ಸಾಲಬಾಧೆ ತಾಳಲಾರದೆ ಬೀದರ್ ರೈತ ಆತ್ಮಹತ್ಯೆ

Public TV
1 Min Read
BDR FARMER SUICIDE STILL

ಬೀದರ್: ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆ ಔರಾದ್ ತಾಲೂಕಿನ ಪಾಶಾಪೂರ್ ಗ್ರಾಮದಲ್ಲಿ ನಡೆದಿದೆ.

ರಾಜಪ್ಪ ಬಿರಾದರ್ (42) ಆತ್ಮಹತ್ಯೆಗೆ ಶರಣಾದ ರೈತ. ವಿವಿಧ ಬ್ಯಾಂಕುಗಳಲ್ಲಿ ಆರು ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅಲ್ಲದೆ, ಈ ಬಾರಿಯಾದರೂ ಮುಂಗಾರು ಮಳೆ ಉತ್ತಮವಾಗಿ ಬೆಳೆ ಚೆನ್ನಾಗಿ ಬರುತ್ತದೆ ಎಂಬ ನಂಬಿಕೆಯಿಂದ ಮತ್ತೆ ಬ್ಯಾಂಕ್‍ನಲ್ಲಿ ಸಾಲ ಮಾಡಿ ಬಿತ್ತನೆ ಮಾಡಿದ್ದರು. ಆದರೆ, ಮುಂಗಾರು ಮಳೆ ಕೈಕೊಟ್ಟಿದೆ. ಇದೇ ಬೇಸರದಿಂದ ರಾಜಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

money 1

ಸಾಲ ಮಾಡಿ ಬಿತ್ತನೆ ಮಾಡಿದ್ದ ರೈತನಿಗೆ ಮುಂಗಾರು ಬಳೆ ಸಮರ್ಪಕವಾಗಿ ಬಾರದೇ ಬರದ ಛಾಯೆ ಆವರಿಸಿದೆ. ಇನ್ನೊಂದೆಡೆ ಸರ್ಕಾರದ ಸಾಲ ಮನ್ನಾ ಯೋಜನೆಯು ಸಮರ್ಪಕವಾಗಿ ಜಾರಿಯಾಗಿಲ್ಲ. ಇದೆಲ್ಲದರಿಂದ ಮನನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದು ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

money 1

ಇತ್ತೀಚೆಗಷ್ಟೇ ಸಾಲಬಾಧೆ ತಾಳಲಾರದೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಈ ಘನೆ ನಡೆದಿದೆ. ಅಲ್ಲದೆ, ಮಂಡ್ಯದ ರೈತನೋರ್ವ ರೈತರಿಗೆ ಎದುರಾಗಿರುವ ನೀರಿನ ಸಮಸ್ಯೆಯನ್ನು ಮುಖ್ಯಮಂತ್ರಿಗೆ ತಿಳಿಸಲು ಆತ್ಮಹತ್ಯೆ ಮಾಡಿಕೊಂಡಿದ್ದರು. ನಮ್ಮ ಜಿಲ್ಲೆಯಲ್ಲಿ 150 ಅಡಿ ಕೊಳವೆ ಬಾವಿ ಕೊರೆದರೆ ನೀರು ಉಕ್ಕುತ್ತಿತ್ತು. ಇದೀಗ 1,500 ಅಡಿ ಕೊಳವೆ ಬಾವಿ ಕೊರೆದರೂ ನೀರು ಬರುತ್ತಿಲ್ಲ. ಇದಕ್ಕೆ ಪರಿಹಾರ ಕಲ್ಪಿಸಬೇಕಿದೆ ಹೀಗಾಗಿ ಮುಖ್ಯಮಂತ್ರಿಗಳು ನನ್ನ ಅಂತ್ಯ ಸಂಸ್ಕಾರಕ್ಕೆ ಬರಬೇಕು ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *