ನವದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ (Delhi Election Results) ಕ್ಷಣ ಕ್ಷಣಕ್ಕೂ ಎದೆಬಡಿತ ಹೆಚ್ಚಿಸುತ್ತಿದೆ. ಆರಂಭದಿಂದಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿಗೆ 16 ಕ್ಷೇತ್ರಗಳಲ್ಲಿ ಆಪ್ ನೇರ ಪೈಪೋಟಿ ನೀಡುತ್ತಿದೆ. ಹೀಗಾಗಿ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಸದ್ಯ 10:30ರ ವೇಳೆಗೆ 42 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 27 ಕ್ಷೇತ್ರಗಳಲ್ಲಿ ಎಎಪಿ ಮುನ್ನಡೆಯಲ್ಲಿತ್ತು. 10:50ರ ಸುಮಾರಿಗೆ ಬಿಜೆಪಿ 40 ಕ್ಷೇತ್ರ, ಆಪ್ 30 ಕ್ಷೇತ್ರಗಳಲ್ಲಿ, 10:55ರ ವೇಳೆಗೆ ಬಿಜೆಪಿ 41 ಹಾಗೂ ಎಎಪಿ 29 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆದ್ರೆ ಕಾಂಗ್ರೆಸ್ ಇನ್ನೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಅಲ್ಲದೇ 16 ಕ್ಷೇತ್ರಗಳಲ್ಲಿ ಬಿಜೆಪಿ-ಆಪ್ ನಡುವೆ ನೇರಾನೇರ ಫೈಟ್ ಏರ್ಪಟ್ಟಿದ್ದು, 7 ಕ್ಷೇತ್ರಗಳಲ್ಲಿ 2,000ಕ್ಕೂ ಅಧಿಕ ಮತಗಳ ಮುನ್ನಡೆಯಲ್ಲಿದೆ. ಕಲ್ಕಾಜಿ ಕ್ಷೇತ್ರದಲ್ಲಿ ಸಿಎಂ ಅತಿಶಿ ಸತತವಾಗಿ ಹಿನ್ನಡೆ ಅನುಭವಿಸುತ್ತಿದ್ದಾರೆ.
ಕೇಜ್ರಿವಾಲ್ಗೆ ಮತ್ತೆ ಹಿನ್ನಡೆ:
ಮೊದಲ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದ ಕೇಜ್ರಿವಾಲ್ 2 ರಿಂದ 5 ಸುತ್ತುಗಳ ವರೆಗೂ 300ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ಬಿಜೆಪಿ ಅಭ್ಯರ್ಥಿ ಪರ್ವೇಶ್ ವಿರುದ್ಧ 6ನೇ ಸುತ್ತಿನಲ್ಲಿ 225 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಇದನ್ನೂ ಓದಿ: Delhi Election Results | ಬಿಜೆಪಿಗೆ ಆರಂಭಿಕ ಮುನ್ನಡೆ – ಕೇಜ್ರಿವಾಲ್ ಸೇರಿ ಆಪ್ ಘಟಾನುಘಟಿ ನಾಯಕರಿಗೆ ಹಿನ್ನಡೆ
ಮ್ಯಾಜಿಕ್ ನಂಬರ್ ತಲುಪಿದ ಬಿಜೆಪಿ:
ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, 11 ಗಂಟೆ ವೇಳೆಗೆ ಬಿಜೆಪಿ 41 ಸ್ಥಾನಗಳೊಂದಿಗೆ ಭರ್ಜರಿ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಆಪ್ 29 ಸ್ಥಾನಗಳನ್ನು ಪಡೆದು ಹಿನ್ನಡೆಯಲ್ಲಿದ್ದರೆ. ಕಾಂಗ್ರೆಸ್ ಇನ್ನೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ದೆಹಲಿಯ 70 ಕ್ಷೇತ್ರಗಳಿಗೆ ಫೆಬ್ರವರಿ 5ರಂದು ನಡೆದ ಚುನಾವಣೆಯಲ್ಲಿ 60.42% ರಷ್ಟು ಮತದಾನ ನಡೆದಿತ್ತು. ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.
2013ರ ಚುನಾವಣೆಯಲ್ಲಿ ಬಿಜೆಪಿ 31, ಆಪ್ 28, ಕಾಂಗ್ರೆಸ್ 08 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಇತರರು ಮೂರು ಸ್ಥಾನ ಗೆದ್ದಿದ್ದರು. ಆಪ್ಗೆ ಕಾಂಗ್ರೆಸ್ ಬೆಂಬಲ ನೀಡಿದ್ದರಿಂದ ಕೇಜ್ರಿವಾಲ್ (Arvind Kejriwal) ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು. ಇದನ್ನೂ ಓದಿ: Delhi Election Results | ನವದೆಹಲಿ ಕ್ಷೇತ್ರದಲ್ಲಿ ಹಾವು – ಏಣಿ ಆಟ; ಕೇಜ್ರಿವಾಲ್ಗೆ ಅಲ್ಪ ಮುನ್ನಡೆ
ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ ಸರ್ವ ಶಕ್ತಿಗಳನ್ನು ಪಣಕ್ಕೊಡಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಉಚಿತ ಯೋಜನೆಗಳನ್ನು ಆಪ್ (AAP) ಘೋಷಿಸಿದೆ. ಒಂದಿಷ್ಟು ಸೀಟ್ಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ (Congress) ಸಹ ಭರವಸೆಗಳ ಮೇಲೆ ಭರವಸೆ ನೀಡಿದೆ. ಇದನ್ನೂ ಓದಿ: 4ನೇ ಬಾರಿಗೂ ಕೇಜ್ರಿವಾಲ್ ಸಿಎಂ ಆಗ್ತಾರೆ – ಸಚಿವ ಸೌರಭ್ ಭಾರದ್ವಾಜ್ ವಿಶ್ವಾಸ