Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನುಮಾನಸ್ಪದವಾಗಿ ಮಗಳು ಸಾವು- 1 ಲಕ್ಷ ಪಡೆದು ಮರಣೋತ್ತರ ವರದಿ ಕೊಟ್ಟ ಪೊಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಅನುಮಾನಸ್ಪದವಾಗಿ ಮಗಳು ಸಾವು- 1 ಲಕ್ಷ ಪಡೆದು ಮರಣೋತ್ತರ ವರದಿ ಕೊಟ್ಟ ಪೊಲೀಸ್

Chikkaballapur

ಅನುಮಾನಸ್ಪದವಾಗಿ ಮಗಳು ಸಾವು- 1 ಲಕ್ಷ ಪಡೆದು ಮರಣೋತ್ತರ ವರದಿ ಕೊಟ್ಟ ಪೊಲೀಸ್

Public TV
Last updated: February 2, 2019 9:39 am
Public TV
Share
2 Min Read
CKB STUDENT
SHARE

– ಎಫ್‍ಎಸ್‍ಎಲ್ ವರದಿಗಾಗಿ 1 ವರ್ಷದಿಂದ ಪೋಷಕರು ಅಲೆದಾಟ

ಚಿಕ್ಕಬಳ್ಳಾಪುರ: ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ ಮಗಳ ಸಾವಿನ ಸತ್ಯ ತಿಳಿಸಿ, ಮಗಳ ಸಾವಿನ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್) ವರದಿಯಾದರೂ ಕೊಡಿ ಅಂತ ಪ್ರತಿದಿನ ತಾಯಿ ಪೊಲೀಸ್ ಠಾಣೆಗೆ ಬಂದು ಅಂಗಲಾಚಿದರೂ ಪೊಲೀಸರು ಸ್ಪಂದಿಸಿಲ್ಲವಂತೆ. ಎಫ್‍ಎಸ್‍ಎಲ್ ವರದಿ ಕೊಡುತ್ತೀನಿ ಎಂದ ಪೊಲೀಸಪ್ಪ ಒಂದು ಲಕ್ಷ ರೂಪಾಯಿ ಪಡೆದು ಮರಣೋತ್ತರ ಪರೀಕ್ಷೆ ವರದಿ ಕೊಟ್ಟಿದ್ದಾನೆ ಅಂತ ತಾಯಿಯೊಬ್ಬರು ಪೊಲೀಸ್ ಠಾಣೆಯೊಳಗೆ ರಂಪಾಟ ಮಾಡಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ckb

ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬೆಸಲಪಲ್ಲಿ ಗ್ರಾಮದ ನಿವಾಸಿ ರಾಧಾ ಪೊಲೀಸ್ ಠಾಣೆಯೊಳಗೆ ರಂಪಾಟ ಮಾಡಿದ ಮಹಿಳೆ. ಇವರ ಮಗಳು ಸರಿತಾ ಚಿಕ್ಕಬಳ್ಳಾಪುರ ನಗರ ಹೊರವಲಯದ ಆದಿಚುಂಚನಗಿರಿ ಶಾಖಾ ಮಠದ ಬಿಜಿಎಸ್ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದು, ಬಿಜಿಎಸ್ ವಸತಿ ನಿಲಯದಲ್ಲೇ 2017 ರ ಸೆಪ್ಟೆಂಬರ್ 9 ರಂದು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಳು. ಹೀಗಾಗಿ ತನ್ನ ಮಗಳ ಸಾವಿಗೆ ನ್ಯಾಯ ಕೊಡಿಸಿ ಸ್ವಾಮಿ ಅಂತ ಸರಿತಾ ತಂದೆ ಶ್ರೀನಿವಾಸ್ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇರೆಗೆ ತನಿಖೆ ಕೈಗೊಂಡ ಪೊಲೀಸರಿಗೆ 2018ರ ಏಪ್ರಿಲ್ ನಲ್ಲೇ ಎಫ್‍ಎಸ್‍ಎಲ್ ರಿಪೋರ್ಟ್ ಲಭಿಸಿದ್ದು, ಎಫ್‍ಎಸ್‍ಎಲ್ ವರದಿ ಪ್ರಕಾರ ಸರಿತಾ ಆರ್ಗಾನ್ ಫಾಸ್ಪರಸ್ ಕ್ರೀಮಿನಾಶಕ ಸೇವಿಸಿ ಸಾವನ್ನಪ್ಪಿರುವುದು ಧೃಡವಾಗಿದೆ.

vlcsnap 2019 02 02 09h31m52s908

ಮಗಳ ಸಾವಿನ ಸತ್ಯ ತಿಳಿಸಿ ಅಂತ ಅಂದಿನಿಂದ ಇಂದಿನವರೆಗೂ ಅಲೆದರೂ ಪೊಲೀಸರು ಸತ್ಯ ಮಾತ್ರ ತಿಳಿಸುತ್ತಿಲ್ಲ. ಆದರೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೇದೆ ರಂಗನಾಥ್ ಹಾಗೂ ಪಿಎಸ್‍ಐ ವೆಂಕಟೇಶ್ ಎಫ್‍ಎಸ್‍ಎಲ್ ವರದಿ ಕೊಡುತ್ತೀವಿ ಅಂತ ಒಂದು ಲಕ್ಷ ರೂಪಾಯಿ ಲಂಚ ಪಡೆದುಕೊಂಡಿದ್ದು, ಮರಣೋತ್ತರ ಪರೀಕ್ಷಾ ವರದಿ ಕೊಟ್ಟಿದ್ದಾರೆ ಅಂತ ಮೃತ ಸರಿತಾ ತಾಯಿ ರಾಧಾ ಗಂಭೀರ ಆರೋಪ ಮಾಡಿದ್ದಾರೆ.

ಎಫ್‍ಎಸ್‍ಎಲ್ ವರದಿ ಸಿಗುತ್ತೆ ಅಂತ ಪೊಲೀಸರಿಗೆ ಒಂದು ಲಕ್ಷ ಕೊಟ್ಟು ಸರಿತಾ ತಂದೆ ತಾಯಿಗೆ ಪೊಲೀಸರು ಕೊಟ್ಟ ವರದಿ ಎಫ್‍ಎಸ್‍ಎಲ್ ಅಲ್ಲ ಅದು ಮರಣೋತ್ತರ ಪರೀಕ್ಷೆ ಮಾತ್ರ ಅಂತ ಗೊತ್ತಾದ ಕೂಡಲೇ ಪೋಷಕರು ಪೊಲೀಸರ ವಿರುದ್ಧ ತಿರುಗಿಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಕರ್ತವ್ಯನಿರತನಾಗಿದ್ದ ಪಿಎಸ್‍ಐ ವೆಂಕಟೇಶ್ ವಿರುದ್ಧ ಮುಗಿಬಿದ್ದು ನಡುರಸ್ತೆಯ್ಲಲೇ ಹಾದಿ ಬೀದಿ ರಂಪಾಟ ಮಾಡಿದ್ದಾರೆ. ಇದಲ್ಲದೇ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯೊಳಗೆ ನುಗ್ಗಿ ಪಿಎಸ್‍ಐ ವೆಂಕಟೇಶ್ ಹಾಗೂ ಪೇದೆ ರಂಗನಾಥ್ ವಿರುದ್ಧ ಕೆಂಡಕಾರಿದ್ದಾರೆ.

cbk

ಪೋಷಕರ ಆರೋಪ:
ಆದಿಚುಂಚನಗಿರಿ ಶಾಖಾಮಠದ ಬಿಜಿಎಸ್ ವಸತಿ ನಿಲಯದಲ್ಲೇ ವಿದ್ಯಾರ್ಥಿ ಸರಿತಾ ಸಾವನ್ನಪ್ಪಿರುವುದರಿಂದ ಸಂಸ್ಥೆಗೆ ಕೆಟ್ಟ ಹೆಸರು ಬರುತ್ತೆ ಅನ್ನೋ ಉದ್ದೇಶದಿಂದ ಸಂಸ್ಥೆಯವರು ಪ್ರಕರಣದ ಮಾಹಿತಿಯನ್ನ ಬಹಿರಂಗಪಡಿದಂತೆ ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ. ಹೀಗಾಗಿ ನಮಗೆ ಕದ್ದು ಮುಚ್ಚಿ ಎಫ್‍ಎಸ್‍ಎಲ್ ವರದಿ ಕೊಡುತ್ತೀನಿ ಅಂತ ಅಪೂರ್ಣವಾದ ಮರಣೋತ್ತರ ವರದಿ ಕೊಟ್ಟು ಲಕ್ಷ ಕೊಳ್ಳೆ ಹೊಡೆದಿದ್ದಾರೆ ಅನ್ನೋದು ಪೋಷಕರ ಗಂಭೀರ ಆರೋಪವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಚಿಕ್ಕಬಳ್ಳಾಪುರ ಎಸ್ಪಿ ಕಾರ್ತಿಕ್ ರೆಡ್ಡಿ ಮಹಿಳೆ ಮಾಡಿದ ಆರೋಪ ಗಮನಕ್ಕೆ ಬಂದಿದೆ. ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

TAGGED:chikkaballapurdeathFSL ReportpolicePublic TVಎಫ್‍ಎಸ್‍ಎಲ್ ವರದಿಚಿಕ್ಕಬಳ್ಳಾಪುರಪಬ್ಲಿಕ್ ಟಿವಿಪೊಲೀಸ್ಸಾವು
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

01 11
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-1

Public TV
By Public TV
4 hours ago
02 10
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-2

Public TV
By Public TV
4 hours ago
03 10
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-3

Public TV
By Public TV
4 hours ago
ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
4 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
4 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?