ಬೆಂಗ್ಳೂರಲ್ಲಿ ಫ್ಲೆಕ್ಸ್‌, ಬ್ಯಾನರ್‌ ತೆರವಿಗೆ ಸೂಚನೆ – ಆದೇಶ ಉಲ್ಲಂಘಿಸಿದ್ರೆ ಯಾವುದೇ ಪಕ್ಷದವರಾದ್ರೂ ಕ್ರಮ: ಡಿಕೆಶಿ

Public TV
1 Min Read
dk shivakumar

ಬೆಂಗಳೂರು: ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಿದ್ದಾರೆ.

ಮಾರ್ಚ್ 17 ರಂದು ಸೋಮವಾರ ಅರಮನೆ ಮೈದಾನದಲ್ಲಿ (ಸೋಮವಾರ) ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನ ಕೂಡಲೇ ತೆರವುಗೊಳಿಸಬೇಕು ಎಂದು ಡಿಸಿಎಂ ಅವರು ಸೂಚಿಸಿದ್ದಾರೆ.

bbmp

ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದ ಸೌಂದರ್ಯವನ್ನು ಹಾಳು ಮಾಡಬಾರದು ಎಂದು ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಆದೇಶವನ್ನು ಪದೇ ಪದೆ ನಿರ್ಲಕ್ಷಿಸಲಾಗಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಆದೇಶ ಉಲ್ಲಂಘಿಸಿರುವವರು ನಮ್ಮ ಪಕ್ಷದವರಾದರೂ ಸರಿ, ಬೇರೆ ಪಕ್ಷದವರಾದರೂ ಸರಿ ಅಂತಹವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿರುವುದಾಗಿ ಡಿಸಿಎಂ ತಿಳಿಸಿದ್ದಾರೆ.

Share This Article