ಮೈತ್ರಿ ಸರ್ಕಾರ 4 ವರ್ಷ ಮುಂದುವರಿಯಲಿದೆ- ಡಿಸಿಎಂ

Public TV
1 Min Read
param 1

ಬೆಂಗಳೂರು: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ 4 ವರ್ಷವೂ ಮುಂದುವರಿಯಲಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಹೀನಾಯ ಸೋಲಿನ ಬಳಿಕ ನಗರದಲ್ಲಿ ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ ನಡೆಸಿ ಬಳಿಕ ಮಾತನಾಡಿದ ಪರಮೇಶ್ವರ್, ಎಲ್ಲ ಶಾಸಕರು ನಮ್ಮ ಜೊತೆಯಲ್ಲಿದ್ದಾರೆ. ಸರ್ಕಾರಕ್ಕೆ ಯಾವುದೇ ಅಭದ್ರತೆ ಇಲ್ಲ ಹೇಳಿದ್ದಾರೆ.

param 1 1

ರಾಷ್ಟ್ರ ಸರ್ಕಾರಕ್ಕೆ ಜನಾದೇಶ ಇದೆ. ದೇಶದ ಆಡಳಿತವನ್ನು ನಡೆಸಲು ಬಿಜೆಪಿಯವರಿಗೆ ಜನಾದೇಶ ಸಿಕ್ಕಿದೆ. ಅವರು ನಡೆಸಿಕೊಳ್ಳುತ್ತಾರೆ. ರಾಜ್ಯ ಸರ್ಕಾರಕ್ಕೆ ಈಗಾಗಲೇ ಕಳೆದ ವರ್ಷ ಜನಾದೇಶ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷದಿಂದ ನಾವು ಸಮ್ಮಿಶ್ರ ಸರ್ಕಾರವನ್ನು ನಡೆಸುತ್ತಿದ್ದೇವೆ ಎಂದರು.

ರಾಜ್ಯ ಸರ್ಕಾರದಲ್ಲಿ ನಮಗೆ ಸಿಕ್ಕಿರುವ ಜನಾದೇಶದ ಆಧಾರದ ಮೇಲೆ ಸರ್ಕಾರವನ್ನು ಮುಂದುವರಿಸುತ್ತೇವೆ. 4 ವರ್ಷ ರಾಜ್ಯದ ಜನತೆಗೆ ಕೊಟ್ಟಿರುವ ಒಳ್ಳೆಯ ಆಡಳಿತದ ಭರವಸೆಯನ್ನು ಈಡೇರಿಸುವತ್ತಾ ಮುಂದುವರಿಸುತ್ತೇವೆ. ಅದೇ ರೀತಿ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ಕೊಡುತ್ತೇವೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *