Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲರ ಅಭಿಪ್ರಾಯ ಪಡೆದು, ಸುದೀರ್ಘ ಚರ್ಚೆ ಬಳಿಕವೇ ನಿಗಮ-ಮಂಡಳಿಗಳಿಗೆ ನೇಮಕ ಮಾಡಲಾಗಿದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲ್ಲರ ಅಭಿಪ್ರಾಯ ಪಡೆದು, ಸುದೀರ್ಘ ಚರ್ಚೆ ಬಳಿಕವೇ ನಿಗಮ-ಮಂಡಳಿಗಳಿಗೆ ನೇಮಕ ಮಾಡಲಾಗಿದೆ: ಡಿಕೆಶಿ

Bengaluru City

ಎಲ್ಲರ ಅಭಿಪ್ರಾಯ ಪಡೆದು, ಸುದೀರ್ಘ ಚರ್ಚೆ ಬಳಿಕವೇ ನಿಗಮ-ಮಂಡಳಿಗಳಿಗೆ ನೇಮಕ ಮಾಡಲಾಗಿದೆ: ಡಿಕೆಶಿ

Public TV
Last updated: January 27, 2024 6:27 pm
Public TV
Share
2 Min Read
DK Shivakumar
SHARE

ಬೆಂಗಳೂರು: ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ-ಮಂಡಳಿಗಳಿಗೆ (Corporation Board) ನೇಮಕ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ.

ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ನಿಗಮ-ಮಂಡಳಿಗಳಿಗೆ ನೇಮಕ‌ ಪಟ್ಟಿಯಲ್ಲಿ ಕೆಲವರ ಹೆಸರು ಕೈಬಿಟ್ಟಿರುವುದಕ್ಕೆ ಅಸಮಾಧಾನ ಇದೆ. ಸಚಿವರು ತಮ್ಮ ಅಭಿಪ್ರಾಯ ಕೇಳಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ನೇಮಕದ ಬಗ್ಗೆ ಸಿದ್ದರಾಮಯ್ಯ ಅವರು, ನಾನು ಹಾಗೂ ಪ್ರಧಾನ ಕಾರ್ಯದರ್ಶಿಗಳು ಕೂತು ಚರ್ಚೆ ಮಾಡಿದ್ದೇವೆ. ಎಲ್ಲರ ಅಭಿಪ್ರಾಯ ಪಡೆದಿದ್ದೇವೆ. ಕೆಲವರು ಇಂತಹವರಿಗೆ ಸ್ಥಾನ ನೀಡಬೇಕು ಎಂಬ ಪಟ್ಟಿ ಕೊಟ್ಟಿದ್ದಾರೆ. ಆ ಪತ್ರವನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; ಮೊದಲ ಪಟ್ಟಿ ರಿಲೀಸ್

SIDDU DKSHI

ಮಂತ್ರಿ ಆಗಬೇಕು, ದೊಡ್ಡ ಮಂಡಳಿಗಳು ಸಿಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಎರಡು ವರ್ಷಗಳ ನಂತರ ಮತ್ತೆ ಬದಲಾವಣೆ ಆಗುತ್ತದೆ. ಅವಧಿ ಮುಗಿದ ನಂತರ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದ್ದೇವೆ. ಪಕ್ಷ ಯಾವುದೇ ಹುದ್ದೆ ಕೊಟ್ಟರೂ ಸೇವೆ ಮಾಡಬೇಕು. ಯಾರೂ ಗಾಬರಿಯಾಗುವ ಅವಶ್ಯಕತೆಯಿಲ್ಲ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬ್ಲಾಕ್‌ನಲ್ಲಿ ದುಡಿದಂತಹ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಈಗ 39 ಜನ ಶಾಸಕರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಚುನಾವಣಾ ಸಮಯದಲ್ಲಿ ಕೆಲವರಿಗೆ ಮಾತು ಕೊಡಲಾಗಿತ್ತು. ಅದರಂತೆ ಒಂದಷ್ಟು ಜನರಿಗೆ ಹುದ್ದೆ ನೀಡಲಾಗಿದೆ. ಎಲ್ಲರನ್ನೂ ತೃಪ್ತಿಪಡಿಸಿದ್ದೇವೆ ಎಂದು ಹೇಳುವುದಿಲ್ಲ. ಪ್ರತಿ ಕ್ಷೇತ್ರದಲ್ಲಿ ಇಬ್ಬರು, ಮೂವರು ಆಕಾಂಕ್ಷಿಗಳಿದ್ದರು. ಪ್ರಸ್ತುತ ಕೆಲವರಿಗೆ ಅವಕಾಶ ನೀಡಲಾಗಿದೆ. ಮುಂದೆ ಉಳಿದವರಿಗೆ ಅವಕಾಶ ಕಲ್ಪಿಸಲಾಗುವುದು. ನಾವು ಎಲ್ಲರನ್ನೂ ಗೌರವಿಸಿ ಕೆಲಸ ಮಾಡಿದ್ದೇವೆ, ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ, ಯಾರೇ ಹೋದರೂ ಪಕ್ಷಕ್ಕೆ ನಷ್ಟವಾಗದು: ಡಿಕೆಶಿ

congress flag

ನೂರಾರು ಕಾರ್ಯಕರ್ತರಿಗೆ ಅವಕಾಶ ನೀಡಲು ಹುದ್ದೆಗಳನ್ನು ಸೃಷ್ಟಿ ಮಾಡಿದ್ದೇವೆ. ಕಾರ್ಯಕರ್ತರಿಗೆ ಸ್ಥಳೀಯ ಮಟ್ಟದಲ್ಲಿ ಆಸ್ಪತ್ರೆ ಸಮಿತಿ, ಬಗರ್‌ ಹುಕುಂ ಸಾಗುವಳಿ ಸಮಿತಿ, ಆಶ್ರಯ ಸಮಿತಿ, ಮುನಿಸಿಪಾಲಿಟಿ ಸೇರಿದಂತೆ ವಿವಿಧ ಸಮಿತಿಗಳಲ್ಲಿ ಅವಕಾಶ ನೀಡಲಾಗುವುದು. ಈ ವಿಚಾರದಲ್ಲಿ ಮಾಧ್ಯಮಗಳು ಅನಗತ್ಯ ಗೊಂದಲ ಮೂಡಿಸುವ ಪ್ರಶ್ನೆ ಕೇಳಿದರೆ ನಾನು ಕೇಳುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.

ಕ್ರೀಡಾ ಪ್ರಾಧಿಕಾರಕ್ಕೆ ಸಚಿವರೇ ಅಧ್ಯಕ್ಷರಾಗಿರುತ್ತಾರೆ ಎಂದು ಬೈಲಾ ಮಾಡಲಾಗಿದೆ. ಈ ಹಿಂದೆ ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಬೈಲಾ ಮಾಡಲಾಗಿತ್ತು. ಈಗ ಮತ್ತೆ ಪರಿಷ್ಕರಿಸಲಿಸಲಾಗುವುದು ಎಂದಿದ್ದಾರೆ. ಶಾಸಕ ನರೇಂದ್ರ ಸ್ವಾಮಿಯವರ ನೇಮಕ ವಿಚಾರ ಪ್ರಕರಣ ನ್ಯಾಯಲಯದಲ್ಲಿದೆ. ಪ್ರಕರಣ ಇತ್ಯರ್ಥವಾದ ತಕ್ಷಣ ನರೇಂದ್ರ ಸ್ವಾಮಿಯವರಿಗೂ ಹುದ್ದೆ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಅಂತಿದ್ದಾರೆ, ಪುಣ್ಯಕ್ಕೆ ರಾಷ್ಟ್ರಪತಿ ಎಂದಿಲ್ಲ: ಪ್ರಹ್ಲಾದ್ ಜೋಶಿ

ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರನ್ನು ಮರು ಆಯ್ಕೆ ಮಾಡಿ ಎಂಬ ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಬಗ್ಗೆ ಮಾತನಾಡಿ, ಆ ವಿಚಾರ ನನಗೆ ಗೊತ್ತಿಲ್ಲ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚಿನ ಕ್ಷೇತ್ರದಲ್ಲಿ ಗೆಲ್ಲುತ್ತದೆ. ಶಿವಮೊಗ್ಗದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲಲಿದ್ದಾರೆ. ಜಗದೀಶ್‌ ಶೆಟ್ಟರ್‌ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್‌ ನಿರ್ನಾಮ ಮಾಡಿ ಎಂದು ಕರೆಕೊಟ್ಟಿದ್ದರೆ. ಈ ಹಿಂದೆ ಕಾಂಗ್ರೆಸ್‌ ಗೆಲ್ಲಿಸಿ, ಬಿಜೆಪಿ ನಿರ್ನಾಮ ಮಾಡಿ ಎಂದು ಹೇಳಿದ್ದರು ಎಂದಿದ್ದಾರೆ.

TAGGED:Corporation Boardd k shivakumarಡಿ.ಕೆ.ಶಿವಕುಮಾರ್ನಿಗಮ ಮಂಡಳಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
9 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
23 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
44 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
2 hours ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?