Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Chikkaballapur

ಅನುಮಾನಸ್ಪದವಾಗಿ ಮಗಳು ಸಾವು- 1 ಲಕ್ಷ ಪಡೆದು ಮರಣೋತ್ತರ ವರದಿ ಕೊಟ್ಟ ಪೊಲೀಸ್

Public TV
Last updated: February 2, 2019 9:39 am
Public TV
Share
2 Min Read
CKB STUDENT
SHARE

– ಎಫ್‍ಎಸ್‍ಎಲ್ ವರದಿಗಾಗಿ 1 ವರ್ಷದಿಂದ ಪೋಷಕರು ಅಲೆದಾಟ

ಚಿಕ್ಕಬಳ್ಳಾಪುರ: ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ ಮಗಳ ಸಾವಿನ ಸತ್ಯ ತಿಳಿಸಿ, ಮಗಳ ಸಾವಿನ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್) ವರದಿಯಾದರೂ ಕೊಡಿ ಅಂತ ಪ್ರತಿದಿನ ತಾಯಿ ಪೊಲೀಸ್ ಠಾಣೆಗೆ ಬಂದು ಅಂಗಲಾಚಿದರೂ ಪೊಲೀಸರು ಸ್ಪಂದಿಸಿಲ್ಲವಂತೆ. ಎಫ್‍ಎಸ್‍ಎಲ್ ವರದಿ ಕೊಡುತ್ತೀನಿ ಎಂದ ಪೊಲೀಸಪ್ಪ ಒಂದು ಲಕ್ಷ ರೂಪಾಯಿ ಪಡೆದು ಮರಣೋತ್ತರ ಪರೀಕ್ಷೆ ವರದಿ ಕೊಟ್ಟಿದ್ದಾನೆ ಅಂತ ತಾಯಿಯೊಬ್ಬರು ಪೊಲೀಸ್ ಠಾಣೆಯೊಳಗೆ ರಂಪಾಟ ಮಾಡಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ckb

ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬೆಸಲಪಲ್ಲಿ ಗ್ರಾಮದ ನಿವಾಸಿ ರಾಧಾ ಪೊಲೀಸ್ ಠಾಣೆಯೊಳಗೆ ರಂಪಾಟ ಮಾಡಿದ ಮಹಿಳೆ. ಇವರ ಮಗಳು ಸರಿತಾ ಚಿಕ್ಕಬಳ್ಳಾಪುರ ನಗರ ಹೊರವಲಯದ ಆದಿಚುಂಚನಗಿರಿ ಶಾಖಾ ಮಠದ ಬಿಜಿಎಸ್ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದು, ಬಿಜಿಎಸ್ ವಸತಿ ನಿಲಯದಲ್ಲೇ 2017 ರ ಸೆಪ್ಟೆಂಬರ್ 9 ರಂದು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಳು. ಹೀಗಾಗಿ ತನ್ನ ಮಗಳ ಸಾವಿಗೆ ನ್ಯಾಯ ಕೊಡಿಸಿ ಸ್ವಾಮಿ ಅಂತ ಸರಿತಾ ತಂದೆ ಶ್ರೀನಿವಾಸ್ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇರೆಗೆ ತನಿಖೆ ಕೈಗೊಂಡ ಪೊಲೀಸರಿಗೆ 2018ರ ಏಪ್ರಿಲ್ ನಲ್ಲೇ ಎಫ್‍ಎಸ್‍ಎಲ್ ರಿಪೋರ್ಟ್ ಲಭಿಸಿದ್ದು, ಎಫ್‍ಎಸ್‍ಎಲ್ ವರದಿ ಪ್ರಕಾರ ಸರಿತಾ ಆರ್ಗಾನ್ ಫಾಸ್ಪರಸ್ ಕ್ರೀಮಿನಾಶಕ ಸೇವಿಸಿ ಸಾವನ್ನಪ್ಪಿರುವುದು ಧೃಡವಾಗಿದೆ.

vlcsnap 2019 02 02 09h31m52s908

ಮಗಳ ಸಾವಿನ ಸತ್ಯ ತಿಳಿಸಿ ಅಂತ ಅಂದಿನಿಂದ ಇಂದಿನವರೆಗೂ ಅಲೆದರೂ ಪೊಲೀಸರು ಸತ್ಯ ಮಾತ್ರ ತಿಳಿಸುತ್ತಿಲ್ಲ. ಆದರೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೇದೆ ರಂಗನಾಥ್ ಹಾಗೂ ಪಿಎಸ್‍ಐ ವೆಂಕಟೇಶ್ ಎಫ್‍ಎಸ್‍ಎಲ್ ವರದಿ ಕೊಡುತ್ತೀವಿ ಅಂತ ಒಂದು ಲಕ್ಷ ರೂಪಾಯಿ ಲಂಚ ಪಡೆದುಕೊಂಡಿದ್ದು, ಮರಣೋತ್ತರ ಪರೀಕ್ಷಾ ವರದಿ ಕೊಟ್ಟಿದ್ದಾರೆ ಅಂತ ಮೃತ ಸರಿತಾ ತಾಯಿ ರಾಧಾ ಗಂಭೀರ ಆರೋಪ ಮಾಡಿದ್ದಾರೆ.

ಎಫ್‍ಎಸ್‍ಎಲ್ ವರದಿ ಸಿಗುತ್ತೆ ಅಂತ ಪೊಲೀಸರಿಗೆ ಒಂದು ಲಕ್ಷ ಕೊಟ್ಟು ಸರಿತಾ ತಂದೆ ತಾಯಿಗೆ ಪೊಲೀಸರು ಕೊಟ್ಟ ವರದಿ ಎಫ್‍ಎಸ್‍ಎಲ್ ಅಲ್ಲ ಅದು ಮರಣೋತ್ತರ ಪರೀಕ್ಷೆ ಮಾತ್ರ ಅಂತ ಗೊತ್ತಾದ ಕೂಡಲೇ ಪೋಷಕರು ಪೊಲೀಸರ ವಿರುದ್ಧ ತಿರುಗಿಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಕರ್ತವ್ಯನಿರತನಾಗಿದ್ದ ಪಿಎಸ್‍ಐ ವೆಂಕಟೇಶ್ ವಿರುದ್ಧ ಮುಗಿಬಿದ್ದು ನಡುರಸ್ತೆಯ್ಲಲೇ ಹಾದಿ ಬೀದಿ ರಂಪಾಟ ಮಾಡಿದ್ದಾರೆ. ಇದಲ್ಲದೇ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯೊಳಗೆ ನುಗ್ಗಿ ಪಿಎಸ್‍ಐ ವೆಂಕಟೇಶ್ ಹಾಗೂ ಪೇದೆ ರಂಗನಾಥ್ ವಿರುದ್ಧ ಕೆಂಡಕಾರಿದ್ದಾರೆ.

cbk

ಪೋಷಕರ ಆರೋಪ:
ಆದಿಚುಂಚನಗಿರಿ ಶಾಖಾಮಠದ ಬಿಜಿಎಸ್ ವಸತಿ ನಿಲಯದಲ್ಲೇ ವಿದ್ಯಾರ್ಥಿ ಸರಿತಾ ಸಾವನ್ನಪ್ಪಿರುವುದರಿಂದ ಸಂಸ್ಥೆಗೆ ಕೆಟ್ಟ ಹೆಸರು ಬರುತ್ತೆ ಅನ್ನೋ ಉದ್ದೇಶದಿಂದ ಸಂಸ್ಥೆಯವರು ಪ್ರಕರಣದ ಮಾಹಿತಿಯನ್ನ ಬಹಿರಂಗಪಡಿದಂತೆ ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ. ಹೀಗಾಗಿ ನಮಗೆ ಕದ್ದು ಮುಚ್ಚಿ ಎಫ್‍ಎಸ್‍ಎಲ್ ವರದಿ ಕೊಡುತ್ತೀನಿ ಅಂತ ಅಪೂರ್ಣವಾದ ಮರಣೋತ್ತರ ವರದಿ ಕೊಟ್ಟು ಲಕ್ಷ ಕೊಳ್ಳೆ ಹೊಡೆದಿದ್ದಾರೆ ಅನ್ನೋದು ಪೋಷಕರ ಗಂಭೀರ ಆರೋಪವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಚಿಕ್ಕಬಳ್ಳಾಪುರ ಎಸ್ಪಿ ಕಾರ್ತಿಕ್ ರೆಡ್ಡಿ ಮಹಿಳೆ ಮಾಡಿದ ಆರೋಪ ಗಮನಕ್ಕೆ ಬಂದಿದೆ. ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

TAGGED:chikkaballapurdeathFSL ReportpolicePublic TVಎಫ್‍ಎಸ್‍ಎಲ್ ವರದಿಚಿಕ್ಕಬಳ್ಳಾಪುರಪಬ್ಲಿಕ್ ಟಿವಿಪೊಲೀಸ್ಸಾವು
Share This Article
Facebook Whatsapp Whatsapp Telegram

Cinema Updates

ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
21 minutes ago
deepika padukone
ಪ್ರಭಾಸ್ ಸಿನಿಮಾದಲ್ಲಿ ನಟಿಸಲು ದೀಪಿಕಾ ಪಡುಕೋಣೆಗೆ 20 ಕೋಟಿ ಸಂಭಾವನೆ!
45 minutes ago
disha madan
ಕನ್ನಡತಿ ದಿಶಾ ಮದನ್‌ಗೆ ಕಾನ್ ಫಿಲ್ಮ್ ಫೆಸ್ಟಿವಲ್ ಆಹ್ವಾನ
2 hours ago
Preity Zinta Glenn
ʻನೀವು ಮದ್ವೆ ಆಗ್ಲಿಲ್ಲ ಅಂತ ಮ್ಯಾಕ್ಸಿ ಚೆನ್ನಾಗಿ ಆಡ್ತಿಲ್ಲʼ – ಕಾಮೆಂಟ್‌ ಮಾಡಿದ ನೆಟ್ಟಿಗನಿಗೆ ಪ್ರೀತಿ ಝಿಂಟಾ ಕ್ಲಾಸ್‌
2 hours ago

You Might Also Like

harish injadi kukke subrahmanya temple
Dakshina Kannada

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷನಾಗಿ ಕಾಂಗ್ರೆಸ್ ಮುಖಂಡ, ಮಾಜಿ ರೌಡಿಶೀಟರ್ ಆಯ್ಕೆ

Public TV
By Public TV
6 minutes ago
bbmp
Bengaluru City

ʻಬಿಬಿಎಂಪಿʼ ಹೆಸರು ಇತಿಹಾಸ ಪುಟಕ್ಕೆ – ಮೇ 15ರಿಂದ ʻಗ್ರೇಟರ್‌ ಬೆಂಗಳೂರುʼ ಆಡಳಿತ ಜಾರಿ

Public TV
By Public TV
7 minutes ago
Colonel Sophia Qureshi house in belagavi
Belgaum

ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಮನವಿ

Public TV
By Public TV
26 minutes ago
BSF Army Purnam kumar
Latest

ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು – ಪಾಕ್ ಬಂಧಿಸಿದ್ದ ಬಿಎಸ್‌ಎಫ್ ಯೋಧ ತಾಯ್ನಾಡಿಗೆ ವಾಪಸ್

Public TV
By Public TV
1 hour ago
yogi adityanath
Latest

ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ಸುಮ್ಮನೆ ಬಿಡಲ್ಲ: ಪಾಕ್‌ ವಿರುದ್ಧ ಗುಡುಗಿದ ಯೋಗಿ ಆದಿತ್ಯನಾಥ್‌

Public TV
By Public TV
2 hours ago
CJI BR Gavai
Latest

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್ ಗವಾಯಿ ಪ್ರಮಾಣವಚನ ಸ್ವೀಕಾರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?