Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಚಟುವಟಿಕೆ ಕೇಂದ್ರವಾಯ್ತು ಸಿಎಂ ನಿವಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ಚಟುವಟಿಕೆ ಕೇಂದ್ರವಾಯ್ತು ಸಿಎಂ ನಿವಾಸ

Bengaluru City

ಮತ್ತೆ ಚಟುವಟಿಕೆ ಕೇಂದ್ರವಾಯ್ತು ಸಿಎಂ ನಿವಾಸ

Public TV
Last updated: December 17, 2019 3:33 pm
Public TV
Share
2 Min Read
CM BSY
SHARE

– ಬಿಎಸ್‍ವೈ ಭೇಟಿ ಮಾಡುತ್ತಿರುವ ಸಚಿವಾಕಾಂಕ್ಷಿಗಳು

ಬೆಂಗಳೂರು: ಮೂರು ದಿನಗಳ ರೆಸ್ಟ್ ಬಳಿಕ ಮತ್ತೆ ಧವಳಗಿರಿ ಚಟುವಟಿಕೆಯ ಕೇಂದ್ರವಾಗಿದೆ. ಸಿಎಂ ಯಡಿಯೂರಪ್ಪ ನಿವಾಸ ಧವಳಗಿರಿ ನಿವಾಸಕ್ಕೆ ಮತ್ತೆ ಸಚಿವ ಸ್ಥಾನದ ಆಕಾಂಕ್ಷಿಗಳು ಧಾಂಗುಡಿ ಇಡುತ್ತಿದ್ದಾರೆ. ನಿನ್ನೆ ಬಿಜೆಪಿ ಸಂಘಟನಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಿಎಂ ಯಡಿಯೂರಪ್ಪ ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಸಿದರು. ಸಂಭಾವ್ಯ ಸಚಿವರ ಪಟ್ಟಿಯನ್ನು ಸಿದ್ಧಪಡಿಸಿ ದೆಹಲಿಗೆ ತರುವಂತೆ ಸಂತೋಷ್ ಸಿಎಂಗೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ಬೆನ್ನಲ್ಲೇ ಚುರುಕಾದ ಸಚಿವಾಕಾಂಕ್ಷಿ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಂದ ಮರಳಿ ಬೆಂಗಳೂರಿಗೆ ಬಂದು ಸಿಎಂ ಭೇಟಿ ಮಾಡುತ್ತಿದ್ದಾರೆ.

Renukacharya

ಇವತ್ತು ಬೆಳಗ್ಗೆಯಿಂದಲೂ ಸಿಎಂ ಅವರ ಧವಳಗಿರಿ ನಿವಾಸ ಚಟುವಟಿಕೆಯ ಕೇಂದ್ರಬಿಂದುವಾಗಿದೆ. ಬೆಳಗ್ಗೆ ಹಲವು ಸಚಿವಾಕಾಂಕ್ಷಿ ಶಾಸಕರು ಸಿಎಂ ಭೇಟಿ ಮಾಡಿ ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದಾರೆ. ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಇವತ್ತು ಬೆಳಗ್ಗೆಯೇ ಸಿಎಂ ಭೇಟಿ ಮಾಡಿದ್ರು. ಡಿಸಿಎಂ ಸ್ಥಾನ, ಸೋತವರಿಗೆ ಸಚಿವ ಸ್ಥಾನ, ಸಂಪುಟ ವಿಸ್ತರಣೆ ವಿಳಂಬ ಕುರಿತು ಸಿಎಂ ಜೊತೆ ರಮೇಶ್ ಜಾರಕಿಹೊಳಿ ಮಹತ್ವದ ಚರ್ಚೆ ನಡೆಸಿದರು. ಡಿಸಿಎಂ ಹುದ್ದೆಗಾಗಿ ಶ್ರೀರಾಮುಲು ಪಟ್ಟು ಹಿಡಿದಿರುವ ವಿಚಾರ ಕೂಡಾ ಚರ್ಚಿಸಿದ್ದು, ಆ ಸ್ಥಾನ ತಮಗೇ ಕೊಡಬೇಕೆಂದೂ ರಮೇಶ್ ಜಾರಕಿಹೊಳಿ ಸಿಎಂ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ತಮಗೆ ಜಲಸಂಪನ್ಮೂಲ ಖಾತೆ ಕೊಡಿ ಎಂದೂ ಸಿಎಂಗೆ ರಮೇಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ. ರಮೇಶ್ ಜಾರಕಿಹೊಳಿ ತೆರಳಿದ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಹ ಸಿಎಂ ಭೇಟಿ ಮಾಡಿ ಜಲಸಂಪನ್ಮೂಲ ಖಾತೆಗೆ ಬೇಡಿಕೆ ಇಟ್ಟರು ಎನ್ನಲಾಗಿದೆ. ಜಲಸಂಪನ್ಮೂಲ ಖಾತೆಗೆ ರಮೇಶ್ ಜಾರಕಿಹೊಳಿ ಮತ್ತು ಬಸವರಾಜ ಬೊಮ್ಮಾಯಿ ಇಬ್ಬರೂ ಪಟ್ಟು ಹಿಡಿದಿರುವುದು ಸಿಎಂಗೆ ಮತ್ತೊಂದು ತಲೆನೋವಾಗಿದೆ.

Srimanth Patil

ಇನ್ನು ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಕೂಡಾ ಸಿಎಂ ಭೇಟಿ ಮಾಡಿದ್ದು, ಸಚಿವ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಒತ್ತಾಯಿಸಿದರು ಎನ್ನಲಾಗಿದೆ. ಚುನಾವಣಾ ಪೂರ್ವದಲ್ಲಿ ರಾಮುಲು ಅವರಿಗೆ ಭರವಸೆ ಕೊಟ್ಟಂತೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಸೋಮಶೇಖರ್ ರೆಡ್ಡಿ ಆಗ್ರಹಿಸಿದ್ರು ಎನ್ನಲಾಗಿದೆ.

ಇನ್ನು ಹಿರಿಯ ಶಾಸಕ ಉಮೇಶ್ ಕತ್ತಿ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, ರೆಡ್ಡಿ ಲಿಂಗಾಯತ ಸಮುದಾಯದ ಎ.ಎಸ್.ಪಾಟೀಲ್ ನಡಹಳ್ಳಿ, ವೆಂಕಟರೆಡ್ಡಿ ಮುದ್ನಾಳ್, ದೊಡ್ಡನಗೌಡ ಪಾಟೀಲ್ ಸೇರಿ ಹಲವರು ಸಹ ಸಿಎಂ ಭೇಟಿ ಮಾಡಿ ಸಚಿವ ಸ್ಥಾನಕ್ಕೆ ಒತ್ತಾಯಿಸಿದ್ರು. ಸಂಭಾವ್ಯ ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸುವಂತೆ ಸಚಿವಾಕಾಂಕ್ಷಿಗಳು ಸಿಎಂ ಯಡಿಯೂರಪ್ಪಗೆ ಒತ್ರಾಯಿಸಿದ್ರು. ಈ ಮಧ್ಯೆ ಮರಾಠಾ ಕ್ಷತ್ರೀಯ ಸಮಯದಾಯದ ಮುಖಂಡರು ಸಹ ಸಿಎಂ ಭೇಟಿ ಮಾಡಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿದರು.

Basavaraja Bommai

ಇದೆಲ್ಲದರ ನಡುವೆ ಡಿಸಿಎಂ ಸ್ಥಾನ ಉಳಿಸಿಕೊಳ್ಳಲು ಲಕ್ಷ್ಮಣ ಸವದಿ ಹೋರಾಟ ಮುಂದುವರಿಸಿದ್ದಾರೆ. ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಜೊತೆ ಡಿಸಿಎಂ ಸ್ಥಾನ, ತಮ್ಮ ಭವಿಷ್ಯ ಕುರಿತು ಚರ್ಚಿಸಿ ಬಂದಿದ್ರು ಲಕ್ಷ್ಮಣ್ ಸವದಿ. ದೆಹಲಿಯಿಂದ ವಾಪಸಾದ ಬಳಿಕ ಇವತ್ತು ಡಿಸಿಎಂ ಲಕ್ಷ್ಮಣ್ ಸವದಿ ಸಿಎಂ ಭೇಟಿ ಮಾಡಿ ಚರ್ಚಿಸಿದರು. ಹೈಕಮಾಂಡ್ ನಾಯಕರ ಜೊತೆಗಿನ ಮಾತುಕತೆಯನ್ನೂ ಸವದಿ ಸಿಎಂ ಜೊತೆ ಹಂಚಿಕೊಂಡ್ರು ಎನ್ನಲಾಗಿದೆ.

ಕಳೆದ ವಾರಾಂತ್ಯದ ಎರಡು ದಿನ ಸಿಎಂ ಅವರ ಧವಳಗಿರಿ ನಿವಾಸದಲ್ಲಿ ಶಾಂತಿ ನೆಲೆಸಿತ್ತು. ಸಂಪುಟ ವಿಸ್ತರಣೆ ವಿಳಂಬ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳು ಕ್ಷೇತ್ರಗಳಿಗೆ ಮರಳಿದ್ರು. ಆದ್ರೆ ನಿನ್ನೆ ಬಿ ಎಲ್ ಸಂತೋಷ್ ಭೇಟಿ ಮತ್ತೆ ಆಕಾಂಕ್ಷಿಗಳಲ್ಲಿ ನಿರೀಕ್ಷೆ ಕೆದಕುವಂತೆ ಮಾಡಿದೆ.

TAGGED:bjpBL Santoshbs yeddyurappacabinet expansionPublic TVಪಬ್ಲಿಕ್ ಟಿವಿಬಿ.ಎಲ್ ಸಂತೋಷ್ಬಿ.ಎಸ್.ಯಡಿಯೂರಪ್ಪಬಿಜೆಪಿಸಂಪುಟ ವಿಸ್ತರಣೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

North Western Road Transport Corporation
Bagalkot

ಉಪಚುನಾವಣೆ | ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಲಿಖಿತ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

Public TV
By Public TV
13 minutes ago
dk shivakumar
Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
By Public TV
18 minutes ago
RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
36 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
2 hours ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?