Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚನ್ನಪಟ್ಟಣ ಕೈವಶಕ್ಕೆ ಡಿಸಿಎಂ ರಣತಂತ್ರ; ಒಂದೇ ವೇದಿಕೆಯಲ್ಲಿ ಡಿಕೆಶಿ-ಸಿಪಿವೈ ಸಮಾಗಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಚನ್ನಪಟ್ಟಣ ಕೈವಶಕ್ಕೆ ಡಿಸಿಎಂ ರಣತಂತ್ರ; ಒಂದೇ ವೇದಿಕೆಯಲ್ಲಿ ಡಿಕೆಶಿ-ಸಿಪಿವೈ ಸಮಾಗಮ

Districts

ಚನ್ನಪಟ್ಟಣ ಕೈವಶಕ್ಕೆ ಡಿಸಿಎಂ ರಣತಂತ್ರ; ಒಂದೇ ವೇದಿಕೆಯಲ್ಲಿ ಡಿಕೆಶಿ-ಸಿಪಿವೈ ಸಮಾಗಮ

Public TV
Last updated: August 15, 2024 4:02 pm
Public TV
Share
2 Min Read
DK SHIVAKUMAR CP YOGESHWAR
SHARE

ರಾಮನಗರ: ಚನ್ನಪಟ್ಟಣ (Channapatna) ಉಪಚುನಾವಣೆ ಕಣ ರಂಗೇರಿದ್ದು, ಕ್ಷೇತ್ರ ಗೆಲ್ಲಲು ಡಿಸಿಎಂ ಡಿಕೆಶಿ (DK Shivakumar) ಇನ್ನಿಲ್ಲದ ತಂತ್ರ ನಡೆಸಿದ್ದಾರೆ. ಚನ್ನಪಟ್ಟಣದ ಸ್ವಾತಂತ್ರ‍್ಯ ದಿನಾಚರಣೆ (Independence Day) ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಹೆಚ್‌ಡಿಕೆಗೆ (HD Kumaraswamy) ಟಾಂಗ್ ಕೊಟ್ಟ ಡಿಕೆಶಿ, ಕ್ಷೇತ್ರದ ಮತದಾರರ ಓಲೈಕೆಗೂ ಮುಂದಾಗಿದ್ದಾರೆ. ಜೊತೆಗೆ ಇಂದು ಡಿಕೆಶಿ ಜೊತೆ ಮಾಜಿ ಸಚಿವ, ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್ ವೇದಿಕೆ ಹಂಚಿಕೊಂಡಿದ್ದು ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

ಚುನಾವಣೆ ಘೋಷಣೆಗೂ ಮುನ್ನವೇ ಚನ್ನಪಟ್ಟಣದಲ್ಲಿ ಉಪಚುನಾವಣೆ ಕಾವು ಹೆಚ್ಚಾಗಿದೆ. ಶತಾಯಗತಾಯವಾಗಿ ಕ್ಷೇತ್ರ ಗೆಲ್ಲಲು ನಿರಂತರ ಪ್ರವಾಸ ಕೈಗೊಳ್ಳುತ್ತಿರುವ ಡಿಸಿಎಂ ಡಿಕೆಶಿ ಇಂದೂ ಕೂಡಾ ಚನ್ನಪಟ್ಟಣದ ಸ್ವಾತಂತ್ರ‍್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಧ್ವಜಾರೋಹಣ ನೆರವೇರಿಸಿದರು. ಈ ಮೂಲಕ ಈ ಹಿಂದೆ 6 ವರ್ಷ ಕ್ಷೇತ್ರದ ಶಾಸಕರಾಗಿದ್ದ ಕೇಂದ್ರ ಸಚಿವ ಹೆಚ್‌ಡಿಕೆ ಒಂದು ಬಾರಿಯೂ ಕ್ಷೇತ್ರದಲ್ಲಿ ಧ್ವಜಾರೋಹಣ ಮಾಡಿಲ್ಲ ಎಂಬ ವಿಚಾರವನ್ನು ಇಟ್ಟುಕೊಂಡು ಹೆಚ್‌ಡಿಕೆಗೆ ಟಕ್ಕರ್ ಕೊಟ್ಟರು. ಇದನ್ನೂ ಓದಿ: ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಮನವಿ – ಸಚಿವರಿಗೆ ಹೀಗಾದ್ರೆ ಸಾಮಾನ್ಯರ ಕತೆ ಏನು?

ಧ್ವಜಾರೋಹಣದ ಬಳಿಕ ಮಾತನಾಡಿದ ಡಿಸಿಎಂ ಡಿಕೆಶಿ, ಸ್ವಾತಂತ್ರ‍್ಯೋತ್ಸವದ ಭಾಷಣದಲ್ಲೂ ಕುಮಾರಸ್ವಾಮಿಗೆ ಟಾಂಗ್ ನೀಡಿದರು. ಇಂದು ನನ್ನ ರಾಜಕೀಯ ಬದುಕಿನಲ್ಲಿ ಬಹಳ ಪವಿತ್ರ ದಿನ. 78ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮ ನಡೆಯುತ್ತಿದೆ. ನಿಮ್ಮೆಲ್ಲರಿಗೂ ಸ್ವಾತಂತ್ರ‍್ಯೋತ್ಸವದ ಶುಭಕೋರಲು ಬಂದಿದ್ದೇನೆ. ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂಬ ಹೆಸರು ಬದಲಾವಣೆ ಆಗುತ್ತಿದೆ. ನಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಕೆಲಸ ಆಗುತ್ತಿದೆ. ಹಾಗಾಗಿ ಇಂದು ಚನ್ನಪಟ್ಟಣಕ್ಕೆ ಬಂದು ಧ್ವಜಾರೋಹಣ ಮಾಡುತ್ತಿದ್ದೇನೆ. ನಾನು ನಿಮ್ಮನ್ನು ಬಿಟ್ಟುಹೋಗುವ ಪ್ರಶ್ನೆಯೇ ಇಲ್ಲ. ಧ್ವಜವನ್ನು ಅರ್ಧಕ್ಕೆ ಹಾರಿಸಿದರೆ ಅದು ಅಗೌರವ. ಹಾಗೆಯೇ ಜನರನ್ನು ಅರ್ಧಕ್ಕೆ ಬಿಟ್ಟು ಹೋಗೋದು ಅಗೌರವ. ಈ ಜಿಲ್ಲೆಯಲ್ಲಿ ಹುಟ್ಟಿದ್ದೇವೆ. ಈ ಜನರ ಅಭಿವೃದ್ಧಿಗೆ ಕೆಲಸ ಮಾಡಬೇಕಿದೆ. ಈ ಜಿಲ್ಲೆಗೆ ಸಿಎಂ 150 ಕೋಟಿ ವಿಶೇಷ ಅನುದಾನ ಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಮುಂದಾಗಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಾಂಗ್ಲಾ ಹಿಂಸಾಚಾರ – ಹಿಂದೂಗಳ ಸುರಕ್ಷತೆ ಬಗ್ಗೆ ಮೋದಿ ಕಳವಳ

ಇನ್ನೂ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಖಾಲಿ ಇದೆ. ಹಾಗಾಗಿ ನಾನು ಬಂದಿದ್ದೇನೆ. ಹಿಂದೆ ರಾಮನಗರ ಜಿಲ್ಲಾ ಮಂತ್ರಿ ಆಗಿದ್ದಾಗ ರಾಮನಗರದಲ್ಲಿ ಧ್ವಜಾರೋಹಣ ಮಾಡುತ್ತಿದ್ದೆ. ಆದರೆ ಇಲ್ಲಿನ ಲೋಕಲ್ ಎಂಎಲ್‌ಎ ಯಾವ ಸ್ವಾತಂತ್ರ‍್ಯ ಕಾರ್ಯಕ್ರಮಕ್ಕೂ ಬರುತ್ತಿರಲಿಲ್ಲ. 6 ವರ್ಷದಲ್ಲಿ ಒಂದು ದಿನವೂ ಬಂದು ಧ್ವಜಾರೋಹಣ ಮಾಡಿಲ್ಲ. ಅವರಿಗೆ ಅನುಭವ ಇಲ್ಲ. ದೇಶದ ಸ್ವಾತಂತ್ರ‍್ಯ, ಇತಿಹಾಸದ ಬಗ್ಗೆ ಕಾಳಜಿ ಇಲ್ಲ. ಹಾಗಾಗಿ ನಾನು ಇಲ್ಲಿ ಬಂದು ಧ್ವಜಾರೋಹಣ ಮಾಡಿದ್ದೇನೆ ಎಂದು ಕುಮಾರಸ್ವಾಮಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ದೇಶದಲ್ಲಿ ಅನೇಕ ನಕಲಿ ಭಕ್ತರು ಇದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಇನ್ನೂ ಚನ್ನಪಟ್ಟಣ ಸ್ವಾತಂತ್ರ‍್ಯೋತ್ಸವ ಕಾರ್ಯಕ್ರಮದಲ್ಲಿ ರಾಜಕೀಯ ಬದ್ಧವೈರಿಗಳಾದ ಡಿಸಿಎಂ ಡಿಕೆಶಿ ಹಾಗೂ ಮಾಜಿ ಸಚಿವ ಸಿಪಿವೈ (CP Yogeshwar) ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಡಿಕೆಶಿಯನ್ನ ಕೈಮುಗಿದು ಸಿಪಿವೈ ಸ್ವಾಗತ ಮಾಡಿದ್ದನ್ನು ಹೊರತುಪಡಿಸಿದರೆ ಯಾವುದೇ ಮಾತುಗಳನ್ನಾಡದೇ ಮೌನವಾಗಿ ಕುಳಿತಿದ್ದರು. ಸಿಪಿವೈ ದೆಹಲಿಯಿಂದ ಬಂದ ಬಳಿಕ ಡಿಕೆಶಿ ಜೊತೆ ವೇದಿಕೆ ಹಂಚಿಕೊಂಡಿದ್ದು ರಾಜಕೀಯ ಕುತೂಹಲವನ್ನು ಹೆಚ್ಚಿಸಿದೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರ ಮತ್ತೊಂದು ರಾಜಕೀಯ ಸಮರಕ್ಕೆ ಸಿದ್ಧವಾಗಿದ್ದು, ಡಿಕೆಶಿ-ಸಿಪಿವೈ ಹಾಗೂ ಹೆಚ್‌ಡಿಕೆ ನಡುವಿನ ಪ್ರತಿಷ್ಠೆಯ ಕಣವಾಗಿದೆ. ಇದನ್ನೂ ಓದಿ: ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ತ್ವರಿತ ತನಿಖೆ, ಶಿಕ್ಷೆಯ ಅಗತ್ಯವಿದೆ: ಮೋದಿ

TAGGED:ChannapatnacongressCP YogeshwarDK ShivakumarIndependence Dayramanagaraಕಾಂಗ್ರೆಸ್ಚನ್ನಪಟ್ಟಣಡಿಕೆ ಶಿವಕುಮಾರ್ರಾಮನಗರಸಿಪಿ ಯೋಗೇಶ್ವರ್ಸ್ವಾತಂತ್ರ್ಯ ದಿನಾಚರಣೆ
Share This Article
Facebook Whatsapp Whatsapp Telegram

Cinema news

Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories

You Might Also Like

KSRTC
Bengaluru City

ವೇತನ ಹಿಂಬಾಕಿ, ಪರಿಷ್ಕರಣೆಗೆ ಆಗ್ರಹ – ಸಾರಿಗೆ ನೌಕರರಿಂದ ನಾಳೆ ಬೆಂಗಳೂರು ಚಲೋಗೆ ಕರೆ

Public TV
By Public TV
4 minutes ago
HK Patil
Bengaluru City

ರಾಜ್ಯ ಸರ್ಕಾರದ ವಿರುದ್ಧ ಫೋನ್ ಟ್ಯಾಪಿಂಗ್ ಆರೋಪ; ಸದನದಲ್ಲಿ ಗದ್ದಲ – ಕೋಲಾಹಲ

Public TV
By Public TV
7 minutes ago
Sharad Pawar NCP 1
Latest

ಅಜಿತ್‌ ಪವಾರ್‌ ವಿಮಾನ ದುರಂತವನ್ನು ರಾಜಕೀಯಗೊಳಿಸಬೇಡಿ: ಶರದ್‌ ಪವಾರ್‌ ಮನವಿ

Public TV
By Public TV
16 minutes ago
UT Khader
Latest

ರಾಜ್ಯಪಾಲರ ನಡಾವಳಿ ಬಗ್ಗೆ ಮಾತನಾಡದಂತೆ ಸ್ಪೀಕರ್ ಖಾದರ್ ರೂಲಿಂಗ್

Public TV
By Public TV
31 minutes ago
corporation boards presidents
Bengaluru City

25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರವಧಿ ಮುಂದುವರಿಕೆ

Public TV
By Public TV
35 minutes ago
Supreme Court 1
Court

ಬೌದ್ಧ ಧರ್ಮಕ್ಕೆ ಮತಾಂತರವಾಗಿ ಮೀಸಲಾತಿ ಕೇಳಿದ್ದಕ್ಕೆ ತರಾಟೆ – ಇದು ಹೊಸ ರೀತಿ ವಂಚನೆ ಎಂದ ಸುಪ್ರೀಂ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?