ದೆಹಲಿ ಅಬಕಾರಿ ನೀತಿ ಹಗರಣ- ಸಂಸದನ ಪುತ್ರ ಅರೆಸ್ಟ್

Public TV
1 Min Read
YSR Congress MPs Son

ನವದೆಹಲಿ: ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಒಂಗೋಲ್‍ನ ವೈಎಸ್‍ಆರ್ ಕಾಂಗ್ರೆಸ್ (YSR Congress) ಪಕ್ಷದ ಸಂಸದನ ಮಗನನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಸಂಸದ ಮಾಗುಂಟ ಶ್ರೀನಿವಾಸಲು ರೆಡ್ಡಿ (Magunta Srinivasulu Reddy) ಅವರ ಪುತ್ರ ರಾಘವ್ ಮಾಗುಂಟ (Raghav Magunta) ಅವರನ್ನು ಇಡಿ (ED) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಬಂಧಿಸಲಾಗಿದೆ (Arrest) ಎಂದು ಅಧಿಕಾರಿಗಳು ತಿಳಿಸಿದರು.

ED Enforcement Directorate

ರಾಘವ್ ಮಾಗುಂಟ ಅವರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ. ಈ ಪ್ರಕರಣದಲ್ಲಿ ರಾಘವ್ ಮಾಗುಂಟನನ್ನು ಇಡಿ 9ನೇ ಆರೋಪಿಯಾಗಿ ಬಂಧಿಸಿದೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF

ಈ ವಾರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಶಿರೋಮಣಿ ಅಕಾಲಿ ದಳದ ಶಾಸಕ ದೀಪ್ ಮಲ್ಹೋತ್ರಾ ಅವರ ಪುತ್ರ ಗೌತಮ್ ಮಲ್ಹೋತ್ರಾ ಮತ್ತು ಜಾಹೀರಾತು ಕಂಪನಿ ಚಾರಿಯಟ್ ಪ್ರೊಡಕ್ಷನ್ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ರಾಜೇಶ್ ಜೋಶಿಯನ್ನು ಇ.ಡಿ ಬಂಧಿಸಿದೆ. ಇದನ್ನೂ ಓದಿ: ಟೆಲಿಗ್ರಾಮ್, ಡಾರ್ಕ್ ವೆಬ್ ಮೂಲಕ ಉಗ್ರ ಸಂಘಟನೆ ಜೊತೆಗೆ ಸಂಪರ್ಕ..?

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *