ಪ್ರತಿಷ್ಠಿತ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು. ಇದರಲ್ಲಿ ದಸ್ಸಾ ಸಿಸ್ಟಮ್ಸ್, ಅರ್ಸೆಲಾರ್ ಮಿತ್ತಲ್, ಭಾರತ್ ಫೋರ್ಜ್, ಲಾಕ್ ಹೀಡ್ ಮಾರ್ಟಿನ್, ಲುಲು ಗ್ರೂಪ್ ಮತ್ತು ನೊವೊ ನಾರ್ಡಿಸ್ಕ್ ಮೊದಲಾದ ಕಂಪೆನಿಗಳು ಸೇರಿದ್ದವು.

ತಮ್ಮನ್ನು ಭೇಟಿಯಾದ ಹೂಡಿಕೆದಾರರೊಂದಿಗೆ ಮಾತುಕತೆ ನಡೆಸಿದ ಸಿಎಂ ಯಡಿಯೂರಪ್ಪ ಅವರು, ಕರ್ನಾಟಕ ಸರ್ಕಾರವು ಹೂಡಿಕೆದಾರರಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಲಿದೆ. ಜೊತೆಗೆ ಎಲ್ಲ ರೀತಿಯ ಅಡಚಣೆಗಳನ್ನು ನಿವಾರಿಸಲಿದೆ ಎಂದು ಸ್ಪಷ್ಟ ಪಡಿಸಿದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿ ಹೂಡಿಕೆಗೆ ಸೂಕ್ತ ನೆರವು ಒದಗಿಸಲಿದ್ದಾರೆ ಎಂದು ತಿಳಿಸಿದರು.

CM BSY FOREIGN

ಈಗಾಗಲೇ ಬೆಂಗಳೂರಿನಲ್ಲಿ ಅಸ್ತಿತ್ವ ಹೊಂದಿರುವ ದಸ್ಸಾ ಸಿಸ್ಟಮ್ಸ್ 3ಡಿಎಸ್ ಅವರಿಂದ ಹೂಡಿಕೆಯ ಕುರಿತು ಅತ್ಯಂತ ಭರವಸೆಯ ಪ್ರತಿಕ್ರಿಯೆ ವ್ಯಕ್ತವಾಯಿತು. ಕಂಪೆನಿಯ ಉಪಾಧ್ಯಕ್ಷ ಫ್ಲಾರೆನ್ಸ್ ವರ್ಝೆಲೆನ್ ಅವರು ಬೆಂಗಳೂರು ಹಾಗೂ ಯಾವುದಾದರೂ ಜಿಲ್ಲೆಯಲ್ಲಿ ಎರಡು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ವಹಿಸುವುದಾಗಿ ತಿಳಿಸಿದರು. `ನಾವು ಪ್ರತಿ ಕೇಂದ್ರದಲ್ಲಿ ಪ್ರತಿ ವರ್ಷ ತಲಾ 2,000 ಯುವಕರಿಗೆ ತರಬೇತಿ ನೀಡಿ, ದೊಡ್ಡ ಕಂಪೆನಿಗಳಲ್ಲಿ ಕೌಶಲ್ಯಪೂರ್ಣ ಉದ್ಯೋಗ ಪಡೆಯಲು ಅರ್ಹರನ್ನಾಗಿಸಲಿದ್ದೇವೆ. ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಯುವಕರಿಗೆ ತರಬೇತಿ ನೀಡಲು ತಾವು ಆಸಕ್ತರಾಗಿದ್ದೇವೆ’ ತಿಳಿಸಿದರು.

ಎಂಜಿನಿಯರಿಂಗ್ ಪದವೀಧರರಿಗೂ ತರಬೇತಿ ನೀಡಲಾಗುವುದು ಎಂದು ತಿಳಿಸಿದ ಫ್ಲಾರೆನ್ಸ್ ವರ್ಝೆಲೆನ್ ಅವರು, ಈ ಕೇಂದ್ರಗಳ ಸ್ಥಾಪನೆಗೆ ಒಂದು ದಶಲಕ್ಷ ಯುರೋ ಹೂಡಿಕೆ ಮಾಡಲಾಗುವುದು ಎಂದರು. ಬೆಂಗಳೂರು ರಕ್ಷಣಾ ಉಪಕರಣಗಳು ಹಾಗೂ ಎರೋಸ್ಪೇಸ್ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಈ ವಲಯಗಳಲ್ಲಿ ತರಬೇತಿ ಹೊಂದಿದ ಯುವಕರಿಗೆ ಬೇಡಿಕೆ ಇರುವ ಕುರಿತು ಸಿಎಂ ಗಮನ ಸೆಳೆದಾಗ ವರ್ಝೇಲೆನ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಮುಂದಿನ ದಿನಗಳಲ್ಲಿ ಅಂತಹ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

CM BSY FOREIGN 5

ಉಕ್ಕಿನ ಕೈಗಾರಿಕೆಗಳ ಪ್ರಮುಖ ಉದ್ಯಮಿ ಲಕ್ಷ್ಮಿ ಎನ್.ಮಿತ್ತಲ್ ಮಂಗಳವಾರ ರಾತ್ರಿ ನಡೆದ ಸಿಐಐ ಭೋಜನ ಕೂಟದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದರು. ಇಂದು ಬೆಳಗ್ಗೆಯೂ ಕರ್ನಾಟಕ ಪೆವಿಲಿಯನ್‍ಗೆ ಆಗಮಿಸಿ, ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಚರ್ಚೆ ನಡೆಸಿದರು. ಅವರ ಕಂಪೆನಿಯು ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 3,000 ಎಕರೆ ಭೂಮಿ ಹೊಂದಿದೆ.

`2010ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ ಉಕ್ಕು ತಯಾರಿಕಾ ಘಟಕ ಸ್ಥಾಪನೆಗೆ ಅನುಮತಿ ನೀಡಿದ್ದು, ಕಾರಣಾಂತರಗಳಿಂದ ಇದಕ್ಕೆ ಅಡಚಣೆಗಳು ಉಂಟಾಗಿವೆ. ಈಗ ತಾವು ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿ ಎಂದು ಲಕ್ಷ್ಮಿ ಎನ್.ಮಿತ್ತಲ್ ಮನವಿ ಮಾಡಿದರು. ಕರ್ನಾಟಕದಲ್ಲಿ ಸೌರ ವಿದ್ಯುತ್ ಸ್ಥಾವರದಲ್ಲಿ ಹೂಡಿಕೆ ಮಾಡುವುದಾಗಿ ಮಿತ್ತಲ್ ಭರವಸೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಉಕ್ಕು ತಯಾರಿಕಾ ಘಟಕ ಹಾಗೂ ಸೌರ ವಿದ್ಯುತ್ ಸ್ಥಾವರಗಳೆರಡರ ಯೋಜನೆಯನ್ನೂ ಕೂಡಲೇ ಪ್ರಾರಂಭಿಸುವಂತೆ ಸಲಹೆ ನೀಡಿದರು. ಅದಕ್ಕೆ ಮಿತ್ತಲ್ ಅವರು ಈ ಕೂಡಲೇ ಉಕ್ಕಿನ ಉಪಯೋಗದ ಕುರಿತ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸುವುದಾಗಿ ಭರವಸೆ ನೀಡಿದರು.

CM BSY FOREIGN 2

ಲುಲು ಗ್ರೂಪ್ ಅಧ್ಯಕ್ಷ ಯೂಸುಫ್ ಅಲಿ ಅವರು ಕರ್ನಾಟಕದಲ್ಲಿ ಸರಕು ಸಾಗಾಣಿಕೆ ವಲಯದಲ್ಲಿ 2000 ಕೋಟಿ ರೂ. ಹೂಡಿಕೆ ಮಾಡುವುದಾಗಿ ತಿಳಿಸಿದರು. ಈ ಸಂಸ್ಥೆಯು ವಿಶೇಷವಾಗಿ ಕೃಷಿ ಉತ್ಪನ್ನ ಹಾಗೂ ಶೀಘ್ರ ಕೊಳೆತುಹೋಗುವ ತರಕಾರಿ, ಆಹಾರ ವಸ್ತುಗಳು, ಹಣ್ಣು ಹಂಪಲು ಹಾಗೂ ಪುಷ್ಪಗಳ ಸಾಗಾಣಿಕೆಗೇ ಹೂಡಿಕೆ ಮಾಡಲಿದೆ.

ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರೂ ಸಹ ಸಭೆಗಳಲ್ಲಿ ಭಾಗವಹಿಸಿದ್ದರು.

TAGGED:BS YediyurappaDavosForeign InvestmentPublic TVWorld Economic Forumಉದ್ಯಮಿ ಲಕ್ಷ್ಮಿ ಎನ್.ಮಿತ್ತಲ್ಕರ್ನಾಟಕದಾವೋಸ್ ಆರ್ಥಿಕ ಶೃಂಗಸಭೆಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
5 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
5 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
5 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
6 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
7 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?