ಕೊಪ್ಪಳ: ಜಿಲ್ಲೆಯ ಶಾಸಕರು, ಡಿಸಿಎಂ ಲಕ್ಷಣ ಸವದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೊಪ್ಪಳದಲ್ಲಿ ಟ್ರಾಫಿಕ್ ನಿಯಮವನ್ನು ಉಲ್ಲಂಘಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್ ಹಾಗೂ ಡಿಸಿಎಂ ಲಕ್ಷಣ ಸವದಿ ಅವರು ಸೀಟ್ ಬೆಲ್ಟ್ ಧರಿಸದೆ ಕಾರಿನಲ್ಲಿ ಸಂಚಾರ ಮಾಡಿದ್ದಾರೆ. ಅಲ್ಲದೆ ಹಿಂದೆ ಮುಂದೆ ಪೊಲೀಸ್ ವಾಹನಗಳಿದ್ದರೂ ನಿಯಮ ಉಲ್ಲಂಘನೆಗೆ ದಂಡ ವಿಧಿಸಿಲ್ಲ.
ಸೀಟ್ ಬೆಲ್ಟ್ ಧರಿಸದಿದ್ದರೆ ಟ್ರಾಫಿಕ್ ನಿಯಮದ ಪ್ರಕಾರ ಒಂದು ಸಾವಿರ ದಂಡ ವಿಧಿಸಬೇಕಾಗುತ್ತದೆ. ಆದರೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದರು ಬಿಜೆಪಿ ನಾಯಕರು ದಂಡ ಕಟ್ಟಲಿಲ್ಲ. ಇದನ್ನು ನೋಡಿದ ಸಾರ್ವಜನಿಕರು ಜನ ಸಾಮಾನ್ಯರಿಗೆ ಒಂದು ನ್ಯಾಯ? ಬಿಜೆಪಿ ನಾಯಕರಿಗೆ ಒಂದು ನ್ಯಾಯಾನಾ? ಎಂದು ಪ್ರಶ್ನಿಸುತ್ತಿದ್ದಾರೆ.
ಸೀಟ್ ಬೆಲ್ಟ್ ಧರಿಸದ ಡಿಸಿಎಂ ಲಕ್ಷಣ ಸವದಿ ಅವರು ಕಾರ್ ಇಳಿಯುತ್ತಿದ್ದಂತೆ ಎಸ್ಪಿ ಹಾಗೂ ಡಿಸಿ ಹೂಗುಚ್ಚ ನೀಡಿ ಬರ ಮಾಡಿಕೊಂಡಿದ್ದಾರೆ.