Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಬಿಎಂಪಿ ಶಾಲೆಗಳನ್ನ ಇನ್ಮುಂದೆ ಶಿಕ್ಷಣ ಇಲಾಖೆ ಅಧೀನಕ್ಕೆ ನೀಡಲು ನಿರ್ಧಾರ: ಡಿ.ಕೆ.ಶಿವಕುಮಾರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಬಿಎಂಪಿ ಶಾಲೆಗಳನ್ನ ಇನ್ಮುಂದೆ ಶಿಕ್ಷಣ ಇಲಾಖೆ ಅಧೀನಕ್ಕೆ ನೀಡಲು ನಿರ್ಧಾರ: ಡಿ.ಕೆ.ಶಿವಕುಮಾರ್‌

Bengaluru City

ಬಿಬಿಎಂಪಿ ಶಾಲೆಗಳನ್ನ ಇನ್ಮುಂದೆ ಶಿಕ್ಷಣ ಇಲಾಖೆ ಅಧೀನಕ್ಕೆ ನೀಡಲು ನಿರ್ಧಾರ: ಡಿ.ಕೆ.ಶಿವಕುಮಾರ್‌

Public TV
Last updated: December 22, 2023 11:00 pm
Public TV
Share
3 Min Read
DKSHI 2
SHARE

ಬೆಂಗಳೂರು: ಬಿಬಿಎಂಪಿ ಶಾಲೆಗಳು ಇನ್ಮುಂದೆ ಶಿಕ್ಷಣ ಇಲಾಖೆ ಅಧೀನಕ್ಕೆ ನೀಡಲು ಬಿಬಿಎಂಪಿ ನಿರ್ಧಾರ ಮಾಡಿದೆ. ಇಂದು (ಶುಕ್ರವಾರ) ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಬಿಎಂಪಿ ಶಾಲೆಗಳನ್ನ ಶಿಕ್ಷಣ ‌ಇಲಾಖೆಗೆ ನೀಡುವ ನಿರ್ಧಾರ ಮಾಡಲಾಯ್ತು.

ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಬಿಎಂಪಿ (BBMP) ಶಾಲೆಗಳನ್ನು ಇನ್ಮುಂದೆ ಶಿಕ್ಷಣ ಇಲಾಖೆ ಸುಪರ್ದಿಗೆ ನೀಡಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷ ಫಲಿತಾಂಶದಲ್ಲಿ ಬಿಬಿಎಂಪಿ ಶಾಲೆಗಳಲ್ಲಿ ಕುಸಿತ ಕಂಡಿರುವುದನ್ನು ನಾವು ಗಮನಿಸಿದ್ದೇವೆ. ಇದಕ್ಕೆ ಅವಕಾಶ ನೀಡಬಾರದು. ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಲು ಈ ತೀರ್ಮಾನ ಮಾಡಲಾಗಿದೆ. ಶಾಲೆಗಳಲ್ಲಿ ಶಿಕ್ಷಣ ನೀಡುವಂತಹ ಜವಾಬ್ದಾರಿಯನ್ನು ಮಾತ್ರ ಶಿಕ್ಷಣ ಇಲಾಖೆಗೆ ನೀಡಲಾಗುತ್ತಿದ್ದು, ಈ ಶಾಲೆಗಳ ಮೂಲಸೌಕರ್ಯಗಳ ಉನ್ನತೀಕರಣ ಹಾಗೂ ನಿರ್ವಹಣೆಯನ್ನು ಬಿಬಿಎಂಪಿಯಿಂದಲೇ ಮಾಡಲಾಗುವುದು. ಶಾಲೆಯ ಜಾಗ, ಕಟ್ಟಡ ನಿರ್ವಹಣೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಪಾಲಿಕೆಯಿಂದಲೇ ನಿರ್ವಹಿಸಲಾಗುವುದು. ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಪ್ರಕರಣ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್.ಅಶೋಕ್ ವಾಗ್ದಾಳಿ

BBMP

ಸಿಎಸ್ಆರ್ ನಿಧಿಯ ಮೂಲಕ ಪಂಚಾಯ್ತಿ ಮಟ್ಟದಲ್ಲಿ 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಮಾಡುವ ಗುರಿ ಸರ್ಕಾರದ ಮುಂದಿದೆ. ಮೊದಲ ವರ್ಷ 500 ಶಾಲೆಗಳ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಮುಂದಿನ ತಿಂಗಳು ಮೊದಲನೇ ಅಥವಾ ಎರಡನೇ ವಾರದಲ್ಲಿ ಎಲ್ಲಾ ಸಿಎಸ್ಆರ್ ಕಂಪನಿಗಳನ್ನು ಕರೆದು ಅವರಿಗೆ ಈ ಶಾಲೆಗಳ ನಿರ್ಮಾಣ ಯೋಜನೆಗಳನ್ನು ನೀಡುತ್ತೇವೆ. ಕಂಪನಿಗಳು ನಮಗೆ ಗುಣಮಟ್ಟದ ಮೂಲಸೌಕರ್ಯವಿರುವ ಶಾಲೆಗಳನ್ನು ನಿರ್ಮಿಸಿ ಕೊಡಲಿದ್ದಾರೆ. ಪ್ರತಿ ಶಾಲೆಯ ಮೂಲಭೂತ ಸೌಕರ್ಯಕ್ಕೆ ಕನಿಷ್ಠ 4 ಕೋಟಿಯಿಂದ 7 ಕೋಟಿ ರೂ. ವರೆಗೂ ವೆಚ್ಚವಾಗಲಿದೆ. ನಾವು ಈಗಾಗಲೇ ಕೆಲವು ಕಂಪನಿಗಳ ಜತೆ ಚರ್ಚೆ ಮಾಡಿದ್ದು, ಮತ್ತೊಂದು ಸುತ್ತಿನ ಸಭೆ ಮಾಡುತ್ತೇವೆ. ಕಂಪನಿ ಅಥವಾ ಸಂಸ್ಥೆಗಳು ಸರ್ಕಾರಕ್ಕೆ ಸಿಎಸ್ಆರ್ ಹಣ ನೀಡುವ ಅಗತ್ಯವಿಲ್ಲ. ಶಾಲೆ ನಿರ್ಮಾಣಕ್ಕೆ ಬೇಕಾದ ಭೂಮಿಯನ್ನು ಕನಿಷ್ಠ 2 ಎಕರೆಯಿಂದ ಮೂರ್ನಾಲ್ಕು ಎಕರೆಯಷ್ಟು ಜಾಗವನ್ನು ಸರ್ಕಾರ ನೀಡಲಿದ್ದು, ಅಲ್ಲಿ ಈ ಸಂಸ್ಥೆಗಳು ಶಾಲೆ ನಿರ್ಮಿಸಲಿವೆ. ಶಾಲೆಯಲ್ಲಿ ಲೈಬ್ರರಿ, ತರಗತಿ, ಪ್ರಯೋಗಾಲಯ, ಶೌಚಾಲಯ ಸೇರಿದಂತೆ ಎಲ್ಲದರ ಯೋಜನೆ ನೀಡಲಾಗುವುದು. ಅವರು ಬೇಕೆಂದರೆ ಇನ್ನು ಉತ್ತಮ ಯೋಜನೆ ಮಾಡಿಕೊಂಡು ಶಾಲೆ ನಿರ್ಮಾಣ ಮಾಡಬಹುದು. ಈ ಬಗ್ಗೆ ರಾಮನಗರ ಜಿಲ್ಲೆಯಲ್ಲಿ ಪ್ರಯೋಗ ಆರಂಭವಾಗಿದೆ ಎಂದು ಹೇಳಿದರು.

ನಮ್ಮಲ್ಲಿರುವ ಉತ್ತಮ ಶೈಕ್ಷಣಿಕ ಸಂಸ್ಥೆಗಳು ಈ ಕರ್ನಾಟಕ ಪಬ್ಲಿಕ್ ಶಾಲೆಗಳ ಜವಾಬ್ದಾರಿಯನ್ನು ಹೊತ್ತುಕೊಳ್ಳಲಿವೆ. ಎಲ್ಲೆಲ್ಲಿ ಶಿಕ್ಷಕರ ಕೊರತೆ ಇದೆ ಅಲ್ಲಿ ಈ ಸಂಸ್ಥೆಗಳು ಶಿಕ್ಷಕರನ್ನು ನೇಮಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿ ವಹಿಸಿಕೊಳ್ಳಲಿವೆ. ಒಂದು ಶಿಕ್ಷಣ ಸಂಸ್ಥೆ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಒಂದು ಅಥವಾ ಎರಡು ಮೂರು ಶಾಲೆಗಳ ಜವಾಬ್ದಾರಿಯನ್ನು ಪಡೆಯಬಹುದಾಗಿದೆ. ಸರ್ಕಾರಿ ಶಿಕ್ಷಕರ ಜತೆಗೆ ಈ ಶಿಕ್ಷಣ ಸಂಸ್ಥೆಗಳು ಶಿಕ್ಷಕರನ್ನು ಒದಗಿಸಲಿವೆ. ಈಗಾಗಲೇ ಇದರ ಬಗ್ಗೆ ಕೆಲವು ಶಿಕ್ಷಣ ಸಂಸ್ಥೆಗಳ ಜತೆ ಚರ್ಚೆ ಮಾಡಲಿದ್ದು, ಎಲ್ಲಾ ಪಬ್ಲಿಕ್ ಶಾಲೆಗಳು ಸರ್ಕಾರಿ ಶಾಲೆಯಾಗಿ ಕಾರ್ಯನಿರ್ವಹಿಸಲಿವೆ. ಈ ಮೂಲಕ ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣಕ್ಕಾಗಿ ನಗರಗಳತ್ತ ವಲಸೆ ಬರುವುದನ್ನು ತಪ್ಪಿಸಲಾಗುವುದು. ಈ ವಿಚಾರವಾಗಿ ಸಮಿತಿ ರಚನೆ ಬಗ್ಗೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದೇನೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಹಿಜಬ್‌ ನಿಷೇಧ ವಾಪಸ್‌: ಸಿಎಂ ಸಿದ್ದರಾಮಯ್ಯ ಘೋಷಣೆ

ಈಗಾಗಲೇ ನಮ್ಮ ಬಳಿ 1,900 ಕೋಟಿ ರೂ.ಗಳಷ್ಟು ಸಿಎಸ್ಆರ್ ನಿಧಿ ನೀಡಲು ಹಲವು ಸಂಸ್ಥೆಗಳು ಮುಂದೆ ಬಂದಿವೆ. ಇದಕ್ಕಾಗಿ ನೀಲನಕ್ಷೆ ಸಿದ್ಧವಾಗಿದೆ. ಮುಂದಿನ 15ರಿಂದ 20 ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಸಿಎಸ್ಆರ್ ಸಂಸ್ಥೆಗಳನ್ನು ಕರೆಸಿ ಸಭೆ ಮಾಡುತ್ತೇವೆ. ಈ ಶಾಲೆಗಳು ತಾಲೂಕು ಅಥವಾ ಜಿಲ್ಲಾ ಕೇಂದ್ರದಲ್ಲಿ ಇರುವುದಿಲ್ಲ. ಈ ಶಾಲೆಗಳೇನಿದ್ದರೂ ಹೋಬಳಿ ಅಥವಾ ಪಂಚಾಯ್ತಿ ಮಟ್ಟದಲ್ಲಿ ಮಾತ್ರ ಇರುತ್ತವೆ. ಒಂದು ದೊಡ್ಡ ಸಾಹಸಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಿಗೆ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ನಾವು ಮನೆ ಬಾಗಿಲಲ್ಲೇ ಶಾಲೆ ಆರಂಭಿಸಲು ಆಗುವುದಿಲ್ಲ. ಸ್ಥಳೀಯ ಮಟ್ಟದಲ್ಲಿ ಅದರ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಬೆಂಗಳೂರು ಅಥವಾ ಇತರೆ ನಗರಗಳಿಗೆ ವಲಸೆ ಬರುವುದನ್ನು ತಪ್ಪಿಸುವ ಉದ್ದೇಶದಿಂದ ಪಂಚಾಯ್ತಿ ಮಟ್ಟದಲ್ಲಿ ಶಾಲೆ ಮಾಡುತ್ತಿದ್ದೇವೆ. ಕೆಲವು ಕಡೆಗಳಲ್ಲಿ ಬಸ್ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

TAGGED:bbmpd k shivakumarmadhu bangarappaಡಿ.ಕೆ.ಶಿವಕುಮಾರ್ಬಿಬಿಎಂಪಿಮಧು ಬಂಗಾರಪ್ಪ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

KR Puram Hit And Run Delivery Boy Death
Bengaluru City

ಬೆಂಗಳೂರಲ್ಲಿ ಹಿಟ್ & ರನ್‌ಗೆ ಡೆಲಿವರಿ ಬಾಯ್ ಬಲಿ

Public TV
By Public TV
10 minutes ago
pm modi rozgar mela
Latest

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

Public TV
By Public TV
11 minutes ago
Republic Day 2
Latest

Republic Day 2026 | ದೆಹಲಿ ಪರೇಡ್‌ಗೆ ಕರ್ನಾಟಕದ 12 ವಿದ್ಯಾರ್ಥಿಗಳು ಆಯ್ಕೆ

Public TV
By Public TV
20 minutes ago
Thawar Chand Gehlot Siddaramaiah
Bengaluru City

ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ

Public TV
By Public TV
34 minutes ago
encounter
Crime

ಭದ್ರತಾ ಪಡೆಗಳ ಗುಂಡಿಗೆ ಐವರು ಮಹಿಳೆಯರು ಸೇರಿ 17 ಮಂದಿ ನಕ್ಸಲರು ಬಲಿ

Public TV
By Public TV
42 minutes ago
revenu dept staff
Kalaburagi

ಲಂಚ ಪಡೆಯುವಾಗ ಕಂದಾಯ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?