Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನರಕ ಚತುರ್ದಶಿ ಏಕೆ ಆಚರಿಸ್ತಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನರಕ ಚತುರ್ದಶಿ ಏಕೆ ಆಚರಿಸ್ತಾರೆ?

Bengaluru City

ನರಕ ಚತುರ್ದಶಿ ಏಕೆ ಆಚರಿಸ್ತಾರೆ?

Public TV
Last updated: November 11, 2023 5:33 pm
Public TV
Share
2 Min Read
1
SHARE

ನರಕ ಚತುರ್ದಶಿ ದೀಪಾವಳಿಯ (Deepavali Festival) 2ನೇ ಮಹತ್ವದ ದಿನವಾಗಿದೆ. ಇದನ್ನು ಪ್ರತಿವರ್ಷ ಕಾರ್ತಿಕ ಮಾಸದ 14ನೇ ದಿನದಂದು ಆಚರಿಸಲಾಗುತ್ತದೆ. ಈ ದಿನ ಶ್ರೀಕೃಷ್ಣ ಮತ್ತು ಸತ್ಯಭಾಮಾ ಇಬ್ಬರೂ ಸೇರಿ ನರಕಾಸುರ ಎಂಬ ರಾಕ್ಷಸನನ್ನು ಸಂಹಾರ (Narakasura Vadha) ಮಾಡಿದರು. ಅದಕ್ಕಾಗಿ ನರಕ ಚತುರ್ದಶಿ ಆಚರಣೆಗೆ ಬಂದಿತು ಎಂಬ ನಂಬಿಕೆಯಿದೆ. ಇದಕ್ಕೆ ಭಾಗವತ ಪುರಾಣದಲ್ಲಿ ಉಲ್ಲೇಖಗಳಿವೆ ಎನ್ನುತ್ತಾರೆ. ಆದ್ರೆ ಕಾಳಿಕಾ ಪುರಾಣದಲ್ಲಿ ಮಹಾಕಾಳಿ (Mahakali) ಈ ದಿನದಂದು ನರಕಾಸುರನನ್ನು ಸಂಹರಿಸಿದಳು, ಅದಕ್ಕಾಗಿ ನರಕ ಚತುರ್ದಶಿ ಆಚರಣೆಗೆ ಬಂತು ಎಂಬ ಉಲ್ಲೇಖಗಳಿವೆ.

2

ಭಾಗವತಾ ಪುರಾಣ ಕಥೆ ಹೇಳುವಂತೆ, ಹಿಂದೆ ಪ್ರಾಗ್‌ಜ್ಯೋತಿಷಪುರ ಎಂಬಲ್ಲಿ ಭೌಮಾಸುರ ಅಥವಾ ನರಕಾಸುರನೆಂಬ ಒಬ್ಬ ಬಲಾಢ್ಯ ರಾಕ್ಷಸನು ರಾಜ್ಯವನ್ನಾಳುತ್ತಿದ್ದನು. ಅವನು ದೇವತೆಗಳಿಗೆ ಮತ್ತು ಮಾನವರಿಗೆ ತೊಂದರೆ ಕೊಡುತ್ತಿದ್ದ. ರಾಕ್ಷಸನಾದ ನರಕಾಸುರನು ಭೂಮಿತಾಯಿಯ ಮಗ. ಇವನ ಆಳ್ವಿಕೆಯಲ್ಲಿ ಸಾಕಷ್ಟು ದೌರ್ಜನ್ಯ ಎಸಗಿದ್ದ, ಜನರಿಗೆ ಮೋಸ ಮಾಡಿದ್ದ. ಭೂಮಿಯ ಮೇಲೆ ತನ್ನದೇ ಆಡಳಿತ ಮಾಡುತ್ತಾ ದುರಹಂಕಾರಕ್ಕೆ ಒಳಗಾಗಿದ್ದ. ನಂತರ ತಾನು ಸ್ವರ್ಗವನ್ನು ಆಳಬೇಕು ಎಂದು ಬಯಸಿದ. ಈ ಬಯಕೆಯ ಪ್ರಯುಕ್ತ ಯುದ್ಧಕ್ಕಾಗಿ ಇಂದ್ರ ದೇವನನ್ನು ಆಹ್ವಾನಿಸಿದನು.

DEEPAVALI

ಈ ದುಷ್ಟದೈತ್ಯನು ಸ್ತ್ರೀಯರನ್ನು ಪೀಡಿಸತೊಡಗಿದನು. ಅವನು ತಾನು ಜಯಿಸಿ ತಂದಿದ್ದ 16,000 ವಿವಾಹಯೋಗ್ಯ ರಾಜಕನ್ಯೆಯರನ್ನ ಸೆರೆವಾಸದಲ್ಲಿಟ್ಟು ಅವರೊಂದಿಗೆ ವಿವಾಹವಾಗುವ ಹುನ್ನಾರ ಮಾಡಿದ್ದ. ಈ ವೃತ್ತಾಂತವು ಶ್ರೀಕೃಷ್ಣನಿಗೆ ತಿಳಿದ ಕೂಡಲೇ ಅವನು ಸತ್ಯಭಾಮೆಯೊಂದಿಗೆ ಬಂದು ನರಕಾಸುರನನ್ನು ಸಂಹಾರ ಮಾಡಿ, ಸೆರೆಯಲ್ಲಿದ್ದ ರಾಜಕನ್ಯೆಯರನ್ನ ಮುಕ್ತಗೊಳಿಸಿದನು.

ಏಕೆ ಅಭ್ಯಂಗ ಸ್ನಾನ ಮಾಡಬೇಕು?
ಕೃಷ್ಣನು ಆಶ್ವಯುಜ ಮಾಸದ ಕೃಷ್ಣಪಕ್ಷದ ಚತುರ್ದಶಿ ದಿನದಂದು ನರಕಾಸುರನನ್ನು ಸಂಹರಿಸಿದ. 16000 ರಾಜಪುತ್ರಿಯರನ್ನು ಬಂಧನದಿಂದ ಬಿಡಿಸಿ ಬೆಳಗಿನ ಜಾವ ಮನೆಗೆ ಬಂದು ಅಭ್ಯಂಜನ ಸ್ನಾನ ಮಾಡಿದ. ಅಂದಿನಿಂದ ಕೃಷ್ಣ ಚತುರ್ದಶಿಯನ್ನು ನರಕ ಚತುರ್ದಶಿ ಎಂದು ಆಚರಿಸಲಾಗುತ್ತದೆ. ನರಕಾಸುರನನ್ನು ಸಂಹರಿಸಿದಾಗ ದೇಹದ ರಕ್ತದ ಕಲೆಗಳಾಗಿದ್ದರಿಂದ ಅದನ್ನು ಶುಚಿಗೊಳಿಸಲು ಶ್ರೀಕೃಷ್ಣನು ಸಹ ಎಣ್ಣೆ-ನೀರನ್ನು ಹಾಕಿಕೊಂಡಿದ್ದನು. 16000 ರಾಜಪುತ್ರಿಯರು ಕೃಷ್ಣನ ಕಡೆಗೆ ಬಂದು ಕೃತಜ್ಞತೆ ಸಲ್ಲಿಸಿ ಸಂಭ್ರಮದಿಂದ ಕೃಷ್ಣನಿಗೆ ಆರತಿ ಬೆಳಗಿ ಪೂಜಿಸಿದರು.

deepavali

ತಾಯಿ ಭೂದೇವಿ ಮಗ ನರಕಾಸುರನನ್ನು ಕಳೆದುಕೊಂಡು ದುಃಖಿಸಿದಳು. ಈ ದಿನವು ನನ್ನ ಮಗನ ಹೆಸರಿನಿಂದ ಆಚರಿಸಲ್ಪಡಲಿ. ಈ ದಿನ ಎಲ್ಲರೂ ನಿನ್ನಂತೆಯೇ ಅಭ್ಯಂಜನ ಸ್ನಾನ ಮಾಡಲಿ ಎಂದು ಕೃಷ್ಣನಲ್ಲಿ ಬೇಡಿದಳು. ಕೃಷ್ಣ ತಥಾಸ್ತು ಎಂದ. ಈ ಕಾರಣಕ್ಕೆ ನರಕಚತುರ್ದಶಿಯಂದು ಜನರು ಅಭ್ಯಂಜನ ಮಾಡುತ್ತಾರೆ. ಬೆಳಗಿನ ಜಾವ ಮಾಡುವ ಅಭ್ಯಂಜನ ಶ್ರಿಕೃಷ್ಣನೊಂದಿಗೆ ಭೂದೇವಿಗೂ ಹಿತಕರ. ಅಂದು ಜನರು ಸೂರ್ಯೋದಯಕ್ಕೂ ಮುಂಚೆ ಎದ್ದು, ಅಭ್ಯಂಗ ಸ್ನಾನ ಮಾಡುತ್ತಾರೆ. ಜೊತೆಗೆ ಬಾಳಿನ ಕತ್ತಲೆಯನ್ನು ತೊಡೆದು ಹಾಕಬೇಕೆಂಬ ನಂಬಿಕೆಯಿಂದ ಮನೆ ಮನೆಯಲ್ಲೂ ದೀಪ ಬೆಳಗಿಸುತ್ತಾರೆ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಾರೆ.

ಅಷ್ಟೇ ಅಲ್ಲದೇ ಪ್ರಾಚೀನ ವೈದ್ಯ ಪದ್ಧತಿಯಾದ ಆಯುರ್ವೇದದಲ್ಲಿಯೂ ಅಭ್ಯಂಗಕ್ಕೆ ವಿಶೇಷ ಮಹತ್ವವಿದೆ. ಶರೀರಕ್ಕೆ ತೈಲ ಹಚ್ಚಿ ಮೃದುವಾಗಿ ತೀಡಿ, ಸ್ವಲ್ಪ ಹೊತ್ತು ಕಳೆದ ನಂತರ ಸ್ನಾನ ಮಾಡುವುದನ್ನು ಅಭ್ಯಂಗ ಸ್ನಾನವೆಂದು ಹೇಳಲಾಗುತ್ತೆ. ಹಿಂದೂ ಸಂಪ್ರದಾಯದಲ್ಲಿ ಅಮಾವಾಸ್ಯೆ, ಹಬ್ಬ-ಹರಿದಿನಗಳು ಹಾಗೂ ವಿಶೇಷ ಸಂದರ್ಭಗಳಲ್ಲೂ ಅಭ್ಯಂಗ ಸ್ನಾನ ಮಾಡಿ, ದೇವರಿಗೆ ಪೂಜೆ ಸಲ್ಲಿಸುತ್ತಾರೆ.

ಅಂದು ಚಿಕ್ಕಮಕ್ಕಳಾದಿಯಾಗಿ ಎಲ್ಲರೂ ಅಭ್ಯಂಜನ ಸ್ನಾನಮಾಡಿ ಹೊಸವಸ್ತ್ರಗಳನ್ನು ಧರಿಸುತ್ತಾರೆ. ನರಕ ಎಂದರೆ ಅಜ್ಞಾನ. ಚತುರ್ದಶಿ ಎಂದರೆ ಬೆಳಕು. ಅಜ್ಞಾನ ಕಳೆದು ಸುಜ್ಞಾನದ ಬೆಳಕು ದೊರೆಯಲೆಂದೇ ನರಕಚತುರ್ದಶಿಯ ಆಚರಣೆ.

TAGGED:Deepavali festivalDiwali 2023Naraka ChaturdashiNarakasura VadhaNarakasura Vadha Storyದೀಪಾವಳಿದೀಪಾವಳಿ ವಿಶೇಷನರಕ ಚತುರ್ದಶಿನರಕಾಸುರ ಸಂಹಾರ
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
2 minutes ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
30 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
48 minutes ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
60 minutes ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
2 hours ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?