ವೇದಿಕೆಗಳಲ್ಲಿ ಬಿಎಸ್‍ವೈ ವಿರುದ್ಧ ಅವಹೇಳನಕಾರಿ ಹೇಳಿಕೆ- ಸಿಎಂ ಸೇರಿದಂತೆ ಹಲವು ಮುಖಂಡರಿಗೆ ಹೈಕೋರ್ಟ್ ನೋಟಿಸ್

Public TV
0 Min Read
bsy cm

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವೇದಿಕೆಗಳಲ್ಲಿ ಸಿಎಂ ಸಿದ್ದರಾಮಯ್ಯ ನನ್ನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನರೇಂದ್ರ ಅವರು ತುರ್ತು ನೋಟಿಸ್ ಜಾರಿ ಮಾಡಿದ್ದಾರೆ.

mnd bsy health parivartana yatre 5

ಯಡಿಯೂರಪ್ಪ ವಿರುದ್ಧ ದಾಖಲಾಗಿರೋ ಪ್ರಕರಣಗಳ ಕುರಿತು ಮತ್ತು ವೈಯಕ್ತಿಕ ವಿಚಾರಗಳ ಬಗ್ಗೆ ಮಾಧ್ಯಮಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾತನಾಡದಂತೆ ನಿರ್ಬಂಧ ಹೇರಲಾಗಿದೆ. ಸಿಎಂ ಜೊತೆ ದಿನೇಶ್ ಗುಂಡೂರಾವ್, ಉಗ್ರಪ್ಪ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರಿಗೆ ನೋಟಿಸ್ ಜಾರಿ ಮಾಡಲಾಗಿದೆ.

cm siddaramaiah

Share This Article