ಬಳ್ಳಾರಿ: ಡಿಸಿಎಂ ಪರಮೇಶ್ವರ್ ಅವರು ಸಣ್ಣತನದ ಮನುಷ್ಯ ಅಲ್ಲ. ಅವರು ಬಹಳ ವಿಶಾಲ ಆಲೋಚನೆ ಹೊಂದಿರುವ ವ್ಯಕ್ತಿ ಎಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಡಿಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.
ಡಿಸಿಎಂ ಪರಮೇಶ್ವರ್ ಅವರು ತೆರಳುತ್ತಿದ್ದ ದಾರಿಯಲ್ಲಿ ಬಿಜೆಪಿ ಬಾವುಟ ಹಾಕಿದವರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಅಧಿಕಾರಿಗಳು ನೋಟಿಸ್ ಕೊಟ್ಟಿರಬಹುದು. ಅದನ್ನು ಡಿಸಿಎಂ ಮೇಲೆ ಹಾಕುವುದು ಸರಿಯಲ್ಲ. ಡಿಸಿಎಂ ಸಣ್ಣತನದ ಮನುಷ್ಯ ಅಲ್ಲ. ಅವರು ಬಹಳ ವಿಶಾಲ ಆಲೋಚನೆ ಹೊಂದಿರುವ ವ್ಯಕ್ತಿ. ಈ ಬಗ್ಗೆ ಹೆಚ್ಚು ವಿಚಾರ ನನಗೆ ಗೊತ್ತಿಲ್ಲ ಎಂದು ಡಿಸಿಎಂ ಅವರನ್ನು ಸಮರ್ಥಿಸಿಕೊಂಡರು. ಇದನ್ನೂ ಓದಿ: ಡಿಸಿಎಂ ಬರುವ ಮಾರ್ಗದಲ್ಲಿ ಬಿಜೆಪಿ ಬಾವುಟ ಹಾರುವಂತಿಲ್ಲ
ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಮಾತೇ ಇಲ್ಲ. ಈ ಸರ್ಕಾರ ಭದ್ರವಾಗಿ ಇರುತ್ತದೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಸಿಎಂ ಆಗಿ ಹೆಚ್.ಡಿ ಕುಮಾರಸ್ವಾಮಿ ಅವರೇ ಇರುತ್ತಾರೆ. ಡಿಸಿಎಂ ಪರಮೇಶ್ವರ್ ಅವರೇ ಆಗಿರುತ್ತಾರೆ ಎಂದರು. ನಮ್ಮ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಹಾಗೂ ಹಿರಿಯರ ನೇತೃತ್ವದಲ್ಲಿ ಈ ಸರ್ಕಾರ ಮುನ್ನಡೆಯುತ್ತದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ವರಿಷ್ಠರಾದ ದೇವೇಗೌಡರ ಒಪ್ಪಂದದ ಮೇಲೆ ಮೈತ್ರಿ ಸರ್ಕಾರ ರಚನೆಯಾಗಿದೆ ಎಂದರು.
ದೇವೇಗೌಡರು ಹಾಗೂ ವೀರಪ್ಪ ಮೊಯ್ಲಿ ಹೇಳಿಕೆಗಳಿಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ನಾಯಕರೆಲ್ಲ ವಿರೋಧಿಗಳಲ್ಲ. ಆದರೆ ಅವರ ಸಿದ್ಧಾಂತಗಳಿಗೆ ವಿರೋಧವಿದೆ. ನಾವೆಲ್ಲ ಜೊತೆಯಾಗಿಯೇ ಇದ್ದೇವೆ. ನೀವು ನಮ್ಮನ್ನು ಬೇರೆ, ಬೇರೆ ಮಾಡಬೇಡಿ ಎಂದು ಕೊನೆಗೆ ಹಾಸ್ಯ ಚಟಾಕಿ ಹಾರಿಸಿದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]