ದೆಹಲಿ ಸಿಎಂಗೆ ಆ.20 ರ ವರೆಗೆ ಜೈಲೇ ಗತಿ

Public TV
1 Min Read
ARVIND KEJRIWAL

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಕಸ್ಟಡಿಯನ್ನು ಆ.20 ರ ವರೆಗೆ ವಿಸ್ತರಿಸಿ ಗುರುವಾರ ರೂಸ್ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ.

ತಿಹಾರ್ ಜೈಲಿನಿಂದ (Tihar Jail) ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ಮಾತೃತ್ವದ ರಜೆ ವೇಳೆ ಬೇರೆಯವರ ನೇಮಕ – ಹುದ್ದೆಯಲ್ಲಿ ಮುಂದುವರೆಯುವಂತೆ ಹೈಕೋರ್ಟ್ ತೀರ್ಪು

Arvind Kejriwal

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಸಿಎಂ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿತ್ತು.

ಕೇಜ್ರಿವಾಲ್ ಅವರನ್ನು ಸಮರ್ಥನೀಯ ಕಾರಣವಿಲ್ಲದೆ ಬಂಧಿಸಲಾಗಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು. ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಿಎಂ ಕೇಜ್ರಿವಾಲ್‌ಗೆ ನೀಡಲಾದ ಜಾಮೀನು ರದ್ದುಗೊಳಿಸುವಂತೆ ಮಾಡಿದ ಮನವಿಯನ್ನು ಪರಿಹರಿಸಲು ಅಲ್ಪಾವಧಿಯ ಮುಂದೂಡಿಕೆಯನ್ನು ಕೋರಲಾಗಿದೆ. ಇದನ್ನೂ ಓದಿ: ವಕ್ಫ್ ಬೋರ್ಡ್‌ ಅಧಿಕಾರವನ್ನು ಕಡಿಮೆ ಮಾಡುವ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

Share This Article