ನವದೆಹಲಿ: ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಾಹಿಬ್ ಸಿಂಗ್ ವಿರುದ್ಧ ಸೋಲು ಕಂಡಿದ್ದಾರೆ. ಈ ಮೂಲಕ ಸತತ 3ನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗುವ ಕನಸು ನುಚ್ಚುನೂರಾಗಿದೆ.
Advertisement
ಕಳೆದ 2 ಚುನಾವಣೆಗಳಲ್ಲೂ ನವದೆಹಲಿ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದ ಕೇಜ್ರಿವಾಲ್ ಸತತ 2 ಬಾರಿ ಸಿಎಂ ಆಗಿದ್ದರು. 3ನೇ ಬಾರಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಪರ್ವೇಶ್ ವಿರುದ್ಧ 3,000ಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಇದನ್ನೂ ಓದಿ: ನಮ್ಮನ್ನು ಸೋಲಿಸಲು ಮೋದಿಗೆ ಇನ್ನೊಂದು ಜನ್ಮ ಬೇಕು ಎಂದಿದ್ದ ಕೇಜ್ರಿವಾಲ್ಗೆ ಸೋಲು
Advertisement
Advertisement
ಸತತ 3ನೇ ಬಾರಿಗೆ ನವದೆಹಲಿ ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಿದ ಕೇಜ್ರಿವಾಲ್ ಒಟ್ಟು 25,999 ಮತಗಳನ್ನು ಪಡೆದಿದ್ದರೆ, ಸಂದೀಪ್ ದೀಕ್ಷಿತ್ 4,568 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ್ವೇಶ್ ಒಟ್ಟು 30,088 ಮತಗಳನ್ನು ಪಡೆದುಕೊಂಡಿದ್ದು 4,089 ಮತಗಳಿಂದ ಗೆದ್ದು ಬೀಗಿದ್ದಾರೆ. ಕೇಜ್ರಿವಾಲ್, ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಾಹಿಬ್ ಸಿಂಗ್ ವಿರುದ್ಧ 4,089 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
Advertisement
ಮದ್ಯ ನೀತಿ ಹಗರಣದಲ್ಲಿ ಭ್ರಷ್ಟಾಚಾರಾ ಆರೋಪದ ಮೇಲೆ ಜೈಲು ಸೇರಿದ ಕೇಜ್ರಿವಾಲ್ ರಾಜೀನಾಮೆ ಕೊಡಲು ಹಿಂದೇಟು ಹಾಕಿದರು. ಈ ವೇಳೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿ ಹಲವು ನಾಯಕರು ಜೈಲುಪಾಲಾದರು. ಇನ್ನೇನು ಆಪ್ ಬಹುತೇಕ ನಾಮಾವಶೇಷವಾಯ್ತು ಅನ್ನೋ ಹೊತ್ತಿಗೆ ಜೈಲಿನಿಂದ ಕೇಜ್ರಿವಾಲ್ ಬಿಡುಗಡೆಯಾದರು. ಜೈಲಿನಿಂದ ಹೊರ ಬಂದ ಬಳಿಕ ಮತ್ತೆ ಜನಾದೇಶ ಪಡೆದು ಆಯ್ಕೆಯಾದ ಬಳಿಕವೇ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ಶಪಥಗೈದಿದ್ದರು.
ಈ ನಡುವೆ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲಿನ ದೌರ್ಜನ್ಯ ಪ್ರಕರಣ ಸಹ ಸಂಕಷ್ಟ ತಂದೊಡ್ಡಿತು. ಪ್ರತಿ ಹಂತದಲ್ಲೂ ಲೆಪ್ಟಿನೆಂಟ್ ಗರ್ವನರ್ ಜೊತೆಗೆ ಸಂಘರ್ಷ ನಡೆಯುತ್ತಲೇ ಇತ್ತು. ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಶೀಷ್ ಮಹಲ್ ಆರೋಪ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತು. ಖುದ್ದು ಪ್ರಧಾನಿ ಮೋದಿ ಅವರೇ ಶೀಷ್ಮಹಲ್ ನವೀಕರಣಕ್ಕೆ ಕೋಟ್ಯಂತರ ರೂಪಾಯಿ ಅಕ್ರಮ ಮಾಡಿರುವುದಾಗಿ ಆರೋಪಿಸಿದ್ದರು. ಇದನ್ನೂ ಓದಿ: ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಹೀನಾಯ ಸೋಲು
ಹೀಗೆ ಆಪ್ ಸಂಚಾಲಕ, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸಾಲು ಸಾಲು ಸವಾಲು ಎದುರಿಸಬೇಕಾಯ್ತು. ಕೊನೆಗೆ ಜನರಿಂದ ಮಾನ್ಯತೆ ಪಡೆಯದೇ ಮತ್ತೆ ಸಿಎಂ ಕುರ್ಚಿ ಮೇಲೆ ಕೂರಲ್ಲ ಎಂದು ಶಪಥ ಮಾಡಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣಾ ಅಖಾಡಕ್ಕೆ ಇಳಿದಿದ್ದರು. ಇದೀಗ ಈ ಹೋರಾಟದಲ್ಲಿ ಕೇಜ್ರಿವಾಲ್ ಸೋಲು ಕಂಡಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ಯಮುನಾ ನದಿಗೆ ಕಳಂಕ ತಂದಿದ್ದೇ ಆಪ್ ಸೋಲಿಗೆ ಕಾರಣ: ಆರ್. ಅಶೋಕ್