ನವದೆಹಲಿ: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water Issue) ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ಸಮಾಲೋಚನೆ ನಡೆಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರನ್ನು ಭೇಟಿಯಾದರು.
ಮಂಗಳವಾರ ತಡರಾತ್ರಿ ದೆಹಲಿಯ ಜೋಶಿ ಅವರ ನಿವಾಸದಲ್ಲಿ ಡಿಕೆಶಿ (D.K.Shivakumar) ಭೇಟಿಯಾದರು. ಈ ವೇಳೆ ಸಚಿವ ಟಿ.ಬಿ.ಜಯಚಂದ್ರ, ಸಂಸದರಾದ ಡಿ.ಕೆ.ಸುರೇಶ್, ಜಿ.ಸಿ.ಚಂದ್ರಶೇಖರ್ ಇದ್ದರು. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕೇಂದ್ರ ಸಚಿವರ ಜೊತೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಶ್ರೇಯಸ್ಸು ಮೋದಿಗೆ ಸಲ್ಲಬೇಕು: ಕಂಗನಾ
ಸೋಮವಾರ ನಡೆದ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡು ಪರವಾಗಿ ಆದೇಶ ಹೊರಡಿಸಿತ್ತು. ಸಿಡಬ್ಲ್ಯೂಆರ್ಸಿ ಆದೇಶದಂತೆ ಕರ್ನಾಟಕ ನಿತ್ಯ 5,000 ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ತಮಿಳುನಾಡಿಗೆ ಹರಿಸಬೇಕು ಎಂದು ಸೂಚಿಸಿತ್ತು.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸೆ.21 ರಂದು ಸುಪ್ರೀಂ ಕೋರ್ಟ್ನಲ್ಲಿ ಕಾವೇರಿ ಅರ್ಜಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವಕೀಲರ ಜೊತೆ ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಇಂದು ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಸಿಎಂ ನೇತೃತ್ವದಲ್ಲಿ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ: ಡಿಕೆಶಿ
Web Stories