ಮಂಡ್ಯ: ಕೃಷಿ ಸಾಲಕ್ಕೆ ಕೋರ್ಟಿನಿಂದ ನೋಟಿಸ್ ಬಂದ ಹಿನ್ನೆಲೆಯಲ್ಲಿ ಸಹಾಯಕ್ಕೆ ಬರುವಂತೆ ಮಂಡ್ಯದ ರೈತರೊಬ್ಬರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉರುಳಾಡಿ ಸಿಎಂಗೆ ಮನವಿ ಮಾಡಿದ್ದಾರೆ.
ಮಂಡ್ಯದ ಉಪ್ಪರಕನಹಳ್ಳಿ ಗ್ರಾಮದ ಬಸವೇಗೌಡ ರೈತನಿಗೆ ನೋಟಿಸ್ ಬಂದಿದೆ. ಬಸವೇಗೌಡ 2011ರಲ್ಲಿ ಎಸ್ಬಿಐ ಬ್ಯಾಂಕಿನಿಂದ 1.75 ಲಕ್ಷ ರೂ. ಕೃಷಿಗಾಗಿ ಸಾಲ ಪಡೆದಿದ್ದರು. ಬ್ಯಾಂಕ್ನಿಂದ ನೋಟಿಸ್ ನೀಡಿದ್ದರೂ ರೈತ ಸಾಲ ತೀರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್ ಮುಖಾಂತರ ರೈತನಿಗೆ ನೋಟಿಸ್ ಬಂದಿದೆ.
ಜೂನ್ 25ಕ್ಕೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಇದರಿಂದ ಆತಂಕಗೊಂಡು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆಯಲ್ಲಿ ಉರುಳಾಡುತ್ತ ಅಸಹಾಯಕತೆಯನ್ನು ಹೊರಹಾಕಿದ್ದಾರೆ. ಹೀಗಾಗಿ ಬಸವೇಗೌಡರ ಪುತ್ರ ಮೂಡೇಗೌಡ ತನ್ನ ಕಷ್ಟವನ್ನು ಸಿಎಂ ಗಮನಕ್ಕೆ ತರಬೇಕೆಂದು ಜಿಲ್ಲಾಧಿಕಾರಿ ಮೂಲಕ ಸಿಎಂ ಅವರಿಗೆ ಮನವಿ ಪತ್ರ ಬರೆದಿದ್ದಾರೆ.
ನಾವು ಕೃಷಿಗಾಗಿ 1.25 ಲಕ್ಷ ರೂ. ಸಾಲ ತೆಗೆದುಕೊಂಡಿದ್ದೇವೆ. ಆದರೆ ಮಳೆ, ಬೆಳೆ ಇಲ್ಲದೇ ಸಾಲ ತೀರಿಸಲು ಸಾಧ್ಯವಾಗಿಲ್ಲ. ಈಗ ಕೋರ್ಟ್ ನೋಟಿಸ್ ನೀಡಿದೆ. ಹೀಗಾಗಿ ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಇದು ನಮ್ಮ ಸಾವು ಬದುಕಿನ ಪ್ರಶ್ನೆಯಾಗಿದೆ. ಕುಮಾರಣ್ಣ ನಮಗೆ ಯಮನಾಗಿ ಬರುತ್ತಾರಾ ಅಥವಾ ಬ್ರಹ್ಮನಾಗಿ ಬರುತ್ತಾರ ಎಂದು ಪ್ರಶ್ನೆ ಮಾಡಿದ್ದಾರೆ. ದಯಮಾಡಿ ನಮಗೆ ಬದುಕಲು ಅವಕಾಶ ಮಾಡಿಕೊಡಿ ಎಂದು ರೈತನ ಪುತ್ರ ಮೂಡೇಗೌಡ ಮನವಿ ಮಾಡಿಕೊಂಡಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]