ಪ್ರಣಾಳಿಕೆಯಲ್ಲ ‘ಗ್ಯಾರೆಂಟಿ ಕಾರ್ಡ್’ ಬಿಡುಗಡೆ ಮಾಡಿದ ಆಪ್

Public TV
1 Min Read
arvind kejriwal

ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧವಾಗಿರುವ ಆಮ್ ಆದ್ಮಿ ಪ್ರಣಾಳಿಕೆ ಬದಲು ಗ್ಯಾರೆಂಟಿ ಕಾರ್ಡ್ ಬಿಡುಗಡೆ ಮಾಡಿದೆ. ಅಧಿಕಾರಕ್ಕೆ ಬಂದಲ್ಲಿ ಗ್ಯಾರೆಂಟಿ ಕಾರ್ಡ್ ನಲ್ಲಿರುವ ಹತ್ತು ಅಂಶಗಳನ್ನು ಕಡ್ಡಾಯವಾಗಿ ಜಾರಿ ಮಾಡುವ ಭರವಸೆ ನೀಡಿದೆ.

ಇಂದು ದೆಹಲಿಯ ಪಕ್ಷದ ಕಚೇರಿಯಲ್ಲಿ ಗ್ಯಾರೆಂಟಿ ಕಾರ್ಡ್ ಬಿಡುಗಡೆ ಮಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ರಚನೆಯಾಗಿ ಹತ್ತು ದಿನಗಳಲ್ಲಿ ಕೆಲಸ ಆರಂಭಿಸುವ ಭರವಸೆ ನೀಡಿದ್ದಾರೆ.

ಹತ್ತು ಅಂಶಗಳ ಗ್ಯಾರೆಂಟಿ ಕಾರ್ಡ್ ನಲ್ಲಿ ಶಾಲಾ ಮಕ್ಕಳಿಗೆ ಭಾನುವಾರ ಉಚಿತ ಬಸ್ ಪ್ರಯಾಣ ಅವಕಾಶ ನೀಡುವ ಭರವಸೆ ನೀಡಿದೆ. ಮಹಿಳೆಯರ ಸುರಕ್ಷತೆಗಾಗಿ ದೆಹಲಿ ಬಸ್ ಗಳಲ್ಲಿ ‘ಮೊಹಲ್ಲಾ ಮಾರ್ಷಲ್’ಗಳನ್ನ ನೇಮಕ ಮಾಡಲಿದೆ. 200 ಯೂನಿಟ್ ವಿದ್ಯುತ್ ಮತ್ತು 2000 ಲೀಟರ್ ನೀರಿನ ಉಚಿತ ಬಳಕೆಯನ್ನ ಮುಂದುವರಿಸುವ ಆಶ್ವಾಸನೆ ಗ್ಯಾರೆಂಟಿ ಕಾರ್ಡ್ ನಲ್ಲಿ ನೀಡಿದೆ.

ದೆಹಲಿಯ ಎಲ್ಲ ನಾಗರಿಕರಿಗೆ ಉಚಿತ ಆರೋಗ್ಯ ಸೌಲಭ್ಯ, ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ದೆಹಲಿ ಮತ್ತು ಎನ್‍ಸಿಆರ್ ಭಾಗದಲ್ಲಿ ಎರಡು ಕೋಟಿ ಸಸಿಗಳನ್ನು ನೆಡುವುದು, ಸಾರಿಗೆ ಉನ್ನತಿಕರಿಸುವ ನಿಟ್ಟಿನಲ್ಲಿ 11,000 ಹೆಚ್ಚುವರಿ ಬಸ್ ಗಳ ರಸ್ತೆಗಿಳಿಸುವುದು 500 ಕಿಮೀ ಮೆಟ್ರೊ ಲೈನ್ ಅಭಿವೃದ್ಧಿ ಪಡಿಸುವ ವಾಗ್ದಾನ ಆಮ್ ಆದ್ಮಿ ನೀಡಿದೆ.

ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣ, ಅನಧಿಕೃತ ಕಾಲೋನಿಗಳಿಗೆ ರಸ್ತೆ ನೀರು, ಬೆಳಕಿನ ಸೌಲಭ್ಯ ಹಾಗೂ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಅವಳವಡಿಕೆ, ನಿವಾಸ ರಹಿತರಿಗೆ ಸೂರು ಕಲ್ಪಿಸುವುದು, ಪಾರ್ಕ್ ಮತ್ತು ರೋಡ್ ಗಳನ್ನು ಸುಂದರಗೊಳಿಸುವುದು, ಯಮುನಾ ನದಿಯನ್ನ ಸ್ವಚ್ಛಗೊಳಿಸುವ ಆಶ್ವಾಸನೆ ನೀಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *