ಹುಬ್ಬಳ್ಳಿ: ನೀರಿನ ವಿಷಯಕ್ಕೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮತ್ತು ಪಕ್ಕದ ಮನೆಯವರ ಜೊತೆ ಮಾರಾಮಾರಿ ನಡೆದಿದ್ದು, ಎರಡು ಕುಟುಂಬಗಳು ಪರಸ್ಪರ ಮಾರಣಾಂತಿಕವಾಗಿ ಹಲ್ಲೆ ಮಾಡಿಕೊಂಡಿದ್ದಾರೆ.
ಹಳೇ ಹುಬ್ಬಳ್ಳಿಯ ಸಹದೇವನಗರದಲ್ಲಿ ಈ ಘಟನೆ ನಡೆದಿದೆ. ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪುರಾಣಿಕಮಠ್ ಹೆಡ್ ಕಾನ್ಸ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪುರಾಣಿಕಮಠ್ ಅವರ ಮನೆಯ ಪಕ್ಕದಲ್ಲಿರುವ ಭರತೇಶ್ ಅವರ ಜೊತೆಗೆ ಕುಡಿಯುವ ನೀರಿನ ಸಲುವಾಗಿ ಜಗಳ ಆರಂಭವಾಗಿದೆ. ಇದನ್ನೂ ಓದಿ: ವೈರಲ್ ಆಯ್ತು ಶಾರೂಖ್ ನ್ಯೂಲುಕ್ – ರಿಯಲ್ ಫೋಟೋ ರಿಲೀಸ್!
ಜಗಳ ತಾರಕ್ಕೇರಿ ಇಬ್ಬರು ಇಟ್ಟಿಗೆ ಮತ್ತು ಕಬ್ಬಿಣದ ರಾಡ್ ನಿಂದ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಪುರಾಣಿಕಮಠ್ ಮತ್ತು ಭರತೇಶ್ ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಸದ್ಯ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.