ನವದೆಹಲಿ: ಬಡತನ ರೇಖೆಗಿಂತ ಕೆಳಗಿರುವ ಹೆಚ್ಐವಿ ಪಾಸಿಟಿವ್ ವ್ಯಕ್ತಿಗಳಿಗೆ (HIV Patients) ಉಚಿತ ಆಹಾರ (Food) ಹಾಗೂ ವೈದ್ಯಕೀಯ ಚಿಕಿತ್ಸೆಯನ್ನು (Treatment) ನೀಡಬೇಕು ಹಾಗೂ ಅವರ ಕುಂದುಕೊರತೆಗಳ ಬಗ್ಗೆ ಇರುವ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದೆಹಲಿ ಸರ್ಕಾರಕ್ಕೆ (Delhi Government) ದೆಹಲಿ ಹೈಕೋರ್ಟ್ (Delhi High Court) ತಿಳಿಸಿದೆ.
ಈ ಬಗ್ಗೆ ದೆಹಲಿ ಹೈಕೋರ್ಟ್ಗೆ ಹೆಚ್ಐವಿ/ ಏಡ್ಸ್ ಮತ್ತು ಇತರ ಬಹು ಅಂಗಾಗ ಕಾಯಿಲೆಗಳಿಂದ ಬಳಲುತ್ತಿರುವ ಮತ್ತು ಆಶ್ರಯವಿಲ್ಲದೆ ಇರುವ ವ್ಯಕ್ತಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಹೆಚ್ಐವಿಯಿಂದ ಬಳಲುತ್ತಿರುವವರಿಗೆ ವಸತಿ, ಆಹಾರ, ವೈದ್ಯಕೀಯ ನೆರವು ಇತ್ಯಾದಿಗಳನ್ನು ಒದಗಿಸಲು ದೆಹಲಿ ಸರ್ಕಾರ ಮತ್ತು ಕೇಂದ್ರಕ್ಕೆ ಹಲವಾರು ನಿರ್ದೇಶನಗಳನ್ನು ನೀಡಬೇಕು ಎಂದು ಈ ಅರ್ಜಿಯಲ್ಲಿ ಮನವಿ ಮಾಡಿದ್ದರು.
ಇಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿ ಆದೇಶವನ್ನು ಹೊರಡಿಸಿದೆ. ಹೆಚ್ಐವಿ ಪಾಸಿಟಿವ್ ರೋಗಿಗಳಿಗೆ ನೆರವು ಮತ್ತು ಸಹಾಯವನ್ನು ಒದಗಿಸಲು ದೆಹಲಿ ಸರ್ಕಾರವು ಕೈಗೆಟುಕುವ ಚಿಕಿತ್ಸೆ ಸೇರಿದಂತೆ ಹಲವಾರು ಪುನರ್ವಸತಿ ಯೋಜನೆಗಳು ಮತ್ತು ಕ್ರಮಗಳನ್ನು ಜಾರಿಗೆ ತರುವಂತೆ 2017ರ ಕಾಯಿದೆಯಲ್ಲಿ ತಿಳಿಸಿದೆ ಎಂದಿದೆ. ಇದನ್ನೂ ಓದಿ: ಪಾಕ್ ಭಯೋತ್ಪಾದನೆಯನ್ನು ಯಾಕೆ ಯುರೋಪ್ ರಾಷ್ಟ್ರಗಳು ಖಂಡಿಸಿಲ್ಲ – ಜೈಶಂಕರ್ ಪ್ರಶ್ನೆ
2017ರ ಕಾಯಿದೆಯ ಶಾಸನಬದ್ಧ ನಿಬಂಧನೆಗಳ ಅಡಿಯಲ್ಲಿ ಸರ್ಕಾರವು ಕಟ್ಟುನಿಟ್ಟಾದ ಅನುಸರಣೆಯನ್ನು ಖಾತ್ರಿ ಪಡಿಸಿಕೊಳ್ಳುತ್ತಿದೆ ಎಂಬುದು ಸ್ಪಷ್ಟವಾಗಿದೆ. ಹೆಚ್ಐವಿ/ ಏಡ್ಸ್ ಪೀಡಿತ ವ್ಯಕ್ತಿಗಳಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ನ್ಯಾ. ಸುಬ್ರಮಣಿಯನ್ ಪ್ರಸಾದ್ ಅವರನ್ನೊಳಗೊಂಡ ಪೀಠವು ಹೇಳಿದೆ. ಇದನ್ನೂ ಓದಿ: ಸ್ವಾಮೀಜಿ ದರ್ಶನ ಮಾಡೋ ಪುಣ್ಯ ನಾನು ಪಡೆದುಕೊಂಡಿಲ್ಲ ಅನ್ನೋ ನೋವಾಗ್ತಿದೆ: ಜಮೀರ್