ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಬಿಜೆಪಿಯಿಂದಲೇ ಅವಮಾನ ಮಾಡಲಾಗಿದೆ.
ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಬರಹ ಹಾಗೂ ಇಬ್ಬರೂ ಜೊತೆಯಲ್ಲಿರುವ ಅಶ್ಲೀಲ ಫೋಟೋವೊಂದು ವಾಟ್ಸಪ್ ನಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾವೇರಿ-ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ ಕಿಶೋರ್ ಕುಮಾರ್ ವಿರುದ್ಧ ಬಿಜೆಪಿಯ ಕುಂದಾಪುರ ಕ್ಷೇತ್ರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ದೂರು ದಾಖಲಿಸಿದ್ದಾರೆ.
ಪರಿವರ್ತನಾ ಸಮಾವೇಶದ ಸಂದರ್ಭದಲ್ಲಿ ಬಿಜೆಪಿಯೊಳಗೆ ಜಟಾಪಟಿ ನಡೆದಿತ್ತು. ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ್ ಅವರು ಬಿಜೆಪಿ ಸೇರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ದೂರು ದಾಖಲಾಗಿರೋ ಕಿಶೋರ್, ರಾಜೇಶ್ ಹಾಲಾಡಿ ವಿರುದ್ಧ ಗುಂಪಿನ ನಾಯಕರಾಗಿದ್ದಾರೆ ಎನ್ನಲಾಗಿದೆ.