– ದೇವಾಲಯದ ಕುಂಭಾಭಿಷೇಕದಲ್ಲಿ ಡಿಕೆ ಶಿವಕುಮಾರ್ ದಂಪತಿ ಭಾಗಿ, ಹೋಮ-ಹವನ ನೆರವೇರಿಕೆ
ರಾಮನಗರ: ಕನಕಪುರ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಯ್ಯಪ್ಪಸ್ವಾಮಿ ದೇವಾಲಯದ (AyyappaSwamy Temple) ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ದಂಪತಿ ಭಾಗಿಯಾಗಿದ್ದಾರೆ.
ಗುರುವಾರ ರಾತ್ರಿ ಸ್ವಕ್ಷೇತ್ರ ಕನಕಪುರಕ್ಕೆ (Kanakapura) ಭೇಟಿ ನೀಡಿದ್ದ ಡಿಸಿಎಂ ಡಿ.ಕೆ ಶಿವಕುಮಾರ್, ತಮ್ಮ ಆಪ್ತನ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಬಳಿಕ ಅಯ್ಯಪ್ಪಸ್ವಾಮಿ ದೇವಾಲಯದ ಕುಂಭಾಭಿಷೇಕ ಮಹೋತ್ಸವಕ್ಕೆ ಆಗಮಿಸಿ ಹೋಮ-ಹವನ ನೆರವೇರಿಸಿದ್ದಾರೆ. ಇದನ್ನೂ ಓದಿ: ಐದರ ಪೈಕಿ 3 ಗ್ಯಾರಂಟಿ ಆರಂಭದಲ್ಲಿ ಜಾರಿ – ಷರತ್ತುಗಳು ಏನಿರಬಹುದು?
ನಂತರ ಅಯ್ಯಪ್ಪಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ ದೇವಾಲಯದಲ್ಲೇ ಪ್ರಸಾದ ಸೇವಿಸಿದ್ದಾರೆ. ಶುಕ್ರವಾರ (ಜೂ.2) ಸಚಿವ ಸಂಪುಟ ಸಭೆ (Cabinet Meeting) ಹಿನ್ನೆಲೆ ತಡರಾತ್ರಿಯೇ ಬೆಂಗಳೂರಿಗೆ ವಾಪಸ್ಸ್ ಆಗಿದ್ದಾರೆ. ಜೂ.3ರಂದು ಕನಕಪುರ ಕ್ಷೇತ್ರದ ಮತದಾರರಿಗೆ ಅಭಿನಂದನೆ ತಿಳಿಸಲು ವಿಶೇಷ ಸಭೆಗಳನ್ನ ಹಮ್ಮಿಕೊಂಡಿದ್ದು ಇಡೀ ದಿನ ಕ್ಷೇತ್ರದೆಲ್ಲೆಡೆ ಡಿಸಿಎಂ ಪ್ರವಾಸ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: 1948ರಲ್ಲಿ ಪಾಕಿಸ್ತಾನಿ ಮೂಲಭೂತವಾದಿಗಳಿಂದ ಹಾನಿಗೊಳಗಾಗಿದ್ದ ಶಾರದಾ ಮಂದಿರ ಪುನರ್ ನಿರ್ಮಾಣ – ಶೃಂಗೇರಿ ಶ್ರೀ ಭೇಟಿ