– ಬೇಕು ಅಂತಾನೆ ಕೊಟ್ಟಿಲ್ಲ ಅಂದ್ರು ಡಿಸಿಎಂ
ಬೆಂಗಳೂರು: ಬೆಂಗಳೂರು ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಹಂಚಿಕೆ ವಿಚಾರದಲ್ಲಿ ರಾಜಕೀಯ ನಡೆದಿದೆ. ಬಿಜೆಪಿ ಶಾಸಕ ಪ್ರತಿನಿಧಿಸುವ ಜಯನಗರ ಕ್ಷೇತ್ರವನ್ನು ಡಿಸಿಎಂ ಹೊರಗಿಟ್ಟಿದ್ದಾರೆ.
- Advertisement -
ರಾಜ್ಯ ಸರ್ಕಾರ ಬೆಂಗಳೂರಿನ 27 ವಿಧಾನಸಭಾ ಕ್ಚೇತ್ರಗಳಿಗೆ ತಲಾ 10 ಕೋಟಿಯಂತೆ 270 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಆದರೆ, ಈ ಪಟ್ಟಿಯಿಂದ ಡಿಸಿಎಂ ಡಿಕೆ ಶಿವಕುಮಾರ್ ಬೇಕಂತಲೇ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಪ್ರತಿನಿಧಿಸುವ ಜಯನಗರ ಕ್ಷೇತ್ರವನ್ನು ಹೊರಗಿಟ್ಟಿದ್ದಾರೆ.
- Advertisement -
- Advertisement -
ಅಸೆಂಬ್ಲಿಯಲ್ಲಿ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಶಾಸಕ ಸಿ.ಕೆ.ರಾಮಮೂರ್ತಿ ಮಾತಾಡಿದ್ದರು ಎಂಬ ಕಾರಣಕ್ಕೆ ಜಯನಗರಕ್ಕೆ ಅನುದಾನ ನೀಡಿಲ್ಲ ಎಂದು ಹೇಳಲಾಗಿದೆ. ಇದು ವ್ಯಾಪಕ ಟೀಕೆ, ಆಕ್ರೋಶಕ್ಕೆ ಕಾರಣವಾಗಿದೆ.
- Advertisement -
ಇದು ಸೇಡಿನ ಕ್ರಮ. ಕಾಂಗ್ರೆಸ್ಗೆ ಮತ ಹಾಕದ ನಾಗರಿಕರನ್ನು ಈ ಸರ್ಕಾರ ಶಿಕ್ಷಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಇದಕ್ಕೆ ಪೂರಕವಾಗಿ ಡಿಸಿಎಂ ಮಾತಾಡಿದ್ದು, ನಾನೇ ಬೇಕು ಅಂತಾ ಜಯನಗರಕ್ಕೆ ಅನುದಾನ ಕೊಟ್ಟಿಲ್ಲ ಎಂದಿದ್ದಾರೆ. ಈ ಮೂಲಕ ತಮ್ಮ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.