Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೀಪಾವಳಿ 2025 – ಬಲಿಪಾಡ್ಯಮಿ ಹಬ್ಬದ ಮಹತ್ವ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೀಪಾವಳಿ 2025 – ಬಲಿಪಾಡ್ಯಮಿ ಹಬ್ಬದ ಮಹತ್ವ ಏನು?

Latest

ದೀಪಾವಳಿ 2025 – ಬಲಿಪಾಡ್ಯಮಿ ಹಬ್ಬದ ಮಹತ್ವ ಏನು?

Public TV
Last updated: October 21, 2025 8:14 am
Public TV
Share
3 Min Read
Deepavali What is the significance of Balipadyami festival
SHARE

ದೀಪ ಪ್ರತಿಪದ ಉತ್ಸವವೇ ದೀಪಾವಳಿ. ದೀಪ ಎಂದರೆ ಬೆಳಕು, ಪ್ರತಿಪದ ಎಂದರೆ ಆರಂಭ ಮತ್ತು ಉತ್ಸವ ಎಂದರೆ ಹಬ್ಬ. ದೀಪಾವಳಿ (Deepavali) ಒಂದೇ ದಿನಕ್ಕೆ ಮುಗಿಯುವ ಹಬ್ಬವಲ್ಲ. ಒಟ್ಟು ಮೂರು ದಿನ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಮೊದಲ ದಿನ ಮನೆಯವರೆಲ್ಲರೂ ಎಣ್ಣೆ ಸ್ನಾನ ಮಾಡುವ ನರಕ ಚತುದರ್ಶಿ, ಎರಡನೇ ದಿವಸ ಅಮಾವಾಸ್ಯೆ, ಮೂರನೇ ದಿನವೇ ಬಲಿ ಪಾಡ್ಯಮಿ. ದೀಪಾವಳಿ ಬಲಿಪಾಡ್ಯಮಿಯೊಂದಿಗೆ (Balipadyami) ಈ ಮೂರು ದಿನಗಳ ಹಬ್ಬ ಮುಗಿಯುತ್ತದೆ.

ಅಮಾವಾಸ್ಯೆಯ ನಂತರದ ಪಾಡ್ಯದಂದು ರಾಕ್ಷಸರ ಅರಸನಾದ ಬಲೀಂದ್ರನ ಪೂಜೆಯನ್ನು ನಡೆಸುವುದರಿಂದ ಈ ದಿನವನ್ನು ಬಲಿಪಾಡ್ಯಮಿ ಎಂದೇ ಕರೆಯಲಾಗುತ್ತದೆ. ಹಿರಣ್ಯ ಕಶ್ಯಪುವಿನ ವಂಶಸ್ಥನಾದ ಇವನು ದಾನವನಾದರೂ ಈ ದಿನ ಬಲೀಂದ್ರನನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತದೆ.

ಪ್ರಜೆಗಳನ್ನು ಬಹಳ ಚೆನ್ನಾಗಿ ನೋಡಿಕೊಳ್ಳುತ್ತಿದ್ದ ದಾನಶೂರ ದೈತ್ಯರಾಜ ಬಲಿ ಚಕ್ರವರ್ತಿ (Bali Maharaja) ಮಹಾವಿಷ್ಣುವಿನ ಮಹಾನ್‌ ಭಕ್ತ. ರಾಕ್ಷಸ ರಾಜನಾದರೂ ದಾನ ಧರ್ಮದಿಂದ ಹೆಸರುವಾಸಿಯಾಗಿದ್ದ ಬಲಿ ಮಹಾರಾಜನಿಗೆ ತನ್ನ ರೀತಿಯಲ್ಲಿ ಬೇರೆ ಯಾರು ಪ್ರಜೆಗಳನ್ನು ನೋಡಿಕೊಳ್ಳುವುದಿಲ್ಲ ಎಂಬ ಅಹಂಕಾರ ಇತ್ತು. ಬಲಿ ರಾಜನ ಸುತ್ತಮುತ್ತಲಿರುವವರೆಲ್ಲ ಕೆಟ್ಟವರಾಗಿರುತ್ತಾರೆ. ತಾನು ಕೆಟ್ಟವನಲ್ಲದಿದ್ದರೂ ತನ್ನ ಸುತ್ತಲಿನ ರಾಕ್ಷಸರು ಮಾಡುತ್ತಿರುವ ಕೆಲಸಗಳಿಗೆ ಪ್ರೋತ್ಸಾಹ ನೀಡುತ್ತಿದ್ದ. ಇವರ ಕಾಟ ಹೆಚ್ಚಾಗುತ್ತಿದ್ದಂತೆ ಹೇಗಾದರೂ ಮಾಡಿ ಬಲಿಯನ್ನು ಸಂಹಾರ ಮಾಡಬೇಕೆಂದು ದೇವತೆಗಳು ವಿಷ್ಣುವಿನ ಬಳಿ ಪ್ರಾರ್ಥನೆ ಮಾಡುತ್ತಾರೆ.  ಇದನ್ನೂ ಓದಿ:  ಭಾರತದಲ್ಲಿ ಮಾತ್ರವಲ್ಲ, ಈ ದೇಶಗಳಲ್ಲಿಯೂ ದೀಪಾವಳಿ ಆಚರಣೆ ಬಲು ಜೋರು!

ದೇವತೆಗಳಿಗೆ ಅಭಯ ನೀಡಿದ ವಿಷ್ಣು ವಾಮನನ (ಬಾಲಕ) ರೂಪದಲ್ಲಿ ಬಲಿ ಮಹಾರಾಜನ ಬಳಿ ಬಂದು ದಾನವನ್ನು ಕೇಳುತ್ತಾನೆ. ಬಲೀಂದ್ರ ರಾಜ ಕೊಡುಗೈ ದಾನಿ. ನಿನಗೆ ಏನು ಬೇಕೆಂದು ಕೇಳು ಎಂದು ವಾಮನನಿಗೆ (Vamana) ಹೇಳುತ್ತಾನೆ. ಆಗ ವಾಮನ, ನನ್ನ ಮೂರು ಹೆಜ್ಜೆ ಊರುವಷ್ಟು ಭೂಮಿಯನ್ನು ದಾನವಾಗಿ ನೀಡಬಹುದೇ ಎಂದು ಕೇಳುತ್ತಾನೆ.

ಪ್ರಜಾಪರಿಪಾಲನೆಯಲ್ಲಿ ಹೆಸರು ಮಾಡಿರುವ ನನಗೆ ಈ ಪುಟ್ಟ ಬಾಲಕನ ಬೇಡಿಕೆಯನ್ನು ಈಡೇರಿಸುವ ಯೋಗ್ಯತೆ ಇಲ್ವಾ ಎಂಬ ಅಹಂಕಾರದಿಂದ ಬಲೀಂದ್ರ ಮಹಾರಾಜ ವಾಮನನಿಗೆ, ನೀನು ಕೇಳಿದ ಮೂರು ಹೆಜ್ಜೆ ಊರುವಷ್ಟು ಜಾಗ ನೀಡುತ್ತೇನೆ ಎಂದು ವಚನವನ್ನು ಕೊಡುತ್ತಾನೆ.

story of Bali and Vamana 2

 

ಭೂಮಿಯನ್ನು ದಾನ ಪಡೆಯುವಾಗ ವಾಮನಮೂರ್ತಿ ಆಕಾಶದ ಉದ್ದಕ್ಕೂ ಬೆಳೆಯುತ್ತಾನೆ. ಒಂದು ಪಾದವನ್ನು ಭೂಮಿ ಮೇಲೆ, ಮತ್ತೊಂದು ಪಾದವನ್ನು ಆಕಾಶದ ಮೇಲೆ ಇರಿಸುತ್ತಾನೆ. ಇನ್ನೊಂದು ಪಾದ ಇಡಲು ಜಾಗ ಕಾಣುತ್ತಿಲ್ಲ ಎಲ್ಲಿ ಇಡಬೇಕು ಎಂದು ಕೇಳಿದಾಗ ಬಲಿ ಚಕ್ರವರ್ತಿಗೆ ಜ್ಞಾನೋದಯವಾಗಿ ನನ್ನ ತಲೆ ಮೇಲೆ ಪಾದ ಇಡು ಎಂದು ಹೇಳುತ್ತಾನೆ. ನನ್ನ ತಲೆ ಮೇಲೆ ನಿಮ್ಮ ಪಾದ ಇಡುವ ಮೂಲಕ ನನ್ನಲ್ಲಿರುವ ಅಹಂಕಾರವೆಲ್ಲ ನಾಶವಾಗಲಿ ಎಂದು ವಾಮನನ ಬಳಿ ಬಲಿ ಕ್ಷಮೆ ಕೇಳುತ್ತಾನೆ. ವಾಮನ ತನ್ನ ಪಾದವನ್ನು ಬಲೀಂದ್ರ ಮಹಾರಾಜನ ಮೇಲೆ ಇರಿಸಿ ಪಾತಾಳಕ್ಕೆ ಕಳುಹಿಸುತ್ತಾನೆ.

ತಲೆ ಮೇಲೆ ಕಾಲನ್ನು ಇಡುವ ಮುನ್ನ ವಾಮನ ಬಳಿ ಬಲಿ, ನಾನು ನನ್ನ ಮಕ್ಕಳಂತೆ ಪ್ರಜೆಗಳನ್ನು ನೋಡಿದ್ದೇನೆ. ಹೀಗಾಗಿ ಪ್ರಜೆಗಳನ್ನು ನೋಡಲು ಅವಕಾಶ ನೀಡಬೇಕೆಂದು ಪ್ರಾರ್ಥನೆ ಮಾಡಿಕೊಳ್ಳುತ್ತಾನೆ. ಈ ಪ್ರಾರ್ಥನೆ ಸ್ವೀಕರಿಸಿದ ವಾಮನ ಅಸ್ತು ಎಂದು ಹೇಳಿ ತಲೆಯ ಮೇಲಿಟ್ಟು ಬಲಿ ಚಕ್ರವರ್ತಿಯನ್ನು ಪಾತಾಳಕ್ಕೆ ತುಳಿದುಬಿಡುತ್ತಾನೆ.

ಬಲಿಯ ಭಕ್ತಿಯನ್ನು ಮತ್ತು ದಾನಶೀಲಗುಣವನ್ನು ಮೆಚ್ಚಿದ ವಿಷ್ಣು ಪ್ರತಿವರ್ಷ ಒಂದು ದಿನ ಅವನ ಹೆಸರಿನಲ್ಲಿ ಪೂಜೆ ನಡೆಯುವಂತೆ ವರ ನೀಡುತ್ತಾನೆ. ಅದೇನೆಂದರೆ ಆಶ್ವಯುಜ ಮಾಸದಲ್ಲಿ ಮೂರು ದಿವಸಗಳ ಕಾಲ ನೀನು ಭೂಲೋಕಕ್ಕೆ ಬರಬಹುದು. ಅಲ್ಲಿ ನಿನ್ನನ್ನು ಜನತೆ ಪೂಜೆ ಮಾಡುವರು. ಇದರ ಫಲವಾಗಿಯೇ ದೀಪಾವಳಿ ಸಮಯದಲ್ಲಿ ಎಲ್ಲರೂ ದೀಪ ಹಚ್ಚಿ ಬಲೀಂದ್ರ ಪೂಜೆ ಕೈಗೊಳ್ಳುತ್ತಾರೆ. ಆಶ್ವಯುಜ ಕೃಷ್ಣ ಚತುರ್ದಶಿ, ಅಮಾವಾಸ್ಯೆ ಮತ್ತು ಕಾರ್ತಿಕ ಶುದ್ಧ ಪಾಡ್ಯ. ಇದನ್ನು ಬಲಿರಾಜ್ಯವೆಂದು ಹೇಳುತ್ತಾರೆ. ಆ ರೀತಿ ಆಚರಿಸಲ್ಪಡುವ ಕೊನೆಯ ದಿನವೇ ಬಲಿಪಾಡ್ಯಮಿ. ಈ ಅವಧಿಯಲ್ಲಿ ಬಲಿ ಚಕ್ರವರ್ತಿ ಪಾತಾಳದಿಂದ ಭೂಲೋಕ ಸಂಚಾರಕ್ಕೆ ಬರುತ್ತಾನೆಂಬ ನಂಬಿಕೆಯಲ್ಲಿ ಬಲೀಂದ್ರ ಪೂಜೆ ನಡೆಯುತ್ತದೆ.

ದೀಪಾವಳಿಯ ದಿನದಂದು ಪ್ರಜೆಗಳನ್ನು ನೋಡಲು ಬಲೀಂದ್ರ ಮಹಾರಾಜ ಬರುತ್ತಾನೆ ಎಂಬ ನಂಬಿಕೆಯಿಂದ ಜನರು ಅಭ್ಯಂಜನ ಸ್ನಾನಾದಿಗಳನ್ನು ಮಾಡಿಕೊಂಡು ಮನೆಯ ಎಲ್ಲ ಪಾತ್ರೆಗಳಲ್ಲಿ ಶುದ್ಧವಾದ ನೀರನ್ನು ತುಂಬಿಸುತ್ತಾರೆ. ಎಣ್ಣೆ ಸ್ನಾನ ಮಾಡುವಾಗ ಸಪ್ತ ಚಿರಂಜೀವಿಗಳನ್ನು ಹೇಳುವ ಅಶ್ವತ್ಥಾಮೋ ಬಲಿರ್ವ್ಯಾಸೋ ಹನೂಮಾಶ್ಛ ವಿಭೀಷಣಃ | ಕೃಪಃ ಪರಶುರಾಮಶ್ಚ ಸಪ್ತೇತೇಃ ಚಿರಂಜೀವಿನಃ | ಶ್ಲೋಕವನ್ನು ಹೇಳುತ್ತಾರೆ. ಹಿಂದೂ ಪುರಾಣಗಳ ಪ್ರಕಾರ ರಾಮಾಯಣ ಮತ್ತು ಮಹಾಭಾರತಗಳಿಗೆ ಸಂಬಂಧಿಸಿದ ಏಳು ಪೌರಾಣಿಕ ವ್ಯಕ್ತಿಗಳನ್ನು ಚಿರಂಜೀವಿಗಳು ಎಂದು ನಂಬಲಾಗಿದೆ. ಅಶ್ವತ್ಥಾಮ, ಬಲೀಂದ್ರ, ವೇದವ್ಯಾಸ, ಹನುಮಂತ, ವಿಭೀಷಣ, ಕೃಪಾಚಾರ್ಯ, ಪರಶುರಾಮನನ್ನು ಸ್ತುತಿಸಿದರೆ ಆಯಸ್ಸು ಹೆಚ್ಚಾಗುತ್ತದೆ ಎಂಬ ನಂಬಿಕೆಯಿದೆ.

TAGGED:balipadyamiDeepavaliVamanaದೀಪಾವಳಿಬಲಿಪಾಡ್ಯಮಿವಾಮನ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

PUC Exam
Bagalkot

All The Best Students – ಇಂದಿನಿಂದ ದ್ವಿತೀಯ PUC ಪರೀಕ್ಷೆ; ಅಕ್ರಮ ತಡೆಗೆ ಕಟ್ಟೆಚ್ಚರ

Public TV
By Public TV
9 minutes ago
Blood Moon
Bengaluru City

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Public TV
By Public TV
42 minutes ago
Raichur Accident
Crime

ರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
45 minutes ago
Chikkaballapura Lover
Chikkaballapur

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ – ಪುಟ್ಟ ಮಕ್ಕಳಿಬ್ಬರು ಅನಾಥ!

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ: 28-02-2026

Public TV
By Public TV
1 hour ago
Sharanprakash Patil 1
Kalaburagi

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ದ್ವಿಗುಣ: ಶರಣಪ್ರಕಾಶ ಪಾಟೀಲ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?