ಬೆಂಗಳೂರು: ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿ ಭಾರತದ ವಿಜಯ ಪತಾಕೆ ಹಾರಿಸಿದ್ದ ಹಿಮಾದಾಸ್ ಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಬಹುಮಾನ ನೀಡಿದ್ದಾರೆ.
ಸಿದ್ದಾರ್ಥ್ ಅಕಾಡೆಮಿ ವತಿಯಿಂದ ಹಿಮಾದಾಸ್ ಗೆ 10 ಲಕ್ಷ ಬಹುಮಾನ ನೀಡಿದ್ದಾರೆ. ಈ ಹಣವನ್ನು ಹಿಮಾದಾಸ್ ಗೆ ನೀಡಲು ನನಗೆ ಹೆಮ್ಮೆಯಾಗುತ್ತಿದೆ ಅಂತ ಡಿಸಿಎಂ ಜಿ ಪರಮೇಶ್ವರ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್ ನಲ್ಲಿ ಚಿನ್ನ ಪದಕ ತಂದುಕೊಟ್ಟ ಹಿಮಾ ದಾಸ್ ಚಿರತೆಯ ಓಟದ ವಿಡಿಯೋ ನೋಡಿ
The Grit and Perseverance displayed by @HimaDas8 is inspirational for thousands of aspiring sportspersons across India.
As a token of our appreciation, it is my pleasure to award you with a cash prize money of ₹10 lakh on behalf of Sri Siddhartha Academy of Higher Education.
— Dr. G Parameshwara (@DrParameshwara) July 14, 2018
`ತಮ್ಮ ಪರಿಶ್ರಮ, ಸಾಧನೆಯಿಂದ ಭಾರತದಾದ್ಯಂತ ಸಾವಿರಾರು ಕ್ರೀಡಾಪಟುಗಳಿಗೆ ಹಿಮಾದಾಸ್ ಸ್ಫೂರ್ತಿಯಾಗಿದ್ದಾರೆ. ಅಂತಹವರನ್ನು ನಾನು ಅಭಿನಂದಿಸುತ್ತೇನೆ. ಜೊತೆಗೆ ಸಿದ್ದಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಪರವಾಗಿ 10 ಲಕ್ಷ ರೂ. ಬಹುಮಾನ ಕೊಡುತ್ತಿರುವುದು ನನಗೆ ಸಂತಸವಾಗಿದೆ” ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಯಿಂದ ಹಿಮಾದಾಸ್ ಗೆ ಅಭಿನಂದನೆ
ಗುರುವಾರ ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ ಹಿಮದಾಸ್ ಚಿನ್ನದ ಪದಕ ಗೆದ್ದು ದೇಶದ ಗೌರವ ಹೆಚ್ಚಿಸಿದ್ದರು. 18 ವರ್ಷದ ಹಿಮಾ ದಾಸ್ 400 ಮೀಟರ್ ಓಟವನ್ನು 51.46 ಸೆಕೆಂಡ್ ಗಳಲ್ಲಿ ಪೂರ್ಣಗೊಳಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಹಿಮಾ ದಾಸ್ ಅವರು ಮೂಲತಃ ಅಸ್ಸಾಂನ ನಾಗೋನ್ ಜಿಲ್ಲೆಯವರಾಗಿದ್ದು, ಕೃಷಿ ಹಿನ್ನೆಲೆ ಹೊಂದಿರುವ ಕುಟುಂಬದಲ್ಲಿ ಜನಿಸಿದ್ದಾರೆ. ಇದೀಗ ವಿಶ್ವದಾಖಲೆ ಮರೆದು ಮನೆಮಾತಾಗಿದ್ದಾರೆ.
ಐಎಎಎಪ್ ವರ್ಲ್ಡ್ ಅಂಡರ್ 20 ಅಥ್ಲೆಟಿಕ್ಸ್ ನಲ್ಲಿ ಉತ್ತಮ ಸಾಧನೆಗೈದು ಭಾರತದ ಹೆಮ್ಮೆಯ ಕ್ರೀಡಾಪಟು ಹಿಮಾದಾಸ್ ಅವರಿಗೆ, ಉಪ ಮುಖ್ಯಮಂತ್ರಿ @DrParameshwara ಅವರು, ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವತಿಯಿಂದ 10ಲಕ್ಷ ರೂಪಾಯಿಗಳ ನಗದು ಬಹುಮಾನ ನೀಡಿರುವುದನ್ನು ಅಭಿನಂದಿಸಿ, ಶುಭ ಹಾರೈಸುತ್ತೇನೆ.
— CM of Karnataka (@CMofKarnataka) July 15, 2018