ಕುತುಬ್‌ ಮಿನಾರ್‌ ಬಳಿ ಹಿಂದೂ ಮೂರ್ತಿಗಳ ಪುನರ್‌ಸ್ಥಾಪನೆಗೆ ಮನವಿ – ತೀರ್ಪು ಕಾಯ್ದಿರಿಸಿದ ಕೋರ್ಟ್‌

Public TV
1 Min Read

ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದಲ್ಲಿ ಹಿಂದೂ ಮತ್ತು ಜೈನರ ಆರಾಧನಾ ಮೂರ್ತಿಗಳನ್ನು ಪುನರ್‌ಸ್ಥಾಪಿಸಲು ಕೋರಿರುವ ಮೇಲ್ಮನವಿಗೆ ಸಂಬಂಧಿಸಿದ ಆದೇಶವನ್ನು ದೆಹಲಿಯ ಸಾಕೇತ್ ಕೋರ್ಟ್ ಮಂಗಳವಾರ ಕಾಯ್ದಿರಿಸಿದೆ.

ಮೆಹ್ರೌಲಿಯಲ್ಲಿರುವ ಕುತುಬ್ ಮಿನಾರ್ ಸಂಕೀರ್ಣದೊಳಗೆ ಇರುವ ಕುವ್ವಾತ್-ಉಲ್-ಇಸ್ಲಾಂ ಮಸೀದಿಯನ್ನು ದೇವಾಲಯದ ಸಂಕೀರ್ಣದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಮೇಲ್ಮನವಿಯಲ್ಲಿ ಆರೋಪಿಸಲಾಗಿದೆ. ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

court order law

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನಿಖಿಲ್ ಚೋಪ್ರಾ ಅವರು ಮಂಗಳವಾರ ಮೇಲ್ಮನವಿ ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿದರು. ಮೇಲ್ಮನವಿಗೆ ಸಂಬಂಧಿಸಿದಂತೆ ಜೂನ್ 9ರಂದು ತೀರ್ಪು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮಹಮ್ಮದ್‌ ಘೋರಿ ಆಡಳಿತದಲ್ಲಿ ಸೇನಾ ನಾಯಕನಾಗಿದ್ದ ಕುತುಬುದ್ದೀನ್‌ ಐಬಕ್‌ 27 ದೇವಾಲಯಗಳನ್ನು ಭಾಗಶಃ ಧ್ವಂಸ ಮಾಡಿದ್ದು, ಇವುಗಳ ಸಾಮಗ್ರಿಗಳನ್ನು ಬಳಸಿ ಕುತುಬ್‌ ಮಿನಾರ್‌ ಸಂಕೀರ್ಣದೊಳಗೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಜೈನ ತೀರ್ಥಂಕರ ವೃಷಭದೇವ ಮತ್ತು ಹಿಂದೂ ದೇವರು ವಿಷ್ಣುವಿನ ಮೂರ್ತಿಯನ್ನು ಸಂಕೀರ್ಣದಲ್ಲಿ ಪುನರ್‌ ಪ್ರತಿಷ್ಠಾಪಿಸಬೇಕು ಎಂದು ಕೋರಲಾಗಿದೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

Qutub Minar 1

ಕುತುಬ್ ಮಿನಾರ್ ಬಳಿ ದೇವಸ್ಥಾನದ ಉತ್ಖನನ ನಡೆಸಲು ಒತ್ತಡ ಕೇಳಿ ಬಂದ ಬೆನ್ನಲ್ಲೇ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಾಕೇತ್ ಕೋರ್ಟ್‍ಗೆ ತನ್ನ ವರದಿಯನ್ನು ಸಲ್ಲಿಕೆ ಮಾಡಿದ್ದು, ತೀವ್ರ ವಿರೋಧವನ್ನು ವ್ಯಕ್ತಪಡಿಸಿದೆ.

ಕುತುಬ್ ಮಿನಾರ್ 1914 ರಿಂದ ಸಂರಕ್ಷಿತ ಸ್ಮಾರಕವಾಗಿದೆ. ಅದರ ರಚನೆಯನ್ನು ಈಗ ಬದಲಾಯಿಸಲಾಗುವುದಿಲ್ಲ. “ಸಂರಕ್ಷಿತ” ಸ್ಥಾನಮಾನವನ್ನು ನೀಡುವ ಸಮಯದಲ್ಲಿ ಅಂತಹ ಆಚರಣೆಯು ಪ್ರಚಲಿತದಲ್ಲಿರಲಿಲ್ಲ. ಈಗ ಸ್ಮಾರಕದಲ್ಲಿ ಆರಾಧನೆಯ ಪುನರುಜ್ಜೀವನವನ್ನು ಅನುಮತಿಸಲಾಗುವುದಿಲ್ಲ ಎಂದು ವರದಿಯಲ್ಲಿ ಎಎಸ್‍ಐ ಉಲ್ಲೇಖಿಸಿದೆ. ಇದನ್ನೂ ಓದಿ: ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್

Share This Article
Leave a Comment

Leave a Reply

Your email address will not be published. Required fields are marked *