ಚಿತ್ರದುರ್ಗ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳ ಮಾಂಗಲ್ಯ ಸರವನ್ನು ಅಪಹರಿಸಿರುವ ಘಟನೆ ಚಿತ್ರದುರ್ಗದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದ ನಿರ್ಮಲಾ ಎಂಬ ಮಾಂಗಲ್ಯ ಸರವನ್ನು ಕಳೆದುಕೊಂಡಿದ್ದಾರೆ. ಶನಿವಾರ ಮಧ್ಯಾಹ್ನ ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ರಾಣೆಬೆನ್ನೂರಿಗೆ ಹೊರಟಿದ್ದರು. ಬಸ್ಸು ಚಿತ್ರದುರ್ಗ ನಿಲ್ದಾಣಕ್ಕೆ ತಲುಪಿದ್ದಂತೆ ಕಳ್ಳನೊಬ್ಬ ನಿರ್ಮಲಾ ಅವರ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾಗಿದ್ದಾನೆ.
ಬಸ್ ನಿಲ್ದಾಣದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸದ ಕಾರಣ, ಕಳ್ಳನನ್ನು ಗುರುತಿಸಲು ಸಾಧ್ಯವಾಗಿಲ್ಲ. ಅಲ್ಲದೇ ಬಸ್ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೊಸ್ಟ್ ಇದ್ದರೂ ಸಕಾಲಕ್ಕೆ ಪೊಲೀಸರು ಇರಲಿಲ್ಲ. ಹೀಗಾಗಿ ಕಳ್ಳ ಸುಲಭವಾಗಿ ಪರಾರಿಯಾಗಿದ್ದಾನೆ. ನಿರ್ಮಲಾ ಅವರು ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.