ನಟ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಘೋಷಿಸಿ : ಸೇನಾನಿ ವೀರಕಪುತ್ರ ಶ್ರೀನಿವಾಸ್ ಆಗ್ರಹ

Public TV
2 Min Read
FotoJet 1 60

ತತ ಹದಿಮೂರು ವರ್ಷಗಳ ನಂತರ ಡಾ.ವಿಷ್ಣುವರ್ಧನ್ (Vishnuvardhan) ಸ್ಮಾರಕ ಉದ್ಘಾಟನೆಯಾಗುತ್ತಿದೆ.  ಕೋಟ್ಯಂತರ ಅಭಿಮಾನಿಗಳು ಹಾಗೂ ಕುಟುಂಬದ ಬಹು ದೊಡ್ಡ ಕನಸಾಗಿದ್ದ ವಿಷ್ಣು ಸ್ಮಾರಕ ನಾಳೆ ಲೋಕಾರ್ಪಣೆಯಾಗುತ್ತಿದೆ. ಈ ಬಗ್ಗೆ ವಿಷ್ಣು ಅಭಿಮಾನಿಗಳ ಪರವಾಗಿ ಡಾ.ವಿಷ್ಣು ಸೇನಾ ಸಮಿತಿ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಡೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಜೊತೆಗೆ ಒಂದಿಷ್ಟು ಬೇಡಿಕೆಯನ್ನೂ ಅವರು  ಸರ್ಕಾರದ ಮುಂದಿಟ್ಟಿದ್ದಾರೆ.

FotoJet 2 52

ಡಾ ವಿಷ್ಣುವರ್ಧನ್ ಸ್ಮಾರಕ 13 ವರ್ಷಗಳ ನಂತರ ಲೋಕಾರ್ಪಣೆ ಆಗುತ್ತಿದೆ. ಸ್ಮಾರಕಕ್ಕಾಗಿ ನಮ್ಮ ಹೋರಾಟ, ನೋವು, ಕಾಯುವಿಕೆ ಲೆಕ್ಕಕ್ಕೆ ಇಡದಷ್ಟು. ಕುಟುಂಬದವರು ಇದಕ್ಕಾಗಿ ಸಾಕಷ್ಟು ಹೋರಾಟ ನಡೆಸಿ ಅವರಿಂದಾಗಿಯೇ ಸ್ಮಾರಕ ಮೈಸೂರಿನಲ್ಲಿ ಆಗಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ (Basavaraja Bommai) ಆಗಮಿಸುತ್ತಿದ್ದಾರೆ. ಚಿತ್ರರಂಗದವರನ್ನು ಕೂಡ ಕಾರ್ಯಕ್ರಮಕ್ಕೆ ಆಹ್ವಾನಿಸುವ ಕೆಲಸ ನಡೆಯುತ್ತಿದೆ. ನಟ ಸುದೀಪ್ ಅವರು ಫೆಬ್ರವರಿಯಲ್ಲಿ ಸ್ಮಾರಕಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಯಶ್ ಅವರಿಗೆ ಆಹ್ವಾನ ನೀಡಬೇಕಿದೆ ಎಂದು ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. ಇದನ್ನೂ ಓದಿ: ವಿಷ್ಣುವರ್ಧನ್ ಪರಭಾಷಾ ನಟರಾ?: ಫಿಲ್ಮ್ ಚೇಂಬರ್ ವಿರುದ್ಧ ವೀರಕಪುತ್ರ ಶ್ರೀನಿವಾಸ್ ಆಕ್ರೋಶ

FotoJet 1 59

ಚಿತ್ರರಂಗದ ಮೇರು ನಟ, ಪಂಚಭಾಷೆ ತಾರೆಯಾಗಿದ್ದ ವಿಷ್ಣು ಸ್ಮಾರಕ ಉದ್ಘಾಟನೆಗೆ ಅವರ ಗೆಳೆಯರಾದ ಅಕ್ಷಯ್ ಕುಮಾರ್, ಚಿರಂಜೀವಿ, ಮೋಹನ್ ಲಾಲ್, ರಜನಿಕಾಂತ್ ಸೇರಿದಂತೆ ಹಲವರನ್ನು ಸರ್ಕಾರ ಆಹ್ವಾನಿಸುತ್ತದೆ ಎಂದು ಅಂದುಕೊಂಡಿದ್ದೆವು. ಆದ್ರೆ ಆ ಕೆಲಸ ಆಗಿಲ್ಲ. ಅಭಿಮಾನಿಗಳಾಗಿ ನಮಗೆ ಇದು ಬೇಸರ ತರಿಸಿದೆ. ಬೇರೆ ನಟರ ಕಾರ್ಯಕ್ರಮಗಳಿಗೆ ನೀಡುವ ಮನ್ನಣೆಯನ್ನು ಸರ್ಕಾರ ವಿಷ್ಣು ಅವರ ಸ್ಮಾರಕ ಉದ್ಘಾಟನೆ ವಿಚಾರದಲ್ಲಿ ನೀಡುತ್ತಿಲ್ಲ.

FotoJet 79

ಚಿತ್ರರಂಗದ ಹಿರಿಯ, ಕಿರಿಯ ಹಾಗೂ ಸ್ಟಾರ್ ನಟರುಗಳ್ಯಾರು ಕೂಡ ಸ್ಮಾರಕದ ಕುರಿತಾಗಿ ಮಾತನಾಡುತ್ತಿಲ್ಲ. ಸ್ಮಾರಕ ಉದ್ಘಾಟನೆ ವೇಳೆ ಸರ್ಕಾರ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಘೋಷಿಸಬೇಕು ಜೊತೆಗೆ ಅವರ ಪುಣ್ಯಭೂಮಿ ಅಭಿವೃದ್ದಿಗೆ ಅಭಿಮಾನಿಗಳಿಗೆ ಅವಕಾಶ ಮಾಡಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸೋದಾಗಿ ವೀರಕಪುತ್ರ ಶ್ರೀನಿವಾಸ್ ಇದೇ ವೇಳೆ ತಿಳಿಸಿದರು.

FotoJet 3 41

ಸ್ಮಾರಕ ಉದ್ಘಾಟನೆಯಾಗುವ ದಿನ ಮೈಸೂರಿನಿಂದ ಸ್ಮಾರಕದವರೆಗೆ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದಿಂದ ವಿಶೇಷ ಬಸ್ ವ್ಯವಸ್ಥೆ ಮಾಡಿಸಬೇಕು. ಬೆಂಗಳೂರಿನಿಂದ ಸ್ಮಾರಕದವರೆಗೆ 700 ವಾಹನಗಳ ಬೃಹತ್ ಜಾಥಾ ಹಮ್ಮಿಕೊಂಡಿರುವುದರಿಂದ ಅಭಿಮಾನಿಗಳಿಗೆ ಅನುಕೂಲವಾಗುವಂತೆ ಅಗತ್ಯವಿದ್ದ ಕಡೆ ಟ್ರಾಫಿಕ್ ಕ್ಲಿಯರೆನ್ಸ್ ಗೆ ಆದೇಶಿಸಬೇಕು ಎಂದು ಹಲವು ಬೇಡಿಕೆಯನ್ನು ವಿಷ್ಣು ಅಭಿಮಾನಿಗಳ ಪರವಾಗಿ ವೀರಕಪುತ್ರ ಶ್ರೀನಿವಾಸ್ ಸರ್ಕಾರದ ಮುಂದಿಟ್ಟಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *