Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕರ್ನಾಟಕಕ್ಕೆ ಕಂಟಕ ತರುತ್ತಾ ದೆಹಲಿ ಸಭೆ? ಯಾವ ಜಿಲ್ಲೆಯಿಂದ ಎಷ್ಟು ಮಂದಿ ಭಾಗಿ?

Public TV
Last updated: April 1, 2020 9:13 pm
Public TV
Share
2 Min Read
Nizamuddin A
SHARE

– ಜಮಾತ್ ಸಭೆಯಲ್ಲಿ ರಾಜ್ಯದ 391 ಜನರು ಭಾಗಿ
– ಎಲ್ಲರಿಗೂ ಹೋಮ್ ಕ್ವಾರಂಟೈನ್ ಎಂದ ಬೊಮ್ಮಾಯಿ

ಬೆಂಗಳೂರು: ದೆಹಲಿಯ ಮರ್ಕಜ್ ಮಸೀದಿ ಕರ್ನಾಟಕಕ್ಕೂ ಮುಳುವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಯಾಕಂದ್ರೆ ರಾಜ್ಯದ ಬಹುತೇಕ ಜಿಲ್ಲೆಗಳಿಂದ ಮೌಲ್ವಿಗಳು ದೆಹಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗಿದ್ದಾರೆ.

ಪಬ್ಲಿಕ್ ಟಿವಿಗೆ ಲಭ್ಯವಾದ ಪ್ರಾಥಮಿಕ ಮಾಹಿತಿ ಪ್ರಕಾರ, ರಾಜ್ಯದಿಂದ ದೆಹಲಿಗೆ ಹೋಗಿ ಬಂದವರ ಸಂಖ್ಯೆ 430 ದಾಟುತ್ತದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಸವರಾಜ ಬೊಮ್ಮಾಯಿ ಅವರು, ದೆಹಲಿಯ ನಿಜಾಮುದ್ದೀನ್ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರ ರಾಜ್ಯದ ಮೌಲ್ವಿಗಳ ಸಂಖ್ಯೆ ಏರಿಕೆಯಾಗಿದೆ. ಕರ್ನಾಟಕದ 391 ಮಂದಿ ದೆಹಲಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. ಎಲ್ಲ 391 ಜನರನ್ನೂ ಕ್ವಾರಂಟೈನ್ ಮಾಡಲಾಗಿದೆ. ಕೆಲವರು ತಮ್ಮ ನಿವಾಸದಲ್ಲಿ ಇರೇ ಬೇರೆ ಬೇರೆ ಕಡೆ ತೆರಳಿದ್ದಾರೆ. ಅವರನ್ನು ಪತ್ತೆ ಹಚ್ಚುವ ಕೆಲಸ ನಡೆದಿದೆ. ಇನ್ನು ಕೆಲವರು ಕಾಶ್ಮೀರ, ಗುಜರಾತ್, ಮಹಾರಾಷ್ಟ್ರ, ಉತ್ತರಪ್ರದೇಶ, ರಾಜಸ್ಥಾನ ರಾಜ್ಯಗಳಿಗೆ ತೆರಳಿದ್ದು ಕರ್ನಾಟಕಕ್ಕೆ ತಲುಪಿಲ್ಲ. ಅವರ ಬಗ್ಗೆಯೂ ಶೋಧ ಕಾರ್ಯ ನಡೆಯುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Nizamuddin Aulia Dargah

ಯಾರ್ಯಾರು ದೆಹಲಿ ಧಾರ್ಮಿಕ ಸಭೆಗೆ ಹೋಗಿ ಬಂದಿದ್ದೀರೋ ಅವರೆಲ್ಲಾ ಸ್ವಯಂಪ್ರೇರಿತವಾಗಿ ಮುಂದೆ ಬಂದು ಮಾಹಿತಿ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಮನವಿ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ಜಮಾತ್‍ಗೆ ಹೋಗಿ ಬಂದು ರಾಜ್ಯದ ವಿವಿಧೆಡೆ ನೆಲೆಸಿರುವ 50 ವಿದೇಶಿಗರನ್ನು ಕ್ವಾರಂಟೈನ್ ಮಾಡಲಾಗಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಇಂದು 110 ಮಂದಿಗೆ ಕೊರೊನಾ – ಪಾಸಿಟಿವ್ ಬಂದವರೆಲ್ಲ ದೆಹಲಿ ಸಭೆಯಲ್ಲಿ ಭಾಗಿ

ಯಾವ ಜಿಲ್ಲೆಯಿಂದ ಎಷ್ಟೆಷ್ಟು ಮಂದಿ?
ಬೆಂಗಳೂರಿನಿಂದ 60 ಮಂದಿ ದೆಹಲಿಯಲ್ಲಿ ನಡೆದಿದ್ದ ತಬ್ಲಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ರು. ಆದರೆ ಈವರೆಗೂ 9 ಮಂದಿ ಮಾತ್ರ ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಭಾಗಿಯಾಗಿದ್ದ 70 ಮಂದಿ ಪತ್ತೆಯಾಗಿದ್ದಾರೆ. ಮೈಸೂರಿನಿಂದ ಕಾರ್ಯಕ್ರಮಕ್ಕೆ ಹಾಜರಾಗಿದ್ದ 63 ಮಂದಿ ಪೈಕಿ 43 ಮಂದಿ ಮಾತ್ರ ಪತ್ತೆಯಾಗಿದ್ದಾರೆ. ಬೀದರ್ ಜಿಲ್ಲೆಯ 26 ಹಾಗೂ ಬಾಗಲಕೋಟೆ ಜಿಲ್ಲೆಯ 21 ಜನರು ಹಾಜರಾಗಿದ್ದರು.

ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 342 ಜನರಲ್ಲಿ, ಈಗ ಬೆಂಗಳೂರಿಂದ 4 ಹಾಗೂ ಬೆಳಗಾವಿ ಜಿಲ್ಲೆಯಿಂದ 5 ಜನರನ್ನು ಸೇರಿ ಒಟ್ಟು 200 ಜನರನ್ನು Quarantine ಮಾಡಲಾಗಿದೆ. ಉಳಿದವರನ್ನು ಶೀಘ್ರವೇ ಗುರುತಿಸುವ ಕಾರ್ಯ ನಡೆದಿದೆ

— B Sriramulu (@sriramulubjp) April 1, 2020

ಕಲಬುರಗಿ ಜಿಲ್ಲೆಯಿಂದ ದೆಹಲಿ ಸಭೆಗೆ ಹಾಜರಾಗಿದ್ದ 26 ಜನರ ಪೈಕಿ 14 ಮಂದಿ ಮಾತ್ರ ಪತ್ತೆಯಾಗಿದ್ದಾರೆ. ವಿಜಯಪುರ ಜಿಲ್ಲೆಯ 13 ಜನರು, ಚಿಕ್ಕಬಳ್ಳಾಪುರದ 17 ಮಂದಿ, ಚಿತ್ರದುರ್ಗದ 9 ಜನರು, ದಾವಣಗೆರೆಯ ಇಬ್ಬರು, ಧಾರವಾಡದ 15 ಮಂದಿ ಹಾಗೂ ಕಲಬುರಗಿಯ 19 ಜನರು ಜಮಾತ್ ಸಭೆಗೆ ಹೋಗಿದ್ದರು.

ಪ್ರಾರ್ಥನೆಯಲ್ಲಿ ಭಾಗವಹಿಸಿದ ಇಂಡೋನೇಷ್ಯಾ ಹಾಗೂ ಮಲೇಶಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದ ಮಾಹಿತಿ‌ ಲಭಿಸಿದೆ. ಇದರಲ್ಲಿ 12 ಜನರನ್ನ ಪತ್ತೆ ಹಚ್ಚಿ Quarantine ಮಾಡಲಾಗುತ್ತಿದೆ. ತಮ್ಮ ದೇಶಕ್ಕೆ ಹಿಂತಿರುಗದೆ ಇಲ್ಲೇ ಉಳಿದಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ Quarantine ಮಾಡಲಾಗುವುದು

— B Sriramulu (@sriramulubjp) April 1, 2020

ಕೊಪ್ಪಳ ಜಿಲ್ಲೆಯ 14 ಜನ, ಉತ್ತರ ಕನ್ನಡ ನಾಲ್ವರು ಜಮಾತ್ ಸಭೆಗೆ ಹಾಜರಾಗಿದ್ದರು. ದಕ್ಷಿಣ ಕನ್ನಡದ 28 ಜನರು ಭಾಗವಹಿಸಿದ್ದು, 21 ಜನರು ಮಾತ್ರ ಪತ್ತೆಯಾಗಿದ್ದಾರೆ. ಯಾದಗಿರಿ ಜಿಲ್ಲೆಯ ಐವರು, ಕೋಲಾರದ 8 ಮಂದಿ, ಗದಗ ಜಿಲ್ಲೆಯ 6 ಜನರು, ತುಮಕೂರು ಜಿಲ್ಲೆಯ 11 ಮಂದಿ ಹಾಜರಾಗಿದ್ದರು. ಕೊಡಗು ಜಿಲ್ಲೆಯ 11 ಜನರು ಭಾಗವಹಿಸಿದ್ದು, ಕುಶಾಲನಗರದ ಯಾರು ವಾಪಸ್ ಆಗಿಲ್ಲ. ಉಡುಪಿಯಿಂದ 16 ಜನರು ಭಾಗವಹಿಸಿದ್ದರೆ, ಚಾಮರಾಜನಗರ ಜಿಲ್ಲೆಯ 14 ಜನರ ಪೈಕಿ 4 ಪತ್ತೆಯಾಗಿದ್ದಾರೆ.

TAGGED:Basavaraj BommaiCoronavirusdelhiHome QuarantinekarnatakaNizamuddinPublic TVಕರ್ನಾಟಕಕೊರೊನಾದೆಹಲಿನಿಜಾಮುದ್ದೀನ್ಪಬ್ಲಿಕ್ ಟಿವಿಬೆಂಗಳೂರುಸಭೆ
Share This Article
Facebook Whatsapp Whatsapp Telegram

You Might Also Like

Theft
Bengaluru City

ಮಕ್ಕಳ ಕಾಲೇಜು ಫೀಸ್‌ಗೆ ಸಾಲ ಮಾಡಿ ತಂದಿಟ್ಟ ಹಣವನ್ನೇ ದೋಚಿದ ಖದೀಮರು

Public TV
By Public TV
17 minutes ago
Colonel Venkatesh Nayak
Bengaluru City

ಅಮೆರಿಕದ ಮೇಲೆ ಇರಾನ್‌ ಪ್ರತಿದಾಳಿ ಮಾಡೇ ಮಾಡುತ್ತೆ: ಕರ್ನಲ್ ವೆಂಕಟೇಶ್ ನಾಯ್ಕ್

Public TV
By Public TV
50 minutes ago
krs dam mandya
Districts

ಹೊಸ ದಾಖಲೆಗೆ ಸಿದ್ಧವಾಗ್ತಿದೆ ಕೆಆರ್‌ಎಸ್ – ಡ್ಯಾಂ ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ

Public TV
By Public TV
53 minutes ago
Oil Price Hike
Latest

America Strikes In Iran | ಕಚ್ಚಾ ತೈಲ, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ – ಆರ್ಥಿಕ ತಜ್ಞರ ಕಳವಳ

Public TV
By Public TV
55 minutes ago
BMTC bus
Bengaluru City

BMTC, KSRTC ಸೇರಿ 4 ನಿಗಮಗಳಿಗೂ ಎಚ್ಚರಿಕೆ – ಬೇಕಾಬಿಟ್ಟಿ ಬಸ್ ಚಲಾಯಿಸಿದ್ರೆ ಕೆಲಸ ಹೋಗೋದು ಪಕ್ಕಾ!

Public TV
By Public TV
1 hour ago
rashmika
Cinema

ರಶ್ಮಿಕಾ ಡಿಮ್ಯಾಂಡ್ ಕಮ್ಮಿಯಾಯ್ತಾ? ಸಂಭಾವನೆನೂ ಕಮ್ಮಿಯಾಯ್ತಾ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?