ಬೆಂಗಳೂರು: ದೆಹಲಿ ಚುನಾವಣೆಯಲ್ಲಿ (Delhi Election Result) ಬಿಜೆಪಿ ಗೆಲುವು ಸಾಧಿಸಿದ ಕುರಿತು ರಾಜ್ಯ ಬಿಜೆಪಿ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ (Sudhakar Reddy) ಸಂತೋಷ ವ್ಯಕ್ತಪಡಿಸಿದ್ದಾರೆ.
ದೆಹಲಿಯ ಜನತೆಗೆ ಅಭಿನಂದನೆ ಕೋರಿರುವ ಅವರು, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಚಿಂತನೆಯನ್ನೇ ಧ್ಯೇಯವಾಗಿಸಿಕೊಂಡ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಜೀ (Narendra Modi) ಅವರ ನಾಯಕತ್ವವನ್ನು ದೇಶ ಒಪ್ಪಿಕೊಂಡಿದೆ. ದೇಶದಲ್ಲಿ ಬಿಜೆಪಿ ಮೋದಿಯವರು ನುಡಿದಂತೆ ನಡೆದು ತೋರಿಸುತ್ತಿದ್ದಾರೆ. ಇದರಿಂದ ಬಿಜೆಪಿ ಕುರಿತು ಜನರಲ್ಲಿ ನಂಬಿಕೆ – ವಿಶ್ವಾಸ ವೃದ್ಧಿಸಿದೆ. ಈ ವಿಷಯ ದೆಹಲಿ ಚುನಾವಣೆ ಫಲಿತಾಂಶದ ಮೂಲಕ ಸಾಬೀತಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಫಿ ಎಸ್ಟೇಟ್ನಲ್ಲಿ ಕೆಲಸ ಮಾಡುವಾಗ ಏಕಾಏಕಿ ಕಾಡಾನೆ ದಾಳಿ – ಮಹಿಳೆ ಸಾವು
ಆಪ್ ಪ್ರತಿ ಸಂದರ್ಭದಲ್ಲೂ ಸುಳ್ಳು ಹೇಳುತ್ತಿತ್ತು. ಆಪ್ ಮುಖಂಡರು ಭ್ರಷ್ಟ ಸರ್ಕಾರವನ್ನು ನಡೆಸುತ್ತಿದ್ದರು. ಮುಂದಿನ ದಿನಗಳಲ್ಲಿ ದೆಹಲಿ ಜನತೆಗೆ ಒಳಿತಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಚುನಾವಣೆಯ ಗೆಲುವಿಗೆ ಕಾರಣಕರ್ತರಾದ ಮತದಾರರು, ಶ್ರಮಿಸಿದ ಪಕ್ಷದ ಕಾರ್ಯಕರ್ತರು, ನಾಯಕರನ್ನು ಅಭಿನಂದಿಸಿದ್ದಾರೆ. ಇದನ್ನೂ ಓದಿ: ಜನರ ತೀರ್ಪು ಸ್ವಾಗತಿಸುತ್ತೇವೆ.. ಸೋಲನ್ನ ಹೀನಾಯ ಸೋಲು ಎಂದು ಹೇಳಲ್ಲ: ಮುಖ್ಯಮಂತ್ರಿ ಚಂದ್ರು