ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮತ್ತೊಮ್ಮೆ ಪರೋಕ್ಷವಾಗಿ ಸಿಎಂ ಸ್ಥಾನ ಆಸೆಯನ್ನು ಹೊರ ಹಾಕಿದ್ದಾರೆ. ಅಷ್ಟೇ ಅಲ್ಲ ಡಿಕೆ ಶಿವಕುಮಾರ್ಗೆ ನೀವು ಶಕ್ತಿ ಕೊಡಬೇಕು ಎಂಬ ಮನವಿ ಮಾಡುವ ಮೂಲಕ ಸಿಎಂ ಸ್ಥಾನಕ್ಕೆ (Chief Minister Post) ನನ್ನನ್ನ ಕೂರಿಸಿ ಎಂಬ ಪರೋಕ್ಷವಾಗಿ ಸಂದೇಶ ಕಳುಹಿಸಿದ್ದಾರೆ.
ಅರಮನೆ ಮೈದಾನದಲ್ಲಿ ಇವತ್ತು ಕೆಪಿಟಿಸಿಎಲ್ (KPTCL) ನೌಕರರ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ವೇಳೆ ಡಿಕೆ ಶಿವಕುಮಾರ್ ಭಾಷಣ ಮಾಡಲು ಬಂದ ಕೂಡಲೇ ವಿದ್ಯುತ್ ಇಲಾಖೆ ಸಿಬ್ಬಂದಿಗಳು, ನೌಕರರು ಡಿಕೆ ಡಿಕೆ ಅಂತ ಘೋಷಣೆ ಕೂಗಿದರು. ಇದನ್ನೂ ಓದಿ: ನಂದಿನಿ ನಮ್ಮ ಸಂಸ್ಥೆ, ‘ನಮ್ಮ ಮೆಟ್ರೋ’ದಲ್ಲಿ ಮಳಿಗೆ ಹಾಕಲು ಅವಕಾಶ ಕೊಡ್ತೀವಿ: ಡಿಕೆಶಿ
ಈ ವೇಳೆ ಮಾತಾನಾಡಿದ ಡಿಕೆ ಶಿವಕುಮಾರ್ ಈಗ ಡಿಕೆ ಡಿಕೆ ಅನ್ನೋದು ಅಲ್ಲ. ಎಲೆಕ್ಷನ್ ನಲ್ಲಿ ಇನ್ನೊಂದು ಸಾರಿ ಡಿಕೆ ಶಿವಕುಮಾರ್ ತಂದು ಕೂರಿಸಿದ ಮೇಲೆ ಈ ಘೋಷಣೆ ಕೂಗಿ ಎಂದರು. ಇದನ್ನೂ ಓದಿ: ನಾವಿರುವವರೆಗೂ ಎಸ್ಕಾಂಗಳ ಖಾಸಗೀಕರಣಕ್ಕೆ ಅವಕಾಶವಿಲ್ಲ: ಡಿ.ಕೆ ಶಿವಕುಮಾರ್
ಮಾತು ಮುಂದುವರೆಸಿದ ಡಿಕೆಶಿವಕುಮಾರ್, ತಾವು ಇಂಧನ ಇಲಾಖೆ ಸಚಿವನಾಗಿ ಇದ್ದಾಗ ಮಾಡಿದ ಸಾಧನೆ ಹೇಳಿದ್ರು. ನೀವು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್ನನ್ನು ಮೇಲಕ್ಕೆ ಎತ್ತಬಹುದು. ಕೆಳಗೆ ಇಳಿಸಬಹುದು. ಅಷ್ಟು ಶಕ್ತಿ ನಿಮಗೆ ಇದೆ. ನಾವು ನಿಮಗೆ ಎಲ್ಲಾ ಮಾಡಿದ್ದೇವೆ. ನಿಮಗೆ ನಮ್ಮ ಮೇಲೆ ಉಪಕಾರ ಸ್ಮರಣೆ ಇರಬೇಕು. ಬರೀ ಡಿಕೆ ಡಿಕೆ ಅನ್ನೋದಲ್ಲ. ಈ ಸರ್ಕಾರವನ್ನು ತಂದು ಕೂರಿಸಬೇಕು ಎನ್ನುವ ಮೂಲಕ ಸಿಎಂ ಸ್ಥಾನಕ್ಕೆ ಆಶೀರ್ವಾದ ಮಾಡಬೇಕೆಂದು ಪರೋಕ್ಷವಾಗಿ ಹೇಳಿದರು.