– ಜನನವಾದ ಕೆಲವೇ ಗಂಟೆಗಳಲ್ಲಿ ಬೀಸಾಡಿರುವ ಪಾಪಿಗಳು
ರಾಯಚೂರು: ಜಿಲ್ಲೆಯ ಮಸ್ಕಿ (Maski) ತಾಲೂಕಿನ ಸಾಗರ್ ಕ್ಯಾಂಪ್ (Sagar Camp) ಬಳಿಯಿರುವ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.
ತುಂಬಿ ಹರಿಯುತ್ತಿರುವ ಕಾಲುವೆಯಲ್ಲಿ ಗಂಡು ಶಿಶುವನ್ನು ಬೀಸಾಡಲಾಗಿದ್ದು, ಶಿಶು ಜನನವಾದ ಕೆಲವೇ ಗಂಟೆಗಳಲ್ಲಿ ಬೀಸಾಡಿರುವ ಶಂಕೆ ವ್ಯಕ್ತವಾಗಿದೆ.ಇದನ್ನೂ ಓದಿ: ಬೆಂಗಳೂರು| ಪಾದಚಾರಿ ಜೊತೆ ಕಿರಿಕ್ – ಬಿಎಂಟಿಸಿ ಕಂಡಕ್ಟರ್ ಹೇಳಿದ್ದೇನು?
ಕಾಲುವೆಯಲ್ಲಿ ಶಿಶು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು, ಶಿಶುವಿನ ಮೃತದೇಹವನ್ನು ಮೇಲೆತ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಗಾನೂರು ಠಾಣಾ ಪೊಲೀಸರು (Balaganur Police Station) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಿಶುವನ್ನು ಹೆತ್ತವರೆ ಬೀಸಾಡಿರುವುರಾಗಿ ಶಂಕಿಸಿದ್ದಾರೆ. ಬಳಗಾನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಕೆರೆಯನ್ನೇ ನುಂಗಿದ ವಕ್ಫ್ ಬೋರ್ಡ್ – 4 ಎಕರೆ 10 ಗುಂಟೆ ಕೆರೆಯ ಜಾಗ ಈಗ ವಕ್ಫ್ ಹೆಸರಿಗೆ