ಬೆಂಗಳೂರು: ಬೆಳ್ಳಂ ಬೆಳಗ್ಗೆ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ರೌಡಿಶೀಟರ್ಗಳಿಗೆ ಬಿಸಿ ಮುಟ್ಟಿಸಿದ್ದು, ಮನೆ ಮೇಲೆ ದಾಳಿ ಮಾಡಿದ್ದಾರೆ.
ದಕ್ಷಿಣ ವಿಭಾಗ ಡಿಸಿಪಿ ಅಣ್ಣಾಮಲೈ ಹಾಗೂ ಎಸಿಪಿ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಸುಬ್ರಮಣ್ಯಪುರ ಉಪ ವಿಭಾಗದ 5 ಸ್ಟೇಷನ್ ಪೊಲೀಸರು ದಾಳಿ ನಡೆಸಿದ್ದಾರೆ. ಕುಖ್ಯಾತ ರೌಡಿಶೀಟರ್ ಗಳು ಹಾಗೂ ಎಂಓಬಿ ಅಸಾಮಿಗಳ ಮನೆ ಮೇಲೆ ಪೊಲೀಸರು ರೇಡ್ ನಡೆಸಿದ್ದಾರೆ.
ಕೋಣನಕುಂಟೆ, ಸುಬ್ರಮಣ್ಯಪುರ, ಕುಮಾರಸ್ವಾಮಿ ಲೇಔಟ್, ತಲ್ಲಘಟ್ಟಪುರ ಹಾಗೂ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ಮಾರಕಾಸ್ತ್ರಗಳು ಹಾಗೂ ದಾಖಲೆ ಇಲ್ಲದ ನೂರಾರು ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ರೌಡಿಗಳು ಕೊಲೆ, ಕೊಲೆ ಯತ್ನ, ರಾಬರಿ, ಡಕಾಯಿತಿ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದರು. ದಾಳಿ ನಡೆಸಿದ ಬಳಿಕ ಡಿಸಿಪಿ ಅಣ್ಣಾಮಲೈ ಅಪರಾಧ ಕೃತ್ಯದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv