Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಶಿವಲಿಂಗೇಗೌಡ್ರು ನಮ್ಮನೆಗೆ, ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ: ಡಿ.ಕೆ ಶಿವಕುಮಾರ್

Public TV
Last updated: July 26, 2025 4:39 pm
Public TV
Share
2 Min Read
DK Shivakumar SHIVALINGEGOWDA
SHARE

– ಬಿಜೆಪಿ, ಜೆಡಿಎಸ್ ಎರಡಲ್ಲ 4 ಸೇರಿದ್ರೂ 2028ಕ್ಕೆ ನಮ್ಮದೇ ಸರ್ಕಾರ – ಡಿಕೆಶಿ ಸವಾಲ್

ಹಾಸನ: ಶಾಸಕ ಶಿವಲಿಂಗೇಗೌಡರು (Shivalinge Gowda) ಕನಕಪುರ ಕ್ಷೇತ್ರಕ್ಕಿಂತ ಅರಸೀಕೆರೆಗೆ (Arsikere) ಹೆಚ್ಚು ಕೆಲಸ ಮಾಡಿದ್ದಾರೆ. ಅವರ ಕಾಟ ನಮಗೆ ಜಾಸ್ತಿ. ಅಭಿವೃದ್ಧಿ ಕೆಲಸಗಳಿಗಾಗಿ ನಮ್ಮನೆಗೆ, ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದರು.

ಅರಸೀಕೆರೆಯಲ್ಲಿ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ವೇಳೆ, ಇಲ್ಲಿಗೆ ನಾವು ಬರಬೇಕಾದರೆ ಸುಮ್ಮನೆ ಬರಲಿಲ್ಲ. ಇಡೀ ರಾಜ್ಯದಲ್ಲಿ 136 ಸೀಟು ಗೆದ್ದಾಗ, ಹಾಸನದಲ್ಲಿ ಒಬ್ಬರು ಶಾಸಕರು, ಒಬ್ಬರು ಎಂಪಿ ಗೆಲ್ಲಿಸಿ ಶಕ್ತಿ ತಂದಿದ್ದೀರಿ. ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇವೆ ಎಂದರು. ಇದನ್ನೂ ಓದಿ: ನಾವು ಬಿಜೆಪಿಯವರಿಗಿಂತ ಜಾಸ್ತಿ ಕೆಲಸ ಮಾಡಿದ್ದೇವೆ – ಪುತ್ರನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಹಿಂದೆ ಅರಸೀಕೆರೆಗೆ ಮಲತಾಯಿ ಧೋರಣೆ ಮಾಡಲಾಗಿತ್ತು. ನಾವು ನಾಲ್ಕು ಋಣಗಳನ್ನು ತೀರಿಸಬೇಕು. ತಂದೆ-ತಾಯಿ, ದೇವರ, ಗುರು ಮತ್ತು ಸಮಾಜದ್ದು. ಈಗ ಇಲ್ಲಿ ನೀರಿನ ಬವಣೆಯನ್ನು ಶಿವಲಿಂಗೇಗೌಡರು ನಿವಾರಣೆ ಮಾಡಿದ್ದಾರೆ. ಇಂತಹ ಶಾಸಕರು ಎಲ್ಲಾ ಕ್ಷೇತ್ರಗಳಲ್ಲಿ ಇದ್ದರೆ 138 ಕ್ಕಿಂತ ಹೆಚ್ಚು ಸೀಟು ಗೆಲ್ಲುತ್ತೇವೆ.

ಅರಸೀಕೆರೆಯಲ್ಲಿ ಅಭಿವೃದ್ಧಿಯ ಮಹಾ ಪರ್ವ!

ಇಂದು ಅರಸೀಕೆರೆಯ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾವೇಶದಲ್ಲಿ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರೊಂದಿಗೆ ಪಾಲ್ಗೊಂಡೆನು. pic.twitter.com/oXDeAp2z1x

— DK Shivakumar (@DKShivakumar) July 26, 2025

ಯೋಗಿ ಎಂದು ಕರೆಸಿಕೊಳ್ಳುವ ಮುನ್ನ ಉಪಯೋಗಿ ಎನ್ನಿಸಿಕೊಳ್ಳಬೇಕು. ನನಗೆ ಬಹಳ ಸಂತೋಷ ಆಗುತ್ತಿದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ಜಿಲ್ಲೆಯಲ್ಲಿ ಒಬ್ಬರೇ ಶಾಸಕರು ಗೆದ್ದಿರಬಹುದು. ಮುಂದಿನ ವಿಧಾಸನಭೆಯಲ್ಲಿ ಹಾಸನ ಜಿಲ್ಲೆಯಲ್ಲಿ ಏಳಕ್ಕೆ ಏಳು ಸ್ಥಾನ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಆಗ್ರಹ – ಶಿವಲಿಂಗೇಗೌಡ ಬೆಂಬಲಿಗರ ವಿರುದ್ಧ ವೇದಿಕೆಯಲ್ಲೇ ಸಿಎಂ ಗರಂ

ನಾವು ಹೋದ ಮೇಲೂ ಕೆಲಸ ಶಾಶ್ವತವಾಗಿರಬೇಕು. ಇಡೀ ದೇಶಕ್ಕೆ ಮಾದರಿಯಾದ ಐದು ಗ್ಯಾರೆಂಟಿ ಕೊಟ್ಟಿದ್ದೇವೆ. ಆದರೆ ಬಿಜೆಪಿಯವರು ಭಾವನೆಗಳ ಮೇಲೆ ರಾಜಕಾರಣ ಮಾಡ್ತಿದ್ದಾರೆ. ಜಾತಿ, ಧರ್ಮ, ದೇವರ ಮೇಲೆ ರಾಜಕಾರಣ ಮಾಡ್ತಿದ್ದಾರೆ. ನಮಗೆ ದೇವರು ಇಲ್ವಾ? ನಮಗೆ ದೇವರ ಮೇಲೆ ನಂಬಿಕೆ ಇಲ್ವಾ? ನಾವೆಲ್ಲ ಸಿದ್ದರಾಮಯ್ಯ, ಶಿವಲಿಂಗೇಗೌಡ, ಡಿ.ಕೆ.ಶಿವಕುಮಾರ್ ಅಂಥ ಹೆಸರು ಇಟ್ಟುಕೊಂಡಿಲ್ವಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಎಲ್ಲಾ ಧರ್ಮಗಳನ್ನು ಕಾಪಾಡಲು ಐದು ಗ್ಯಾರೆಂಟಿ ರೂಪಿಸಿದೆವು ಎಂದು ಗ್ಯಾರಂಟಿ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಯಡಿಯೂರಪ್ಪ, ಬೊಮ್ಮಯಿ, ಅಶೋಕ್‍ಗೆ ಕೇಳ್ತಿದ್ದೀನಿ, ಜೆಡಿಎಸ್‍ನವರಿಗೆ ನಾನು ಕೇಳಲ್ಲ. ಇಂತಹ ಒಂದು ಸಣ್ಣ ಕೆಲಸ ಮಾಡಿದ್ದೀರಾ? ನಿಮ್ಮ ಡಬಲ್ ಇಂಜಿನ್ ಅಧಿಕಾರ ಇತ್ತು. ಈಗ ಬಿಜೆಪಿ-ಜೆಡಿಎಸ್ ಇಬ್ಬರು ಸೇಕೊರ್ಂಡಿದ್ದಾರೆ. ಇಬ್ಬರಲ್ಲ ನಾಲ್ಕು ಜನ ಸೇರ್ಕೊಳಿ. 2028ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮದೇ ಸರ್ಕಾರ ಬರೆದಿಟ್ಕೊಳ್ಳಿ ಎಂದು ಸವಾಲು ಹಾಕಿದ್ದಾರೆ.

ಕುಮಾರಸ್ವಾಮಿ ಸುಪುತ್ರ, ಬೊಮ್ಮಾಯಿ ಸುಪುತ್ರ ಬೈ ಎಲೆಕ್ಷನ್‍ನಲ್ಲಿ ಸ್ಪಧಿಸಿದ್ದರು. ಡಬಲ್ ಇಂಜಿನ್ ಸರ್ಕಾರ ಇತ್ತು ಏಕೆ ಗೆಲ್ಲಲು ಆಗಲಿಲ್ಲ? ಚನ್ನಪಟ್ಟಣದಲ್ಲಿ ಏಕೆ ಗೆಲ್ಲುಲು ಆಗಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

TAGGED:congressd k shivakumarpoliticsShivalinge Gowdasiddaramaiahಡಿ.ಕೆ.ಶಿವಕುಮಾರ್
Share This Article
Facebook Whatsapp Whatsapp Telegram

Cinema Updates

rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories
just married
ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

AI ಚಿತ್ರ
Bengaluru City

ಪ್ರತಿ ಬುಧವಾರ ವರ್ಕ್ ಫ್ರಂ ಹೋಂ ಕೊಡಿ: ಬೆಂಗಳೂರಿನ ಐಟಿ ಕಂಪನಿಗಳಿಗೆ ಟ್ರಾಫಿಕ್‌ ಪೊಲೀಸರ ಸಲಹೆ

Public TV
By Public TV
3 minutes ago
ANEKAL CRIME
Bengaluru Rural

ಬ್ರೇಕಪ್‌ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಕೇವಲ 2 ಸಾವಿರಕ್ಕಾಗಿ ಬಿತ್ತು ಹೆಣ!

Public TV
By Public TV
37 minutes ago
AB de Villiers 2
Cricket

ಈಗಲೂ ಅದೇ ಖದರ್‌ – 15 ಫೋರ್‌, 8 ಸಿಕ್ಸ್‌, ಆಸೀಸ್‌ ವಿರುದ್ಧ ತೂಫಾನ್‌ ಶತಕ ಸಿಡಿಸಿದ ಎಬಿಡಿ

Public TV
By Public TV
50 minutes ago
HAMPI
Bellary

ತುಂಗಭದ್ರಾ ಜಲಾಶಯದಿಂದ 96 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಹಂಪಿ ಸ್ಮಾರಕಗಳು ಮುಳುಗಡೆ

Public TV
By Public TV
1 hour ago
AYODHYA
Bengaluru City

ಕರ್ನಾಟಕ ಯಾತ್ರಿಗಳಿಗಾಗಿ ಇಡೀ ರೈಲು ಬುಕ್‌ – 8 ದಿನ ಅಯೋಧ್ಯೆ, ಕಾಶಿ ಪ್ರವಾಸ

Public TV
By Public TV
1 hour ago
Chitradurga HIV
Chitradurga

ಚಿತ್ರದುರ್ಗ | ಸಹೋದರನಿಗೆ HIV – ಕುಟುಂಬದ ಮರ್ಯಾದೆಗೆ ಅಂಜಿ ತಮ್ಮನನ್ನೇ ಕೊಲೆಗೈದ ಅಕ್ಕ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?