ಚಿಂಕೆ ಭೇಟೆಯಾಡಿದ್ದವನ ಮೇಲೆ ಶೂಟೌಟ್

Public TV
1 Min Read
vlcsnap 2021 09 03 13h14m19s906

ಮಂಡ್ಯ: ಜಿಂಕೆ ಭೇಟೆಯಾಡಿದ್ದ ಕಾಡುಗಳ್ಳನನ್ನು ವನಪಾಲಕರು ಶೂಟೌಟ್ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಸವನಬೆಟ್ಟ ಅರಣ್ಯ ಪ್ರದೇಶದಲ್ಲಿ ನಡೆದಿದೆ.

vlcsnap 2021 09 03 13h14m26s260

ನಾಲ್ವರು ಕಾಡುಗಳ್ಳರು ಬಂದೂಕಿನಿಂದ 2 ಜಿಂಕೆಗಳನ್ನು ಕೊಂದು ಹೆಗಲ ಮೇಲೆ ಹೊತ್ತಿಕೊಂಡು ಬರುತ್ತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ವನಪಾಲಕರಿಗೆ ಈ ಕಳ್ಳರ ಗ್ಯಾಂಗ್ ಸಿಕ್ಕಿ ಬಿದ್ದಿದೆ. ತಕ್ಷಣ ಎಚ್ಚೆತ್ತ ವನಪಾಲಕರು ಅವರನ್ನು ಹಿಡಿಯಲು ಮುಂದಾಗಿದ್ದಾರೆ. ಇದನ್ನೂ ಓದಿ:ಸೆ.5ರಂದು ‘ಗೌರಿ ಲಂಕೇಶ್ ದಿನ’ವನ್ನಾಗಿ ಆಚರಿಸಲಿದೆ ಕೆನಡಾದ ಬರ್ನಾಬಿ ನಗರ

vlcsnap 2021 09 03 13h14m46s427

ಈ ಪರಿಣಾಮ ಕಾಡುಗಳ್ಳರು ಇವರಿಂದ ತಪ್ಪಿಸಿಕೊಳ್ಳಲು ಮುಂದಾದಗ ವೆಂಕಟೇಶ್ ಎನ್ನುವವರ ಮೇಲೆ ಫೈರಿಂಗ್ ಮಾಡಲಾಗಿದೆ. ಗುಂಡೇಟು ಬಿದ್ದ ವೆಂಕಟೇಶ್ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇದನ್ನೂ ಓದಿ:ಸುಧಾಮೂರ್ತಿ, ನಾರಾಯಣಮೂರ್ತಿಯನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು: ಕಾರಜೋಳ

ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೂ ಮೂವರು ಕಾಡುಗಳ್ಳರು ತಪ್ಪಿಸಿಕೊಂಡಿದ್ದಾರೆ. ಮಳವಳ್ಳಿಯ ಹಲಗೂರು  ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *