ತುಮಕೂರು: ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಝೀರೋ ಟ್ರಾಫಿಕ್ ನಲ್ಲಿ ಓಡಾಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣರಾಗಿದ್ದರು. ಆದರೆ ಈಗ ಜಿ.ಪರಮೇಶ್ವರ್ ದಿನದಿಂದ ದಿನಕ್ಕೆ ತವರು ಜಿಲ್ಲೆ ತುಮಕೂರಿನಲ್ಲಿ ಸರಳತೆ ಮೆರೆಯುತ್ತಿದ್ದಾರೆ.
ಡಿಸಿಎಂ ಜಿ.ಪರಮೇಶ್ವರ್ ಅವರು ಸ್ವಕ್ಷೇತ್ರ ಕೊರಟಗೆರೆ ಪಟ್ಟಣದ ಬೀದಿ ಬದಿಯ ಅಂಗಡಿಯಲ್ಲಿ ಚಹಾ ಕುಡಿದು ಸರಳತೆ ಮೆರೆದಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದ ಬಳಿ ಇರುವ ಲಕ್ಷ್ಮಿ ಟೀ ಸ್ಟಾಲ್ ನಲ್ಲಿ ಟೀ ಕುಡಿದಿದ್ದಾರೆ.
ನೂರಾರು ಜನ ಬೆಂಬಲಿಗರ ಮಧ್ಯೆ ನಿಂತುಕೊಂಡೇ ಚಹಾ ಕುಡಿದಿದ್ದಾರೆ. ವೈಟ್ ಕಾಲರ್ ರಾಜಕಾರಣಿ ಎಂಬ ಹಣೆಪಟ್ಟಿಯಿಂದ ಮುಕ್ತರಾಗುವ ನಿಟ್ಟಿನಲ್ಲಿ ಜಿ.ಪರಮೇಶ್ವರ್ ಇತ್ತೀಚೆಗೆ ಆದಷ್ಟು ಸಿಂಪಲ್ ಆಗುತ್ತಿರುವುದು ಗಮನಾರ್ಹವಾಗಿದೆ. ಈ ಹಿಂದೆ ಹಲವು ಬಾರಿ ಗ್ರಾಮ ವಾಸ್ತವ್ಯ ಮಾಡಿ ಸ್ಲಂಗಳಲ್ಲಿ ವಾಸ ಇದ್ದು ಗಮನ ಸೆಳೆದಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv