Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಯಲ್ಲಿ ಆಪ್‍ಗೆ ಸೋಲು ಯಾಕಾಯ್ತು? ಬಿಜೆಪಿ ಗೆದ್ದಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿಯಲ್ಲಿ ಆಪ್‍ಗೆ ಸೋಲು ಯಾಕಾಯ್ತು? ಬಿಜೆಪಿ ಗೆದ್ದಿದ್ದು ಹೇಗೆ?

Latest

ದೆಹಲಿಯಲ್ಲಿ ಆಪ್‍ಗೆ ಸೋಲು ಯಾಕಾಯ್ತು? ಬಿಜೆಪಿ ಗೆದ್ದಿದ್ದು ಹೇಗೆ?

Public TV
Last updated: April 26, 2017 3:05 pm
Public TV
Share
5 Min Read
modi wave
SHARE

ನವದೆಹಲಿ: ಎರಡು ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಧಿಕ್ಕರಿಸಿ ಆಪ್‍ಗೆ ಮತ ನೀಡಿದ್ದ ದೆಹಲಿಯ ಜನತೆ ಈ ಬಾರಿ ಕೇಜ್ರಿವಾಲ್ ಸರ್ಕಾರದ ವಿರುದ್ಧ ಮತ ನೀಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಯಂತೆ ದೆಹಲಿ ಮಹಾನಗರ ಪಾಲಿಕೆಯಯಲ್ಲಿ ಮೂರನೇ ಬಾರಿಯೂ ಬಿಜೆಪಿ ಜಯಭೇರಿ ಬಾರಿಸಿದೆ.

2015ರ ಫೆಬ್ರವರಿಯಲ್ಲಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಾರ್ಟಿ ಸರ್ಕಾರಕ್ಕೆ ದೆಹಲಿ ಜನತೆ ನೀಡುತ್ತಿರುವ ಮಧ್ಯಂತರ ತೀರ್ಪು ಎಂದೇ ಬಿಂಬಿತವಾಗಿದ್ದ ಈ ಚುನಾವಣೆಯಲ್ಲಿ ಆಪ್ ಭಾರೀ ಸೋಲಾಗಿದೆ. ಹೀಗಾಗಿ ಬಿಜೆಪಿ ಗೆದ್ದಿದ್ದು ಹೇಗೆ? ಆಪ್‍ಗೆ ಸೋಲು ಯಾಕಾಯ್ತು ಎನ್ನುವ ವಿವರಣೆಯನ್ನು ಇಲ್ಲಿ ನೀಡಲಾಗಿದೆ

#1 ಮೋದಿ ವರ್ಸಸ್ ಕೇಜ್ರಿವಾಲ್
ಆಪ್ ತನ್ನ ಪ್ರಚಾರದಲ್ಲಿ ಪಕ್ಷಕ್ಕಿಂತ ಹೆಚ್ಚಾಗಿ ಕೇಜ್ರಿವಾಲ್ ಅವರನ್ನೇ ಹೈಲೈಟ್ ಮಾಡಿತ್ತು. ಪಕ್ಷಕ್ಕಿಂತಲೂ ಕೇಜ್ರಿವಾಲ್ ಅವರನ್ನೇ ಹೈಲೈಟ್ ಮಾಡಿದ್ದು ಆಂತರಿಕ ಅಸಮಾಧಾನಕ್ಕೆ ಕಾರಣವಾಗಿತ್ತು. ಮೋದಿ ವರ್ಸಸ್ ಕೇಜ್ರಿವಾಲ್ ಎಂಬಂತೆ ಪೋಸ್ಟರ್ ಪ್ರಕಟಿಸಿತ್ತು. ಪ್ರಧಾನಿ ಮೋದಿ ಬಿಜೆಪಿಯ ಶಕ್ತಿ. ಹೀಗಾಗಿ ಮೋದಿಯನ್ನು ವಿರೋಧಿಸಿ ಪ್ರಚಾರ ಮಾಡಿದ್ರೆ ನಾವು ಕ್ಲಿಕ್ ಆಗಬಹುದು ಎನ್ನುವ ಪ್ರಚಾರ ತಂತ್ರವನ್ನು ಆಪ್ ರೂಪಿಸಿತ್ತು. ಮೋದಿಗೆ ಸದ್ಯಕ್ಕೆ ದೇಶದಲ್ಲಿ ಪ್ರತಿ ನಾಯಕ ಕೇಜ್ರಿವಾಲ್ ಒಬ್ಬರೇ ಎನ್ನುವಂತೆ ಬಿಂಬಿಸಿತ್ತು. ಆದರೆ ಬಿಜೆಪಿ ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ದೆಹಲಿ ಪಕ್ಷದ ಮುಖ್ಯಸ್ಥ ಮನೋಜ್ ತಿವಾರಿ ಭಾವಚಿತ್ರಗಳನ್ನು ಪ್ರಕಟಿಸಿ ಪೋಸ್ಟರ್ ಹಾಕಿತ್ತು. ದೆಹಲಿಯ ಕೆಲವು ಕಡೆ ಪಕ್ಷದ ಹೆಸರು ಸಹ ಇಲ್ಲದೇ ಕೇವಲ ಕೇಜ್ರಿವಾಲ್ ಭಾವಚಿತ್ರದ ಪೋಸ್ಟರ್‍ಗಳು ಪ್ರಕಟಗೊಂಡಿತ್ತು.

#2 ಪಕ್ಷದ ವಿಸ್ತರಣೆಗೆ ಹೆಚ್ಚಿನ ಆದ್ಯತೆ:
ದೆಹಲಿ ಯಶಸ್ಸಿನ ಬಳಿಕ ಕೇಜ್ರಿವಾಲ್ ಪಕ್ಷವನ್ನು ಭಾರತದ ಇತರ ಕಡೆಗಳಲ್ಲಿ ವಿಸ್ತರಿಸಲು ಮುಂದಾದರು. ಪಂಚರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪಂಜಾಬ್, ಗುಜರಾತ್, ಗೋವಾ, ಹಿಮಾಚಲ ಪ್ರದೇಶ ಪಕ್ಷದ ಪರ ಹಿರಿಯ ನಾಯಕರು ಪ್ರಚಾರ ನಡೆಸಿದರು. ಕೇಜ್ರಿವಾಲ್ ಮತ್ತು ಹಿರಿಯ ನಾಯಕರು ಎರಡು ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದ ಮತದಾರ ಈ ಬಾರಿಯೂ ನಮಗೆ ಮತ ನೀಡುತ್ತಾನೆ ಎನ್ನುವ ಅತಿಯಾದ ವಿಶ್ವಾಸವನ್ನು ಹೊಂದಿ ಪಕ್ಷವನ್ನು ಬೇರೆ ಕಡೆ ತರಲು ಪ್ರಯತ್ನ ಪಟ್ಟರು. ಆದರೆ ಈ ಅತಿಯಾದ ವಿಶ್ವಾಸ ಈಗ ಆಪ್‍ಗೆ ಮುಳುವಾಗಿದೆ.

#3 ಇವಿಎಂ ವಿರುದ್ಧ ಹೋರಾಟ:
ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ಇವಿಎಂ ವಿರುದ್ಧ ಆರೋಪಗಳನ್ನೇ ಮಾಡಿತು. ಸ್ವತಃ ಕೇಜ್ರಿವಾಲ್ ಅವರೇ ಇವಿಎಂನ್ನು ಬಿಜೆಪಿ ಹ್ಯಾಕ್ ಮಾಡಿದೆ ಎಂದು ಆರೋಪಿಸಿದರು. ಆದರೆ ಬಿಜೆಪಿ ಈ ಆರೋಪ ಪ್ರತಿ ತಿರುಗೇಟು ನೀಡಿ ಈ ಹಿಂದಿನ ಚುನಾವಣೆಯಲ್ಲಿ ಆಪ್ ಕ್ವೀನ್ ಸ್ವೀಪ್ ಮಾಡಿತ್ತು. ಆಗ ಫಲಿತಾಂಶವನ್ನು ನೋಡಿ ಸಂಭ್ರಮಿಸಿದ ಆಪ್ ಈಗ ಆಯೋಗವನ್ನು ದೂರುತ್ತಿದೆ ಎಂದು ತಿರುಗೇಟು ನೀಡಿ ಪ್ರಚಾರ ನಡೆಸಿದ್ದು ಯಶಸ್ವಿ ಆಗಿದೆ.

#4 ಪಕ್ಷದ ಒಳಗಡೆ ಅಸಮಾಧಾನ:
2013 ಮತ್ತು 2015ರ ವಿಧಾನಸಭಾ ಚುನಾವಣೆ ವೇಳೆ ಆಪ್ ಸಂಘಟನೆ ಯಶಸ್ವಿಯಾಗಿತ್ತು. ನಾಯಕರು ಮತ್ತು ಕಾರ್ಯಕರ್ತರ ನಡುವಿನ ಸಂಬಂಧ ಚೆನ್ನಾಗಿತ್ತು. ಆದರೆ ಈ ಬಾರಿ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಿದ್ದ ಹಲವು ನಾಯಕರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಇದು ಹಲವು ಕಾರ್ಯಕರ್ತರಿಗೆ ಮತ್ತು ನಾಯಕರ ಅಸಮಾಧಾನಕ್ಕೆ ಕಾರಣವಾಗಿತ್ತು. 2013 ಮತ್ತು 2015ರ ಚುನಾವಣೆಯ ಸಂದರ್ಭದಲ್ಲಿ ಬೂತ್‍ಗಳಲ್ಲಿ ಕಾರ್ಯಕರ್ತರು ಕುಳಿತು ಮತದಾರರನ್ನು ಸೆಳೆಯುತ್ತಿದ್ದರು. ಆದರೆ ಈ ಬಾರಿ ಅಷ್ಟೊಂದು ಸಂಖ್ಯೆಯಲ್ಲಿ ಕಾರ್ಯಕರ್ತರು ಬೂತ್‍ನಲ್ಲಿ ಇರಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿತ್ತು. ಇದರಿಂದಾಗಿ ತಳಮಟ್ಟದಲ್ಲಿ ಪಕ್ಷದ ಪರ ಕಾರ್ಯಕರ್ತರು ಪ್ರಚಾರ ನಡೆಸಿದ ಕಾರಣ ಆಪ್‍ಗೆ ಸೋಲಾಗಿದೆ.

#5 ಆಡಳಿತ ವಿರೋಧಿ ಅಲೆ:
ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದ ಭರವಸೆಗಳನ್ನು ಈಡೇರಿಸದ ಕರಣ ಆಡಳಿತ ವಿರೋಧಿ ಅಲೆ ಎದ್ದಿತ್ತು. ಶುದ್ಧ ಕುಡಿಯುವ ನೀರು, ವಿದ್ಯುತ್ ಬೆಲೆ ಇಳಿಕೆ, ಇನ್ನೂ ಕೆಲಸ ಮಾಡದ ಮೊಹಲ್ಲ ಕ್ಲಿನಿಕ್, ಅರೇಗುತ್ತಿಗೆ ನೌಕರಿಗೆ ಖಾಯಂ ಇನ್ನೂ ಮಾಡದೆ ಇರುವುದು, ಬಡವರಿಗೆ ವ್ಯವಸ್ಥೆ ಕಾಲೋನಿ ನಿರ್ಮಿಸುವ ಭರವಸೆ ಹುಸಿಯಾಗಿತ್ತು. ಎರಡು ವರ್ಷದಲ್ಲಿ ಹೇಳಿಕೊಳ್ಳುವ ಕೆಲಸ ಆಗದೇ ದೆಹಲಿಗಿಂತ ಹೊರ ರಾಜ್ಯದದಲ್ಲಿ ಹೆಚ್ಚು ಸಮಯ ಕಳೆದಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಇದರ ಜೊತೆ ದೆಹಲಿ ಹಣವನ್ನು ಪಂಚ ರಾಜ್ಯ ಚುನಾವಣೆಗೆ ಬಳಕೆ ಮಾಡಿದ್ದಾರೆ ಅನ್ನೂ ಆರೋಪ ಬಂದಿತ್ತು.

#6 ಕಾನೂನು ಹೋರಾಟ:
ಕೇಂದ್ರ ಸರ್ಕಾರದ ಆಡಳಿತದಲ್ಲಿ ಅನಗತ್ಯವಾಗಿ ಕೇಜ್ರಿ ಸರ್ಕಾರ ಮೂಗು ತುರಿಸುತಿತ್ತು. ವೈಯುಕ್ತಿಕ ಕಾನೂನು ಹೋರಾಟಕ್ಕೆ ಸರ್ಕಾರದ ಹಣ ಬಳಕೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ದೆಹಲಿ ಅಭಿವೃದ್ಧಿಯಾಗಲಿಲ್ಲ, ವಿಶೇಷವಾಗಿ ಹಳೆ ದಿಲ್ಲಿ ಕಡೆಗಣೆ ಮಾಡಿದ್ದು ಆಪ್ ಸೋಲಿಗೆ ಕಾರಣವಾಗಿದೆ.

#7 ಬೇಕಾಬಿಟ್ಟಿ ಹೇಳಿಕೆ:
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದ ಕಾರಣ ಅವರ ಮೇಲೆ ಆರಂಭದಲ್ಲಿ ಜನ ಇಟ್ಟಿದ್ದ ನಂಬಿಕೆ ಕಡಿಮೆ ಆಯ್ತು. ಪಂಚರಾಜ್ಯಗಳ ಫಲಿತಾಂಶದ ಬಳಿಕ ಇವಿಎಂ ವಿರುದ್ಧ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದು ಅಲ್ಲದೇ ಪ್ರಚಾರದ ವೇಳೆ ಆಪ್ ಗೆ ಮತ ಹಾಕದಿದ್ರೆ ನಿಮ್ಮ ಮಕ್ಕಳಿಗೆ ಡೆಂಗ್ಯೂ ಬರುತ್ತೆ ಅಂತಾ ಹೇಳಿಕೆ ನೀಡಿದ್ದರು. ಸಿಎಂ ಕೇಜ್ರಿವಾಲ್ ದೆಹಲಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿಲ್ಲ. ಪ್ರಚಾರಕ್ಕಾಗಿ ಮೋದಿ ವಿರುದ್ಧವೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿತ್ತು.

#8 ಹೊಸಬರಿಗೆ ಟಿಕೆಟ್, ಪಕ್ಷ ಸಂಘಟನೆ:
ವಿಧಾನಸಭಾ ಚುನಾವಣೆಯ ಸೋಲಿನಿಂದ ಪಾಠ ಕಲಿತ ಬಿಜೆಪಿ ತಳಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡಿತ್ತು. ಅಷ್ಟೇ ಅಲ್ಲದೇ ಒಟ್ಟು ಇರುವ 270 ವಾರ್ಡ್ ಗಳಲ್ಲಿ 267 ಕಡೆ ಬಿಜೆಪಿ ಹೊಸ ಮುಖಗಳನ್ನು ಕಣಕ್ಕಿಳಿಸಿತ್ತು. ಯಾವ ಹಳೆಯ ಕಾರ್ಪೋರೇಟರ್‍ಗೂ ಟಿಕೆಟ್ ಕೊಟ್ಟಿರಲಿಲ್ಲ. ಹೊಸಬರಿಗೆ ಆದ್ಯತೆ ನೀಡುವ ಮೂಲಕ ಆಡಳಿತ ವಿರೋಧಿ ಅಲೆಯನ್ನು ಬಿಜೆಪಿ ಕಡಿಮೆ ಮಾಡಿಕೊಂಡಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಆಪ್ ವೈಫಲ್ಯವನ್ನು ಜನರಿಗೆ ತಿಳಿಸಿದ ಜೊತೆಗೆ ಮೋದಿ ಮತ್ತು ಕೇಂದ್ರದ ಸಾಧನೆಗಳನ್ನು ಪ್ರಚಾರ ಮಾಡಿತ್ತು. ಅಷ್ಟೇ ಅಲ್ಲದೇ ಆಮ್ ಆದ್ಮಿ ಪಾರ್ಟಿ ಶಾಸಕ ವೇದ್ ಪ್ರಕಾಶ್ ಬಿಜೆಪಿಗೆ ಹಾರಿದ್ದರು. ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷ, ಮಾಜಿ ಸಚಿವ ಅರವಿಂದರ್ ಸಿಂಗ್ ಲವ್ಲಿ ಕೂಡಾ ಬಿಜೆಪಿ ಸೇರಿದ್ದರು. ಈ ಎಲ್ಲ ಕಾರಣದ ಜೊತೆಗೆ ಕೇಂದ್ರ ಸರ್ಕಾರದ ಅಧಿನವಾಗಿರುವ ದೆಹಲಿಯನ್ನು ಅದೇ ಪಕ್ಷಕ್ಕೆ ಅಧಿಕಾರ ನೀಡಬೇಕು ಜನರ ಮನೋಭಾವದಿಂದಾಗಿ ಬಿಜೆಪಿ ಪ್ರಚಂಡ ಜಯಗಳಿಸಿದೆ.

ಇದೇ ತಿಂಗಳು ನಡೆದ ಉಪ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ತನ್ನ ತೆಕ್ಕೆಯಲ್ಲಿದ್ದ ರಜೌರಿ ಗಾರ್ಡನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಎದುರು ಸೋಲು ಅನುಭವಿಸಿತ್ತು.

ಚುನಾವಣೆಯಲ್ಲಿ ಯಾರಿಗೆ ಎಷ್ಟು ಸ್ಥಾನ?
2013ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 31, ಆಪ್ 28, ಕಾಂಗ್ರೆಸ್ 8 ಸ್ಥಾನಗಳನ್ನು ಗಳಿಸಿದ್ದರೆ, 2015ರ ಚುನಾವಣೆಯಲ್ಲಿ ಆಪ್ 67, ಬಿಜೆಪಿ 3 ಸ್ಥಾನಗಳನ್ನು ಗೆದ್ದುಕೊಂಡಿತ್ತು. 2014 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲ 7 ಸ್ಥಾನಗಳನ್ನು ಗೆದ್ದುಕೊಂಡಿತ್ತು.

https://t.co/GSkB7BlUX9

— BJP Delhi (@BJP4Delhi) April 26, 2017

Grateful to the people of Delhi for the faith in BJP. I laud the hardwork of team @BJP4Delhi which made the resounding MCD win possible.

— Narendra Modi (@narendramodi) April 26, 2017

#MCDresults is a slap & referendum on @ArvindKejriwal & his politics of deceit. He has failed delhi, cheated delhites. He must RESIGN now.

— Satish Upadhyay (@upadhyaysbjp) April 26, 2017

Mandate for BJP in #MCDresults reaffirms people's faith in good governance under the abled leadership of Hon'ble PM Shri @narendramodi ji.

— Sarbananda Sonowal (@sarbanandsonwal) April 26, 2017

Dedicating the #MCDresults victory to our martyrs. सरहद हो या सुकमा, their sacrifice unites us. We WILL replace bullets with ballots.

— Rajyavardhan Rathore (@Ra_THORe) April 26, 2017

TAGGED:aapbjpdelhikejriwalMCD Electionsmodiಆಪ್ಕಾಂಗ್ರೆಸ್ಕೇಜ್ರಿವಾಲ್ಚುನಾವಣೆದೆಹಲಿಪಾಲಿಕೆ ಫಲಿತಾಂಶಬಿಜೆಪಿ
Share This Article
Facebook Whatsapp Whatsapp Telegram

Cinema news

Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories
yash 4
ನಿಮ್ಮನ್ನ ನೋಡೋಕೆ ನಾನೂ ಕಾಯ್ತಿದ್ದೀನಿ ಎಂದ ಯಶ್
Cinema Latest Sandalwood Top Stories
katrina Kaif and vicky kaushal
ಪುತ್ರನಿಗೆ `ವಿಹಾನ್‌ʼ ಎಂದು ಹೆಸರಿಟ್ಟ ಕತ್ರೀನಾ-ವಿಕ್ಕಿ ಕೌಶಲ್ 
Bollywood Cinema Latest Top Stories

You Might Also Like

udp monkey fever 3
Latest

ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಂಗನಕಾಯಿಲೆ ಪತ್ತೆ

Public TV
By Public TV
8 hours ago
Bike Wheeling Mysuru
Crime

Video Viral | ಪೊಲೀಸರ ಕಣ್ಣೆದುರೇ ಯುವಕರು ಡೆಡ್ಲಿ ಬೈಕ್ ವ್ಹೀಲಿಂಗ್

Public TV
By Public TV
8 hours ago
Kogilu Layout Demolition 20 officials of Rajiv Gandhi Housing Scheme visited site
Bengaluru City

ಕೋಗಿಲು ಲೇಔಟ್‌ ಒತ್ತುವರಿ ತೆರವು ಕೇಸ್;‌ ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ

Public TV
By Public TV
8 hours ago
Janardhana Reddy
Bellary

ರಾಜಶೇಖರ್ ಸಾವು ಆಕಸ್ಮಿಕ ಅಲ್ಲ, ಉದ್ದೇಶಪೂರ್ವಕ ಕೊಲೆ: ಜನಾರ್ದನ ರೆಡ್ಡಿ

Public TV
By Public TV
9 hours ago
daily horoscope dina bhavishya
Astrology

ದಿನ ಭವಿಷ್ಯ 08-01-2026

Public TV
By Public TV
10 hours ago
pm modi pejawar seer
Latest

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ ನಿಲ್ಲಿಸಲು ಕ್ರಮವಹಿಸಿ: ಮೋದಿಗೆ ಪೇಜಾವರ ಶ್ರೀ ಪತ್ರ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?