Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಚಟುವಟಿಕೆ ಕೇಂದ್ರವಾಯ್ತು ಸಿಎಂ ನಿವಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ಚಟುವಟಿಕೆ ಕೇಂದ್ರವಾಯ್ತು ಸಿಎಂ ನಿವಾಸ

Bengaluru City

ಮತ್ತೆ ಚಟುವಟಿಕೆ ಕೇಂದ್ರವಾಯ್ತು ಸಿಎಂ ನಿವಾಸ

Public TV
Last updated: December 17, 2019 3:33 pm
Public TV
Share
2 Min Read
CM BSY
SHARE

– ಬಿಎಸ್‍ವೈ ಭೇಟಿ ಮಾಡುತ್ತಿರುವ ಸಚಿವಾಕಾಂಕ್ಷಿಗಳು

ಬೆಂಗಳೂರು: ಮೂರು ದಿನಗಳ ರೆಸ್ಟ್ ಬಳಿಕ ಮತ್ತೆ ಧವಳಗಿರಿ ಚಟುವಟಿಕೆಯ ಕೇಂದ್ರವಾಗಿದೆ. ಸಿಎಂ ಯಡಿಯೂರಪ್ಪ ನಿವಾಸ ಧವಳಗಿರಿ ನಿವಾಸಕ್ಕೆ ಮತ್ತೆ ಸಚಿವ ಸ್ಥಾನದ ಆಕಾಂಕ್ಷಿಗಳು ಧಾಂಗುಡಿ ಇಡುತ್ತಿದ್ದಾರೆ. ನಿನ್ನೆ ಬಿಜೆಪಿ ಸಂಘಟನಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಿಎಂ ಯಡಿಯೂರಪ್ಪ ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಸಿದರು. ಸಂಭಾವ್ಯ ಸಚಿವರ ಪಟ್ಟಿಯನ್ನು ಸಿದ್ಧಪಡಿಸಿ ದೆಹಲಿಗೆ ತರುವಂತೆ ಸಂತೋಷ್ ಸಿಎಂಗೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ಬೆನ್ನಲ್ಲೇ ಚುರುಕಾದ ಸಚಿವಾಕಾಂಕ್ಷಿ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಂದ ಮರಳಿ ಬೆಂಗಳೂರಿಗೆ ಬಂದು ಸಿಎಂ ಭೇಟಿ ಮಾಡುತ್ತಿದ್ದಾರೆ.

Renukacharya

ಇವತ್ತು ಬೆಳಗ್ಗೆಯಿಂದಲೂ ಸಿಎಂ ಅವರ ಧವಳಗಿರಿ ನಿವಾಸ ಚಟುವಟಿಕೆಯ ಕೇಂದ್ರಬಿಂದುವಾಗಿದೆ. ಬೆಳಗ್ಗೆ ಹಲವು ಸಚಿವಾಕಾಂಕ್ಷಿ ಶಾಸಕರು ಸಿಎಂ ಭೇಟಿ ಮಾಡಿ ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದಾರೆ. ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಇವತ್ತು ಬೆಳಗ್ಗೆಯೇ ಸಿಎಂ ಭೇಟಿ ಮಾಡಿದ್ರು. ಡಿಸಿಎಂ ಸ್ಥಾನ, ಸೋತವರಿಗೆ ಸಚಿವ ಸ್ಥಾನ, ಸಂಪುಟ ವಿಸ್ತರಣೆ ವಿಳಂಬ ಕುರಿತು ಸಿಎಂ ಜೊತೆ ರಮೇಶ್ ಜಾರಕಿಹೊಳಿ ಮಹತ್ವದ ಚರ್ಚೆ ನಡೆಸಿದರು. ಡಿಸಿಎಂ ಹುದ್ದೆಗಾಗಿ ಶ್ರೀರಾಮುಲು ಪಟ್ಟು ಹಿಡಿದಿರುವ ವಿಚಾರ ಕೂಡಾ ಚರ್ಚಿಸಿದ್ದು, ಆ ಸ್ಥಾನ ತಮಗೇ ಕೊಡಬೇಕೆಂದೂ ರಮೇಶ್ ಜಾರಕಿಹೊಳಿ ಸಿಎಂ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ತಮಗೆ ಜಲಸಂಪನ್ಮೂಲ ಖಾತೆ ಕೊಡಿ ಎಂದೂ ಸಿಎಂಗೆ ರಮೇಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ. ರಮೇಶ್ ಜಾರಕಿಹೊಳಿ ತೆರಳಿದ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಹ ಸಿಎಂ ಭೇಟಿ ಮಾಡಿ ಜಲಸಂಪನ್ಮೂಲ ಖಾತೆಗೆ ಬೇಡಿಕೆ ಇಟ್ಟರು ಎನ್ನಲಾಗಿದೆ. ಜಲಸಂಪನ್ಮೂಲ ಖಾತೆಗೆ ರಮೇಶ್ ಜಾರಕಿಹೊಳಿ ಮತ್ತು ಬಸವರಾಜ ಬೊಮ್ಮಾಯಿ ಇಬ್ಬರೂ ಪಟ್ಟು ಹಿಡಿದಿರುವುದು ಸಿಎಂಗೆ ಮತ್ತೊಂದು ತಲೆನೋವಾಗಿದೆ.

Srimanth Patil

ಇನ್ನು ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಕೂಡಾ ಸಿಎಂ ಭೇಟಿ ಮಾಡಿದ್ದು, ಸಚಿವ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಒತ್ತಾಯಿಸಿದರು ಎನ್ನಲಾಗಿದೆ. ಚುನಾವಣಾ ಪೂರ್ವದಲ್ಲಿ ರಾಮುಲು ಅವರಿಗೆ ಭರವಸೆ ಕೊಟ್ಟಂತೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಸೋಮಶೇಖರ್ ರೆಡ್ಡಿ ಆಗ್ರಹಿಸಿದ್ರು ಎನ್ನಲಾಗಿದೆ.

ಇನ್ನು ಹಿರಿಯ ಶಾಸಕ ಉಮೇಶ್ ಕತ್ತಿ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, ರೆಡ್ಡಿ ಲಿಂಗಾಯತ ಸಮುದಾಯದ ಎ.ಎಸ್.ಪಾಟೀಲ್ ನಡಹಳ್ಳಿ, ವೆಂಕಟರೆಡ್ಡಿ ಮುದ್ನಾಳ್, ದೊಡ್ಡನಗೌಡ ಪಾಟೀಲ್ ಸೇರಿ ಹಲವರು ಸಹ ಸಿಎಂ ಭೇಟಿ ಮಾಡಿ ಸಚಿವ ಸ್ಥಾನಕ್ಕೆ ಒತ್ತಾಯಿಸಿದ್ರು. ಸಂಭಾವ್ಯ ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸುವಂತೆ ಸಚಿವಾಕಾಂಕ್ಷಿಗಳು ಸಿಎಂ ಯಡಿಯೂರಪ್ಪಗೆ ಒತ್ರಾಯಿಸಿದ್ರು. ಈ ಮಧ್ಯೆ ಮರಾಠಾ ಕ್ಷತ್ರೀಯ ಸಮಯದಾಯದ ಮುಖಂಡರು ಸಹ ಸಿಎಂ ಭೇಟಿ ಮಾಡಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿದರು.

Basavaraja Bommai

ಇದೆಲ್ಲದರ ನಡುವೆ ಡಿಸಿಎಂ ಸ್ಥಾನ ಉಳಿಸಿಕೊಳ್ಳಲು ಲಕ್ಷ್ಮಣ ಸವದಿ ಹೋರಾಟ ಮುಂದುವರಿಸಿದ್ದಾರೆ. ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಜೊತೆ ಡಿಸಿಎಂ ಸ್ಥಾನ, ತಮ್ಮ ಭವಿಷ್ಯ ಕುರಿತು ಚರ್ಚಿಸಿ ಬಂದಿದ್ರು ಲಕ್ಷ್ಮಣ್ ಸವದಿ. ದೆಹಲಿಯಿಂದ ವಾಪಸಾದ ಬಳಿಕ ಇವತ್ತು ಡಿಸಿಎಂ ಲಕ್ಷ್ಮಣ್ ಸವದಿ ಸಿಎಂ ಭೇಟಿ ಮಾಡಿ ಚರ್ಚಿಸಿದರು. ಹೈಕಮಾಂಡ್ ನಾಯಕರ ಜೊತೆಗಿನ ಮಾತುಕತೆಯನ್ನೂ ಸವದಿ ಸಿಎಂ ಜೊತೆ ಹಂಚಿಕೊಂಡ್ರು ಎನ್ನಲಾಗಿದೆ.

ಕಳೆದ ವಾರಾಂತ್ಯದ ಎರಡು ದಿನ ಸಿಎಂ ಅವರ ಧವಳಗಿರಿ ನಿವಾಸದಲ್ಲಿ ಶಾಂತಿ ನೆಲೆಸಿತ್ತು. ಸಂಪುಟ ವಿಸ್ತರಣೆ ವಿಳಂಬ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳು ಕ್ಷೇತ್ರಗಳಿಗೆ ಮರಳಿದ್ರು. ಆದ್ರೆ ನಿನ್ನೆ ಬಿ ಎಲ್ ಸಂತೋಷ್ ಭೇಟಿ ಮತ್ತೆ ಆಕಾಂಕ್ಷಿಗಳಲ್ಲಿ ನಿರೀಕ್ಷೆ ಕೆದಕುವಂತೆ ಮಾಡಿದೆ.

TAGGED:bjpBL Santoshbs yeddyurappacabinet expansionPublic TVಪಬ್ಲಿಕ್ ಟಿವಿಬಿ.ಎಲ್ ಸಂತೋಷ್ಬಿ.ಎಸ್.ಯಡಿಯೂರಪ್ಪಬಿಜೆಪಿಸಂಪುಟ ವಿಸ್ತರಣೆ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

JDS
Districts

ಜೆಡಿಎಸ್‌ಗೆ 25 ರ ಸಂಭ್ರಮ – ಭದ್ರಕೋಟೆ ಹಾಸನದಲ್ಲಿ ಇಂದು ಬೃಹತ್ ಸಮಾವೇಶ

Public TV
By Public TV
6 minutes ago
Bengaluru Traffic 3
Bengaluru City

ಬೆಂಗಳೂರಿಗೆ ಟ್ರಾಫಿಕ್ ಸಿಟಿ ಹಣೆಪಟ್ಟಿ – ಸಂಚಾರ ದಟ್ಟಣೆ ಕಡಿವಾಣಕ್ಕೆ ಬ್ಲೂ ಪ್ರಿಂಟ್ ಸಿದ್ಧಪಡಿಸಿದ ಖಾಕಿ

Public TV
By Public TV
25 minutes ago
Honnavara
Crime

ಹೊನ್ನಾವರ ಸೂಳೆಮುರ್ಕಿ ಬಳಿ ಇಬ್ಬರು ಸಜೀವ ದಹನ ಕೇಸ್‌ – ಹಣಕ್ಕಾಗಿ ನಡೆದಿತ್ತು ಕೊಲೆ!

Public TV
By Public TV
33 minutes ago
REPUBLIC DAY
Karnataka

77ನೇ ಗಣರಾಜ್ಯೋತ್ಸವ ಸಂಭ್ರಮ – ಈ ಬಾರಿಯ ವಿಶೇಷತೆಗಳೇನು?

Public TV
By Public TV
49 minutes ago
Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
8 hours ago
01 22
Big Bulletin

ಬಿಗ್‌ ಬುಲೆಟಿನ್‌ 23 January 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?