ಪ್ರಯಾಣಿಕರಿಗೆ ಉಚಿತ ಸೇವೆ ನೀಡಿ ಸರ್ಜಿಕಲ್ ಸ್ಟ್ರೈಕ್ 2 ಸಂಭ್ರಮಿಸಿದ ಆಟೋ ಡ್ರೈವರ್

Public TV
1 Min Read
Delhi auto driver

ನವದೆಹಲಿ: ಪುಲ್ವಾಮಾ ದಾಳಿಯ ಪ್ರತಿಕಾರ ತೀರಿಸಿಕೊಂಡ ಹಿನ್ನಲೆಯಲ್ಲಿ ದೇಶವ್ಯಾಪಿ ಸಂತೋಷ ಮನೆ ಮಾಡಿದೆ. ಕೆಲವರು ಪಟಾಕಿ ಸಿಡಿಸಿ, ಸ್ವೀಟ್ ಹಂಚಿ ಸರ್ಜಿಕಲ್ ಸ್ಟ್ರೈಕ್ 2 ಅನ್ನು ಸಂಭ್ರಮಿಸಿದ್ದಾರೆ. ಆದರೆ ದೆಹಲಿಯ ಆಟೋ ಡ್ರೈವರ್ ಒಬ್ಬರು ವಿನೂತನ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ.

ಆಟೋ ಚಾಲಕ ಮನೋಜ್ ಅವರು ಫೆಬ್ರವರಿ 26ರಂದು (ಮಂಗಳವಾರ) ತಮ್ಮ ಆಟೋದಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರಿಗೆಲ್ಲ ಉಚಿತವಾಗಿ ಸೇವೆ ಒದಗಿಸಿದ್ದಾರೆ. ಜೊತೆಗೆ ತಮ್ಮ ಆಟೋದಲ್ಲಿ, ಹುತಾತ್ಮ ಯೋಧರಿಗೆ ನಮನ ಸಲ್ಲಿಸಲು ಹಾಗೂ ಭಾರತೀಯ ವಾಯು ಪಡೆ ಇಂದು ನಡೆಸಿದ ಸರ್ಜಿಕಲ್ ಸ್ಟ್ರೈಕ್ 2 ನಿಂದಾಗಿ ಎಲ್ಲರಿಗೂ ಉಚಿತ ಪ್ರಯಾಣ ಎಂದು ಬ್ಯಾನರ್ ಹಾಕಿದ್ದಾರೆ. ಇದನ್ನು ಓದಿ: ಸರ್ಜಿಕಲ್ ಸ್ಟ್ರೈಕ್ 2: ವಾಯುಸೇನೆಗೆ ಅಭಿನಂದಿಸಿ ನಾವು ಹೆಮ್ಮೆ ಪಡಬೇಕು ಯಾಕೆ?

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮನೋಜ್ ಅವರು, ಉಚಿತ ಆಟೋ ಸೇವೆಗಿಂತ ಹೆಚ್ಚೇನೂ ಮಾಡಲು ನನ್ನಿಂದ ಸಾಧ್ಯವಿಲ್ಲ. ಹೀಗಾಗಿ ನನ್ನ ಆಟೋದಲ್ಲಿ ಮಂಗಳವಾರ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೆ ಯಾವುದೇ ರೀತಿ ದರ ವಿಧಿಸುತ್ತಿಲ್ಲ. ಇದು ನನಗೆ ಹೆಚ್ಚು ಖುಷಿ ತಂದಿದೆ ಎಂದು ಹೇಳಿದ್ದಾರೆ.

ಭಾರತೀಯ ವಾಯು ಪಡೆ ಮಂಗಳವಾರ ಮುಂಜಾನೆ 3.45ರ ಸುಮಾರಿಗೆ ಮೊದಲು ಬಾಲಕೋಟ್ ಮೇಲೆ ದಾಳಿ ಮಾಡಿತ್ತು. ಬಳಿಕ ಮುಂಜಾನೆ 3.48ಕ್ಕೆ ಮುಜಾಫರಬಾದ್ ಮೇಲೆ ದಾಳಿ ಮಾಡಲಾಗಿತ್ತು. ಕೊನೆಗೆ ಮುಂಜಾನೆ 3.58ಕ್ಕೆ ಚಕೋಟಿ ಉಗ್ರರ ತರಬೇತಿ ಕೇಂದ್ರಗಳ ಮೇಲೆ ದಾಳಿ ಮಾಡಿದೆ. ಇದನ್ನು ಓದಿ: ಕವಿತೆ ಬರೆದು ವಾಯುಪಡೆಗೆ ಗೌರವ ಸಲ್ಲಿಸಿ #AlwaysReady ಎಂದ ಭಾರತೀಯ ಸೇನೆ!

STRIKE 1

ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಬಾಲಕೋಟ್ ನೆಲೆಯಲ್ಲಿ 300 ಉಗ್ರರು, ತರಬೇತುದಾರರು ಹಾಗೂ ಜೈಶ್ ಸಂಘಟನೆಯ ಕಮಾಂಡೋಗಳು ಬಲಿಯಾಗಿದ್ದಾರೆ. ಜೊತೆಗೆ ಈ ದಾಳಿಯಲ್ಲಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಅಜರ್ ಮಸೂದ್‍ನ ಭಾಮೈದ ಅಜರ್ ಯೂಸುಫ್ ಅಲಿಯಾಸ್ ಉಸ್ತಾದ್ ಘೋರಿ ಹತ್ಯೆಯಾಗಿದ್ದಾನೆ ಎಂದು ವರದಿಯಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *