Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ರಾಜ್ಯಕ್ಕೆ ಸೇವೆ ಮಾಡ್ಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ; ಮತ್ತೆ ಸಿಎಂ ಆಸೆ ವ್ಯಕ್ತಪಡಿಸಿದ ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ರಾಜ್ಯಕ್ಕೆ ಸೇವೆ ಮಾಡ್ಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ; ಮತ್ತೆ ಸಿಎಂ ಆಸೆ ವ್ಯಕ್ತಪಡಿಸಿದ ಡಿಕೆಶಿ

Districts

ನಾನು ರಾಜ್ಯಕ್ಕೆ ಸೇವೆ ಮಾಡ್ಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ; ಮತ್ತೆ ಸಿಎಂ ಆಸೆ ವ್ಯಕ್ತಪಡಿಸಿದ ಡಿಕೆಶಿ

Public TV
Last updated: September 28, 2024 7:23 pm
Public TV
Share
4 Min Read
DK Shivakumar 8
SHARE

ರಾಮನಗರ: ತಿಂಗಳಾಂತ್ಯದ ಶನಿವಾರದಲ್ಲಿ ಕ್ಷೇತ್ರ ಪ್ರವಾಸ ಹಮ್ಮಿಕೊಂಡಿದ್ದ ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಅವರು ಕಾರ್ಯಕ್ರಮದ ಭಾಷಣವೊಂದರಲ್ಲಿ ಮಾತನಾಡುತ್ತಾ ಮತ್ತೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.

DK Shivakumar 2 3

ಸ್ವಕ್ಷೇತ್ರದಲ್ಲಿಂದು ಪ್ರವಾಸ ಕೈಗೊಂಡಿದ್ದ ಡಿಸಿಎಂ ಡಿಕೆ ಶಿವಕುಮಾರ್‌, ಕನಕಪುರ ಟೌನ್ (Kanakapura Town) ವ್ಯಾಪ್ತಿಯ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ, ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಬಳಿಕ ಸಂತೆಕೋಡಿಹಳ್ಳಿ ಬಳಿ ಮುಸ್ಲಿಂ ಸಮುದಾಯದ (Muslim Community) ಕಾರ್ಯಕ್ರಮದಲ್ಲಿ ಭಾಗಿಯಾದರು. ಬಳಿಕ ಸಾತನೂರು ಬಳಿ ಜನಸ್ಪಂದನಾ ಸಭೆ ನಡೆಸಿ, ಕ್ಷೇತ್ರದ ಜನರ ಕುಂದುಕೊರತೆಗಳನ್ನು ಆಲಿಸಿದರು. ಇದೇ ವೇಳೆ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಕೆಶಿ

ಬಳಿಕ ಮಾತನಾಡಿದ ಅವರು, ಕನಕಪುರದ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಅಂತ ದೊಡ್ಡ ಪ್ರಯತ್ನ, ಹೋರಾಟ ಆಗ್ತಿದೆ. ಈಗ ಮಾತಾಡಿದ್ರೆ ಮಾಧ್ಯಮಗಳು ವಿವಿಧ ರೀತಿಯಲ್ಲಿ ಬಿಂಬಿಸ್ತವೆ. ಸದ್ಯ ನಾನು ಇಲ್ಲಿ ಡಿಸಿಎಂ (DCM) ಆಗಿ ಬಂದಿಲ್ಲ, ನಿಮ್ಮ ಶಾಸಕನಾಗಿ ಬಂದಿದ್ದೇನೆ. ಡಿಸಿಎಂ ಏನಿದ್ರೂ ವಿಧಾನಸೌಧದಲ್ಲಿ ಇಲ್ಲಿ ನೀವೆಲ್ಲ ನಮ್ಮ ಮನೆ ಮಕ್ಕಳು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿಎಂ ಆಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾಲ್ವರು ವಿಕಲ ಚೇತನ ಹೆಣ್ಣು ಮಕ್ಕಳಿಗೆ ಸ್ವೀಟ್‌ನಲ್ಲಿ ವಿಷ ಕೊಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ

ತಿಂಗಳ ಕೊನೆಯ ಶನಿವಾರ ಕ್ಷೇತ್ರದ ಪ್ರವಾಸ ಮಾಡ್ತಿದ್ದೀನಿ. ಇಂದು ಕಾಲೇಜಿನ ನೂತನ ಕಟ್ಟಡಗಳ ಉದ್ಘಾಟನೆ ಮಾಡಿದ್ದೀನಿ. ಈ ಕಾಲೇಜು ಹಿಂದೆ ಮುನ್ಸಿಪಲ್ ಗ್ರೌಂಡ್ ಅತ್ರ ಇತ್ತು. ಅಲ್ಲಿ ಜಾಗದ ಸಮಸ್ಯೆ ಇದ್ದಿದ್ದರಿಂದ ಇಲ್ಲಿ ಒಳ್ಳೆಯ ವಾತಾವರಣದಲ್ಲಿ ಕಾಲೇಜು ನಿರ್ಮಾಣ ಆಗಿದೆ. ನಾನು ಒಂದು ಚಿತ್ರಗಳನ್ನ ತಯಾರಿಸಲು ಹೇಳಿದ್ದೇನೆ. ಈ ಹಿಂದೆ ಕನಕಪುರ ಹೇಗಿತ್ತು, ಈಗ ಕನಕಪುರ ಹೇಗಿದೆ? ನಾನು ಶಾಸಕನಾದ ಬಳಿಕ ಎಷ್ಟೆಲ್ಲಾ ಅಭಿವೃದ್ಧಿ ಆಗಿದೆ ಎಂಬುದನ್ನ ತಿಳಿಸಬೇಕು. ಕನಕಪುರ ಒಂದು ರೀತಿಯ ಎಜುಕೇಶನ್ ಕಾರಿಡಾರ್ ಆಗಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಯಾದಗಿರಿ | ವಿಷಕಾರಿ ನೀರು ಸೇವಿಸುತ್ತಿರುವ ತಾಂಡಾ ಗ್ರಾಮಸ್ಥರು – ಇಲ್ಲಿನ ಜನಕ್ಕಿಲ್ಲ ಶುದ್ಧ ಕುಡಿಯುವ ನೀರು

ಈಗಾಗಲೇ ಉತ್ತಮ ರಸ್ತೆಗಳು ನಗರಕ್ಕೆ ಇದೆ. ನಾನು ಡಿಸಿಎಂ ಆಗಿ ಇಲ್ಲಿ ಬಂದಿಲ್ಲ, ನಿಮ್ಮ ಶಾಸಕನಾಗಿ ಕೆಲಸ ಮಾಡ್ತಿದ್ದೆನೆ. ನೀವು ಕನಕಪುರದ ವಿದ್ಯಾರ್ಥಿಗಳಲ್ಲ. ನೀವು ಬೆಂಗಳೂರು ಜಿಲ್ಲೆಯ ಮಕ್ಕಳು. ನಿಮ್ಮ ಇತಿಹಾಸ ತೆಗೆದು ನೋಡಿ, ಸಂಗಮ, ಮೇಕೆದಾಟು ವರೆಗೂ ಬೆಂಗಳೂರು ಜಿಲ್ಲೆ. ಚನ್ನಪಟ್ಟಣ, ಮಾಗಡಿ ಎಲ್ಲವೂ ಬೆಂಗಳೂರಿಗೆ ಸೇರುತ್ತೆ. ಯಾವುದೊ ಕಾರಣಕ್ಕೆ ಜಿಲ್ಲೆಯ ಹೆಸರು ಬದಲಾವಣೆ ಆಗಿತ್ತು ಆಷ್ಟೇ. ನಿಮ್ಮ ಕಾಂಪಿಟೇಷನ್ ಗ್ಲೋಬಲ್ ಮಟ್ಟದಲ್ಲಿ ಇರಬೇಕು. ಕನಕಪುರವನ್ನ ಏನು ಮಾಡಬೇಕು ಎಂಬುದನ್ನು ನಾನು ಬಾಯಿಬಿಟ್ಟು ಹೇಳಲ್ಲ. ಅದನ್ನ ಮಾಡಿ ತೋರಿಸುವ ಕೆಲಸ ಮಾಡ್ತೇನೆ ಎಂದು ಹೇಳಿದರು.

ನನಗೆ ಈಗಲೂ ಕಂಪ್ಯೂಟರ್ ಆಪರೇಟ್ ಮಾಡಲು ಬರಲ್ಲ. ನನಗೆ ಮೊಬೈಲ್ ನಲ್ಲಿ ಮೆಸೇಜ್ ಮಾಡಲು ಅಷ್ಟೇ ಬರುತ್ತೆ. ಆದ್ರೆ ನೀವು ಎಲ್ಲವನ್ನೂ ತಿಳಿದಿರುವ ಜನರೇಷನ್. ಎಲ್ಲರಿಗೂ ಮೊಬೈಲ್, ಕಂಪ್ಯೂಟರ್ ಬಳಸುವ ಬುದ್ಧಿ ಇದೆ. ದೇಶದಲ್ಲಿ ಅತಿಹೆಚ್ಚು ರೇಷ್ಮೆ ಬೆಳೆಯೋದು ನಾವೆ. ಕನಕಪುರದಲ್ಲಿ ಇರುವ ಡೇರಿ ಇಡೀ ದೇಶದಲ್ಲೇ ಇಲ್ಲ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಓದಬೇಕು. ನೀವು ಕೆವಲ ನೌಕರರಾಗಬಾರದು, 4 ಜನಕ್ಕೆ ನೌಕರಿ ಕೊಡುವವರಾಗಬೇಕು. ಸಮಾಜದಲ್ಲಿ ಯಾರು ಬೇಕಾದರೂ ಡಿ.ಕೆ.ಶಿವಕುಮಾರ್ ಆಗಬಹುದು. ಅದಕ್ಕೆ ನಿಮ್ಮ ತಳಹದಿ ಗಟ್ಟಿಯಾಗಿರಬೇಕು. ನೀವೆ ನಮ್ಮ ಆಸ್ತಿ ನಿಮ್ಮ ಬದುಕಿಗೆ ಒಳ್ಳೆಯದಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಜಾಗ ಖರೀದಿ ಮಾಡಿ ಸೈಟು ಕೊಡ್ತಿನಿ:
ಬಳಿಕ ಕನಕಪುರದ ಸಾತನೂರಿನಲ್ಲಿ ಜನಸ್ಪಂದನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಇಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಬೇಕು. ಅರ್ಧ ಅಭಿವೃದ್ಧಿ ಆಗಿದೆ, ಇನ್ನಷ್ಟು ಕೆಲಸ ಆಗಬೇಕು. ಜನ ನಿವೇಶನ ಕೇಳ್ತಿದ್ದಾರೆ, ಜಾಗ ಖರೀದಿ ಮಾಡಿ ನಿವೇಶನ ಕೊಡ್ತಿನಿ. ನನ್ನ ತಾಲೂಕಿನ ಸಂಪೂರ್ಣ ಡಾಕ್ಯುಮೆಂಟ್ ನನ್ನ ಹತ್ತಿರ ಇದೆ. ಈ ಹಿಂದೆ ಸಾತನೂರು ಹೇಗಿತ್ತು, ಈಗ ಹೇಗಿದೆ ನೋಡಿ. ಕನಕಪುರ, ದೊಡ್ಡಾಲಹಳ್ಳಿ, ಕೋಡಿಹಳ್ಳಿಗಳ ಚಿತ್ರಣ ಹೇಗಿತ್ತು ನೋಡಿ, ತಾಲೂಕು ಕಚೇರಿ, ರಸ್ತೆ ಎಲ್ಲವೂ ಅಭಿವೃದ್ಧಿ ಆಗಿದೆ. ಇದೆಲ್ಲವನ್ನೂ ಜನರಿಗೆ ತಿಳಿಸಬೇಕು. ಅದರಿಂದ ಈ ಬಗ್ಗೆ ಚಿತ್ರಗಳ ಮೂಲಕ ತಿಳಿಸುವ ಕೆಲಸ ಆಗುತ್ತೆ ಎಂದು ಭರವಸೆ ನೀಡಿದರು.

ಸಿಎಂ ಇಂಗಿತ ವಿಚಾರಕ್ಕೆ ಡಿಕೆಶಿ ಸ್ಪಷ್ಟನೆ:
ರಾಜ್ಯಕ್ಕೆ ಸೇವೆ ಮಾಡಲು ದೊಡ್ಡ ಪ್ರಯತ್ನ, ಹೋರಾಟ ಮಾಡ್ತಿದ್ದೀನಿ. ನಾನು ಆ ರೀತಿಯಲ್ಲಿ ಹೇಳಿಲ್ಲ. ನೀವೆಲ್ಲ ಸೇವೆ ಮಾಡೋಕೆ ಅವಕಾಶ ಕೊಡಿ ಎಂದಿದ್ದೇನೆ ಅಷ್ಟೇ. ನೀವು ಆ ರೀತಿ ಕಲ್ಪನೆ, ಸೃಷ್ಠಿ ಮಾಡೋದು ಬೇಡ. ನಾನು ಡಿಸಿಎಂ ಆಗಿ ರಾಜ್ಯದ ಸೇವೆ ಮಾಡ್ತಿದ್ದೀನಿ. ಇದನ್ನ ಮಕ್ಕಳಿಗೆ ತಿಳಿಸಬೇಕಲ್ಲ ಹಾಗಾಗಿ ಹೇಳಿದೆ ಎಂದು ಸಿಎಂ ಇಂಗಿತ ವಿಚಾರಕ್ಕೆ ಡಿಕೆಶಿ ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಹೆಚ್ಚು ರೈತರ ಸಾವು: ಪ್ರಧಾನಿ ಮೋದಿ ಆರೋಪ 

TAGGED:chief ministercongressDK Shivakumarmuslim communityramanagaraಕಾಂಗ್ರೆಸ್ಡಿ.ಕೆ.ಶಿವಕುಮಾರ್ಮುಖ್ಯಮಂತ್ರಿಮುಸ್ಲಿಂ ಸಮುದಾಯದರಾಮನಗರ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

Legislative Council 2
Bengaluru City

ʻಮೋದಿ ದೇಶದ್ರೋಹಿʼ ಎಂದ ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್; ಪರಿಷತ್‌ನಲ್ಲಿ ಗದ್ದಲ – ಕೋಲಾಹಲ

Public TV
By Public TV
33 minutes ago
Mamata Banerjee SIR ECI
Latest

ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ

Public TV
By Public TV
44 minutes ago
Haveri Farmers
Districts

ಬರೋಬ್ಬರಿ 4,685 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ ಬೆಳೆದ ಹಾವೇರಿ ರೈತರು – ಜನ ಮೆಚ್ಚುಗೆ

Public TV
By Public TV
2 hours ago
Mandya Exam Result
Districts

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು

Public TV
By Public TV
2 hours ago
air india flight bomb threat
Latest

ಫ್ಯೂಯಲ್ ಕಂಟ್ರೋಲ್‌ ಸ್ವಿಚ್‌ನಲ್ಲಿ ದೋಷ; ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Public TV
By Public TV
3 hours ago
chicken momos
Crime

ಫ್ರೀ ಮೋಮೋಸ್ ಆಮಿಷ – ಮನೆಯಲ್ಲಿದ್ದ 85 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಬಾಲಕ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?