Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

2026ರ ವೇಳೆಗೆ 175 ಕಿಮೀ ನೂತನ ಮೆಟ್ರೋ ಮಾರ್ಗಗಳು ಸಾರ್ವಜನಿಕರ ಸೇವೆಗೆ – ಡಿಕೆಶಿ

Public TV
Last updated: November 6, 2024 6:15 pm
Public TV
Share
3 Min Read
DK Shivakumar 1
SHARE

– 1,130 ಕೋಟಿ ರೂ. ವೆಚ್ಚದಲ್ಲಿ 21 ಹೊಸ ರೈಲುಗಳ ಸೇರ್ಪಡೆ

ಬೆಂಗಳೂರು: 2025ರ ವೇಳೆಗೆ ಸುಮಾರು 30 ಕಿಮೀ ಹಾಗೂ 2026ರ ವೇಳೆಗೆ 175 ಕಿಮೀ ನೂತನ ಮೆಟ್ರೋ ಮಾರ್ಗಗಳನ್ನು (Metro Line) ಸಾರ್ವಜನಿಕರ ಸೇವೆಗೆ ನೀಡಲಾಗುವುದು ಎಂದು ಡಿಸಿಎಂ ಡಿ‌.ಕೆ ಶಿವಕುಮಾರ್ (DK Shivakumar) ಹೇಳಿದರು.

ಮೆಟ್ರೋ ಹಸಿರು ಮಾರ್ಗದಲ್ಲಿ ನಾಗಸಂದ್ರದಿಂದ ತುಮಕೂರು ರಸ್ತೆಯ ಮಾದಾವರ (ಬೆಂಗಳೂರು ಅಂತರರಾಷ್ಟ್ರೀಯ ಮತ್ತು ಪ್ರದರ್ಶನ ಕೇಂದ್ರ)ದ ತನಕ ವಿಸ್ತರಣೆ ಮಾಡಿರುವ ನೂತನ ಮಾರ್ಗದಲ್ಲಿ ಪ್ರಾಯೋಗಿಕ ಮೆಟ್ರೋ ರೈಲು ಸಂಚಾರವನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರದಂದು ಪರಿಶೀಲನೆ ಮಾಡಿದರು.

DK Shivakumar 2

ಸಂಸದ ತೇಜಸ್ವಿ ಸೂರ್ಯ, ನೆಲಮಂಗಲ ಶಾಸಕ ಶ್ರೀನಿವಾಸಯ್ಯ, ದಾಸರಹಳ್ಳಿ ಶಾಸಕ ಮುನಿರಾಜು ಅವರ ಜೊತೆ ಯಶವಂತರಪುರ ಮೆಟ್ರೋ ರೈಲು ನಿಲ್ದಾಣದಿಂದ ಮಾದಾವರದ ತನಕ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ಜೊತೆಗೆ ಬಿಎಂಆರ್ ಸಿಎಲ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಮಾದಾವರ ಮೆಟ್ರೋ ನಿಲ್ದಾಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಈಗಾಗಲೇ 1,130 ಕೋಟಿ ರೂ. ವೆಚ್ಚದಲ್ಲಿ 21 ಹೊಸ ರೈಲುಗಳಿಗೆ ಹರಾಜು ಪ್ರಕ್ರಿಯೆ ನಡೆಸಿ ಹಣ ಕಟ್ಟಲಾಗಿದೆ. ಹೊಸ ರೈಲುಗಳು ಆದಷ್ಟು ಬೇಗ ಸೇವೆಗೆ ಲಭ್ಯವಾಗಲಿವೆ. ಮೆಟ್ರೋ ಮಾರ್ಗದ ಒಂದು ಹಾಗೂ 2ನೇ ಹಂತಗಳನ್ನು ನಾವು ಪೂರ್ಣಗೊಳಿಸಿದ್ದು, 3ನೇ ಹಂತಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದರು. ಇದನ್ನೂ ಓದಿ: ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಜಯ ನಿಶ್ಚಿತ: ಎಂಡಿ ಲಕ್ಷ್ಮೀನಾರಾಯಣ

NAMMA METRO 2

ಪಾದಚಾರಿ ಮೇಲ್ಸೇತುವೆ, ಅಂಡರ್ ಪಾಸ್ ನಿರ್ಮಾಣ:
ಮಂಜುನಾಥನಗರ ನಿಲ್ದಾಣದಲ್ಲಿ ರಸ್ತೆ ದಾಟಲು ಪಾದಚಾರಿ ಮೇಲ್ಸೆತುವೆಯ ಅನುಕೂಲ ಮಾಡಿಕೊಡಲಾಗುತ್ತಿದೆ‌. ಯಶವಂತಪುರ ನಿಲ್ದಾಣದಲ್ಲಿ ಸಾರ್ವಜನಿಕರು ಯಾವುದೇ ಅಡಚಣೆಯಿಲ್ಲದೇ ಸಂಚರಿಸಲು ಭಾರತೀಯ ರೈಲ್ವೇ ಹಾಗೂ ನಮ್ಮ ಮೆಟ್ರೋ ಸಂಸ್ಥೆ ಪಾದಚಾರಿ ಮೇಲ್ಸೆತುವೆ ಸೇರಿದಂತೆ ಇತರೇ ಅನುಕೂಲಗಳನ್ನು ಮಾಡಲು ಜಂಟಿಯಾಗಿ ಒಪ್ಪಂದ ಮಾಡಿಕೊಂಡಿವೆ ಎಂದು ತಿಳಿಸಿದರು. ಇದನ್ನೂ ಓದಿ: ನಾಗಸಂದ್ರ – ಮಾದಾವರ ಮೆಟ್ರೋ ಸೇವೆ ನಾಳೆಯಿಂದ ಸಾರ್ವಜನಿಕರಿಗೆ ಲಭ್ಯ

ಚಿಕ್ಕಬಿದಿರಕಲ್ಲು ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ ಸಂಸ್ಥೆಯೊಟ್ಟಿಗೆ ಸೇರಿ ಅಂಡರ್ ಪಾಸ್ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ಮಾದಾವರ ಮೆಟ್ರೋ ನಿಲ್ದಾಣದ ಬಳಿಯೂ ಅಂಡರ್ ಪಾಸ್ ನಿರ್ಮಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಸಂಸ್ಥೆಯವರ ಬಳಿ ಮಾತುಕತೆ ನಡೆಸಲಾಗುತ್ತಿದೆ. ಮುಂದೆ ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುವವರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ವಾಹನ ನಿಲುಗಡೆ ಮಾಡಿ ಸಂಚಾರ ದಟ್ಟಣೆ ರಹಿತವಾಗಿ ನಗರ ಪ್ರದಕ್ಷಿಣೆ ಮಾಡಬಹುದು ಹಾಗೂ ಅವರ ಕೆಲಸಗಳನ್ನು ತ್ವರಿತವಾಗಿ ಮುಗಿಸಿಕೊಳ್ಳಬಹುದು ಎಂದು ಹೇಳಿದರು.

ಶೀಘ್ರ ಅಧಿಕೃತ ಉದ್ಘಾಟನೆ:
ನಾಗಸಂದ್ರದಿಂದ 3 ಕಿಮೀ ದೂರವಿರುವ ಮಾದಾವರದ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ವರೆಗೆ ವಿಸ್ತರಿತ ನೂತನ ಮಾರ್ಗವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಾಯೋಗಿಕವಾಗಿ ಉದ್ಘಾಟನೆ ಮಾಡಲಾಗಿದೆ‌. ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಈ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ಯೋಜನೆಗೆ ಒಪ್ಪಿಗೆ ನೀಡಿದ್ದೆ. ಮುಂದಿನ ದಿನಗಳಲ್ಲಿ ಎಲ್ಲ ಸಂಸದರು ಹಾಗೂ ಇತರೇ ಜನಪ್ರತಿನಿಧಿಗಳನ್ನು ಆಹ್ವಾನಿಸಿ ವಿಸ್ತರಿತ ಮೆಟ್ರೋ ಮಾರ್ಗವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರಸ್ತುತ ಮೆಟ್ರೋ ಹಸಿರು ಮಾರ್ಗವು 33.46 ಕಿಮೀ ಉದ್ದವಿದೆ. ನೇರಳೆ ಮಾರ್ಗ 40.5 ಕಿಮೀ ಉದ್ದವಿದೆ. ಈ ಮಹತ್ತರವಾದ ಕಾರ್ಯ ಸಾಕಾರಗೊಳ್ಳಲು ಸಹಕಾರ ನೀಡಿದ ಕೇಂದ್ರ ಸರ್ಕಾರಕ್ಕೆ, ಕೈ ಜೋಡಿಸಿದ ಎಲ್ಲರಿಗೂ ಹಾಗೂ ವಿಶೇಷವಾಗಿ ಬೆಂಗಳೂರಿನ ಜನತೆಗೆ ಅಭಿನಂದನೆ ತಿಳಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: Mysuru| ಬಿಜೆಪಿಯಿಂದ ಸಿಎಂ ವಿರುದ್ಧ ‘ಗೋ ಬ್ಯಾಕ್’ ಚಳುವಳಿ- ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

ದೇಶದಲ್ಲೇ ಹೆಚ್ಚು ಪ್ರಯಾಣಿಕರ ಸಂಚಾರ:
ದೆಹಲಿ, ಮುಂಬೈ ಸೇರಿದಂತೆ ದೇಶದ ಇತರೆಡೆಗಳಲ್ಲಿ ಇರುವ ಮೆಟ್ರೋಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರಿಗಿಂತ ಬೆಂಗಳೂರಿನಲ್ಲಿರುವ 76.95 ಕಿಮೀ ಉದ್ದದ ಮೆಟ್ರೋ ಮಾರ್ಗದಲ್ಲಿ ಹೆಚ್ಚು ಪ್ರಯಾಣಿಕರು ಪ್ರತಿನಿತ್ಯ ಸಂಚರಿಸುತ್ತಿದ್ದಾರೆ. ನಮ್ಮ ಮೆಟ್ರೋಯಿಂದ ಬೆಂಗಳೂರಿನ ನಾಗರಿಕರಿಗೆ ಉತ್ತಮ ಸೇವೆ ದೊರೆಯುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಹೇಳಿದರು.

TAGGED:bengaluruDK ShivakumarMetro Trainnamma metroಡಿ.ಕೆ.ಶಿವಕುಮಾರ್ನಮ್ಮ ಮೆಟ್ರೋಬೆಂಗಳೂರುಮೆಟ್ರೋ ರೈಲು
Share This Article
Facebook Whatsapp Whatsapp Telegram

Cinema Updates

dhanush 1 1
ಎಪಿಜೆ ಅಬ್ದುಲ್ ಕಲಾಂ ಬಯೋಪಿಕ್‌ನಲ್ಲಿ ಧನುಷ್
4 minutes ago
aishwarya rai
ಕಾನ್ 2025: ಸಿಂಧೂರ ಹಣೆಗಿಟ್ಟು ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ
43 minutes ago
Madenuru Manu
Exclusive: ಕಾಮಿಡಿ ಕಿಲಾಡಿ ಸ್ಟಾರ್‌, ನಟ ಮಡೆನೂರು ಮನು ವಿರುದ್ಧ ರೇಪ್‌ ಕೇಸ್‌
53 minutes ago
yash mother pushpa 1
ಮೊದಲ ಸಿನಿಮಾ ರಿಲೀಸ್‌ಗೂ ಮುನ್ನವೇ 2ನೇ ಪ್ರಾಜೆಕ್ಟ್ ಬಗ್ಗೆ ಯಶ್ ತಾಯಿ ಗುಡ್ ನ್ಯೂಸ್
2 hours ago

You Might Also Like

pramoda devi wadiyar
Court

ರಾಜ್ಯ ಸರ್ಕಾರಕ್ಕೆ ಹಿನ್ನಡೆ – ರಾಜಮನೆತನಕ್ಕೆ 3,400 ಕೋಟಿಯ ಟಿಡಿಆರ್ ನೀಡಲು ಸುಪ್ರೀಂ ಆದೇಶ

Public TV
By Public TV
15 minutes ago
Alok Kumar ADGP
Bengaluru City

ಕೊನೆ ಕ್ಷಣದಲ್ಲಿ ಡಿಜಿಪಿ ಪ್ರಮೋಷನ್‌ಗೆ ತಡೆ – ಅಲೋಕ್ ಕುಮಾರ್‌ಗೆ ಇಲಾಖೆಯಲ್ಲೇ ಪಿತೂರಿ?

Public TV
By Public TV
16 minutes ago
DK Shivakumar 5
Bengaluru City

ರನ್ಯಾ ಮದುವೆಗೆ ಪರಮೇಶ್ವರ್‌ 20 ಲಕ್ಷ ಗಿಫ್ಟ್‌ ಕೊಟ್ಟಿರಬಹುದು: ಡಿಕೆಶಿ

Public TV
By Public TV
20 minutes ago
Hassan Bride Exam
Districts

ಮದುವೆ ಮಂಟಪದಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಎಕ್ಸಾಂ ಬರೆದ ನವವಧು

Public TV
By Public TV
37 minutes ago
Hassan Cab driver dies after collapsing due to heart attack in Bengaluru
Bengaluru City

ಬೆಂಗಳೂರು | ನಿಂತಲ್ಲೇ ಹೃದಯಾಘಾತ – ಕುಸಿದುಬಿದ್ದು ಕ್ಯಾಬ್‌ ಚಾಲಕ ಸಾವು

Public TV
By Public TV
54 minutes ago
jyoti malhotra priyanka senapati
Latest

ಜ್ಯೋತಿಗೆ ಒಡಿಶಾ ಲಿಂಕ್ – ‘ಪಾಕ್‌ನಲ್ಲಿ ಒಡಿಶಾ ಹುಡುಗಿ’ ವೀಡಿಯೋ ಮಾಡಿದ್ದ ಯೂಟ್ಯೂಬರ್ ವಿಚಾರಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?