Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೆಹಲಿಯಲ್ಲಿ ಆಪ್ ಕಮಾಲ್ ಮಾಡಿದ್ದು ಹೇಗೆ? ಬಿಜೆಪಿ ಸೋಲಿಗೆ ಕಾರಣ ಏನು?

Public TV
Last updated: February 11, 2020 3:32 pm
Public TV
Share
5 Min Read
AAP kejriwal
SHARE

ನವದೆಹಲಿ: ಅಭಿವೃದ್ಧಿ ವಿಚಾರವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದರೆ ಗೆಲುವು ಖಂಡಿತ ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ರಾಜಧಾನಿಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ಸನ್ನು ಸೋಲಿಸಿ ಅಧಿಕಾರಕ್ಕೆ ಏರಿದೆ. ಈ ಮೂಲಕ ಶೀಲಾ ದೀಕ್ಷಿತ್ ಬಳಿಕ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲ 7 ಸ್ಥಾನಗಳನ್ನು ಗೆದ್ದುಕೊಂಡಿದ್ದರಿಂದ ವಿಧಾನಸಭಾ ಚುನಾವಣೆಯಲ್ಲೂ ಕಮಲ ಅರಳಿ ಅಧಿಕಾರಕ್ಕೆ ಏರಲಿದ್ದೇವೆ ಎಂದು ಬಿಜೆಪಿ ನಾಯಕರು ಪ್ರಚಾರದಲ್ಲಿ ಹೇಳುತ್ತಿದ್ದರು. ಮಾಜಿ ರಾಷ್ಟ್ರೀಯ ಅಧ್ಯಕ್ಷ, ಗೃಹ ಸಚಿವ ಅಮಿತ್ ಶಾ ಈ ಬಾರಿ 45ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಚಾಣಕ್ಯನ ತಂತ್ರಗಾರಿಕೆ ಸೋಲಾಗಿದೆ.

AAP

ಎಲ್ಲ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಯಲ್ಲಿ ಈ ಬಾರಿಯೂ ಕೇಜ್ರಿವಾಲ್‍ರದ್ದೇ ಹವಾ ಎಂದು ಭವಿಷ್ಯ ನುಡಿದಿತ್ತು. ಈ ಭವಿಷ್ಯ ಮತ್ತೊಮ್ಮೆ ನಿಜವಾಗಿದೆ. 2015ರ ಚುನಾವಣೆಯಲ್ಲಿ ಒಟ್ಟು 70 ಸ್ಥಾನಗಳ ಪೈಕಿ ಆಪ್ 67, ಬಿಜೆಪಿ 3, ಕಾಂಗ್ರೆಸ್ ಶೂನ್ಯ ಸಂಪಾದಿಸಿತ್ತು. ಆದರೆ ಈ ಬಾರಿ ಆಪ್ 63, ಬಿಜೆಪಿ 7 ಸ್ಥಾನ ಪಡೆದರೆ ಕಾಂಗ್ರೆಸ್ ಈ ಬಾರಿಯೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ.

ಹಾಗೆ ನೋಡಿದರೆ ಬಿಜೆಪಿ ಈ ಬಾರಿ ಹೆಚ್ಚಿನ ಸ್ಥಾನಗಳಿಸಿದೆ. ಅಷ್ಟೇ ಅಲ್ಲದೇ ಶೇಖಡವಾರು ಮತ ಪ್ರಮಾಣವನ್ನು ಹೆಚ್ಚಿಸಿಕೊಂಡಿದೆ. 2015ರಲ್ಲಿ ಆಪ್ ಶೇ.54, ಬಿಜೆಪಿ ಶೇ.32, ಕಾಂಗ್ರೆಸ್ ಶೇ.9 ರಷ್ಟು ಮತ ಪಡೆದಿದ್ದರೆ ಈ ಬಾರಿ ಆಪ್ ಶೇ.53, ಬಿಜೆಪಿ ಶೇ.38, ಕಾಂಗ್ರೆಸ್ ಶೇ.4 ರಷ್ಟು ಮತ ಪಡೆದಿದೆ.

ಆಪ್ ಗೆದ್ದಿದ್ದು ಹೇಗೆ?
ಎರಡು ವರ್ಷಕ್ಕೂ ಮುನ್ನ ದೆಹಲಿ ಚುನಾವಣೆ ಮೇಲೆ ಆಮ್ ಅದ್ಮಿ ಪಕ್ಷ ಕಣ್ಣಿಟ್ಟಿತ್ತು. ಆರಂಭದಿಂದಲೇ ಬಿಜೆಪಿ ಟೀಕೆಗೆ ಕೇಜ್ರಿವಾಲ್ ತಟಸ್ಥ ನಿಲುವು ಕಾಯ್ದುಕೊಂಡಿದ್ದರು. ಜಗಳಗಂಟ ಎನ್ನುವ ಆರೋಪದಿಂದ ದೂರ ಉಳಿಯುವ ಈ ಪ್ರಯೋಗ ಯಶಸ್ವಿ ಆಯ್ತು.

aap bjp

ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಟ್ವಿಟ್ಟರ್ ನಲ್ಲಿ ಟೀಕೆ ಮಾಡುತ್ತಿದ್ದರು. ಆದರೆ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾದ ನಂತರ ಮೋದಿ ವಿರುದ್ಧ ಟೀಕೆಗೆ ಜಾಸ್ತಿ ಹೋಗದೇ ಅಭಿವೃದ್ಧಿ ಮಂತ್ರವನ್ನೇ ಹೆಚ್ಚು ಹೆಚ್ಚು ಜಪಿಸತೊಡಗಿದರು.

ಬಡವರು, ಸ್ಲಂ ನಿವಾಸಿಗಳಿಗೆ ಉಚಿತವಾಗಿ ವಿದ್ಯುತ್, ಕುಡಿಯುವ ನೀರು, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಿತ್ತು. ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಿ ಕಡಿಮೆ ಬೆಲೆಯಲ್ಲಿ ಚಿಕಿತ್ಸೆ, ಔಷಧಿ ನೀಡಿತ್ತು. ಸ್ಲಂ ನಿವಾಸಿಗಳಿಗಾಗಿ ಮೊಹಲ್ಲಾ ಕ್ಲಿನಿಕ್ ವ್ಯವಸ್ಥೆ, ಇತ್ತಿಚೆಗೆ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ವ್ಯವಸ್ಥೆ ಮತ್ತು 200 ಯೂನಿಟ್ ವಿದ್ಯುತ್ ಉಚಿತ ನೀಡುವ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡರು.

ಇತ್ತೀಚೆಗೆ ಮಹಿಳೆಯರಿಗೆ ಉಚಿತ ಸಾರಿಗೆಯನ್ನು ಕೇಜ್ರಿವಾಲ್ ಪ್ರಕಟಿಸಿದ್ದರು. ಸಿಎಎ, ಎನ್‍ಆರ್.ಸಿ ಎನ್‍ಪಿಆರ್ ವಿಚಾರಗಳಲ್ಲಿ ಕೇಜ್ರಿವಾಲ್ ತಟಸ್ಥ ಧೋರಣೆ ಅನುಸರಿಸುವ ಮೂಲಕ ವಿವಾದ ಆಗದಂತೆ ನೋಡಿಕೊಂಡರು. ಬಿಜೆಪಿಯ ಭಯೋತ್ಪಾದಕ ಟೀಕೆಗೆ ಕೇಜ್ರಿವಾಲ್ ಮೌನಕ್ಕೆ ಶರಣಾಗಿದ್ದರು.

AAP Congress

ವಿಶೇಷವಾಗಿ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ವಿಚಾರದಲ್ಲಿ ಕೇಜ್ರಿವಾಲ್ ಕೇಂದ್ರದ ಪರ ನಿಂತಿದ್ದರು. ಇತ್ತೀಚಿಗೆ ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನದ ಫೆಡರಲ್ ಮಂತ್ರಿ ಫವಾದ್ ಚೌಧರಿ, ಭಾರತೀಯರು ಮೋದಿಯನ್ನು ಸೋಲಿಸಬೇಕು ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಕೇಜ್ರಿವಾಲ್ ಮೋದಿ ಪರ ಬ್ಯಾಟ್ ಮಾಡಿ, ಭಯೋತ್ಪಾದನೆಗೆ ನೆರವು ನೀಡುವ ದೇಶ ಭಾರತದ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ನಾವು ಸಹಿಸುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದರು.

ನರೇಂದ್ರ ಮೋದಿ ಅವರು ಭಾರತದ ಪ್ರಧಾನ ಮಂತ್ರಿ ಮತ್ತು ನನಗೂ ಅವರು ಪ್ರಧಾನ ಮಂತ್ರಿ. ದೆಹಲಿಯ ಚುನಾವಣೆ ಭಾರತದ ಆಂತರಿಕ ವಿಚಾರ. ಹಾಗಾಗಿ ಪಾಕಿಸ್ತಾನ ಎಷ್ಟೇ ಪ್ರಯತ್ನ ಮಾಡಿದರೂ ಭಾರತ ದೇಶದ ಏಕತೆಯನ್ನು ಹಾಳು ಮಾಡಲು ಎಂದಿಗೂ ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ತಿರುಗೇಟು ನೀಡಿದ್ದರು.

नरेंद्र मोदी जी भारत के प्रधानमंत्री है। मेरे भी प्रधानमंत्री है। दिल्ली का चुनाव भारत का आंतरिक मसला है और हमें आतंकवाद के सबसे बड़े प्रायोजकों का हस्तक्षेप बर्दाश्त नहीं। पाकिस्तान जितनी कोशिश कर ले, इस देश की एकता पर प्रहार नहीं कर सकता। https://t.co/E2Rl65nWSK

— Arvind Kejriwal (@ArvindKejriwal) January 31, 2020

ಬಹಳ ಮುಖ್ಯವಾಗಿ ಆಪ್ ಈ ಹಿಂದಿನ ಎರಡು ಚುನಾವಣೆ ಹೋಲಿಸಿದರೆ ಆಪ್ ಬಹಳ ಗಂಭೀರವಾಗಿ ಈ ಚುನಾವಣೆಯನ್ನು ತೆಗೆದುಕೊಂಡಿತ್ತು. ಸಾಮಾಜಿಕ ಜಾಲತಾಣ ವಿಚಾರ ಬಂದಾಗ ದೆಹಲಿಯಲ್ಲಿ ಕಾಂಗ್ರೆಸ್ಸಿಗಿಂತ ಆಪ್ ಬಲಿಷ್ಟವಾಗಿದ್ದರೂ ಬಿಜೆಪಿಯನ್ನು ಸೋಲಿಸಲು ಚುನಾವಣಾ ತಂತ್ರಗಾರಿಕಾ ನಿಪುಣ ಪ್ರಶಾಂತ್ ಕಿಶೋರ್ ಅವರನ್ನು ಕೇಜ್ರಿವಾಲ್ ಸಂಪರ್ಕಿಸಿದ್ದರು. ಪ್ರಶಾಂತ್ ಕಿಶೋರ್ ಅವರ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ಸಾಮಾಜಿಕ ಜಾಲತಾಣದಲ್ಲಿ ಅತ್ಯುತ್ತಮವಾಗಿ ಪ್ರಚಾರ ನಡೆಸುವ ಮೂಲಕ ಆಪ್ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ.

ಬಿಜೆಪಿಗಿಂತ ಆಪ್ ಹೆಚ್ಚು ಸಮರ್ಥವಾಗಿ ಸಮಾಜಿಕ ಜಾಣತಾಣಗಳನ್ನು ಸಮರ್ಥವಾಗಿ ನಿಭಾಯಿಸಿತ್ತು. ಸಿಸಿಟಿವಿ ಅಳವಡಿಕೆ ಪ್ರಶ್ನಿಸಿದ್ದ ಅಮಿತ್ ಶಾಗೆ ಅವರ ಭಾಷಣ ಮೂರು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದ ತುಣುಕು ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಲಾಗಿತ್ತು. ಶಾಲೆ ಅವ್ಯವಸ್ಥೆ ವಿಡಿಯೋ ಮಾಡಿ ಮಾತನಾಡಿದ್ದ ಸಂಸದ ಗೌತಮ್ ಗಂಭೀರ್‍ಗೆ ಅದೇ ವಿಡಿಯೋದಲ್ಲಿನ ನೋಟಿಸ್ ರಿಟ್ವೀಟ್ ಮಾಡಿ ವ್ಯಂಗ್ಯ ಮಾಡಲಾಗಿತ್ತು. ತನ್ನೇಲ್ಲ ನಿಲುವುಗಳನ್ನು ಸೋಷಿಯಲ್ ಮಿಡಿಯಾ ಮೂಲಕ ಜನರಿಗೆ ಯಶಸ್ವಿಯಾಗಿ ತಲುಪಿಸಿದ್ದು ಚುನಾವಣಾ ಗೆಲುವಿಗೆ ಸಹಕಾರಿಯಾಗಿದೆ.

prashanth kishore 10

ಬಿಜೆಪಿ ಸೋತಿದ್ದು ಹೇಗೆ?
ದೆಹಲಿಯಲ್ಲಿ ಕಾಂಗ್ರೆಸ್ಸಿಗೆ ವೋಟ್ ಹಾಕಿದ್ದರೂ ಅಧಿಕಾರಕ್ಕೆ ಬರುವುದು ಕಷ್ಟ ಎನ್ನುವ ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೆಂದು ಕಾಂಗ್ರೆಸ್ ಮತದಾರರು ಆಪ್ ಪಕ್ಷವನ್ನು ಬೆಂಬಲಿಸಿದ್ದರು. ಇದರಿಂದಾಗಿ ಕಾಂಗ್ರೆಸ್ ಮತ ಆಪ್‍ಗೆ ವರ್ಗಾವಣೆಯಾಗಿತ್ತು.

ಸಿಎಎ, ಎನ್‍ಆರ್‍ಸಿ ವಿರೋಧಿ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಮುಸ್ಲಿಂ ಮತಗಳು ಆಪ್‍ಗೆ ಬಿದ್ದಿತ್ತು. ಚುನಾವಣೆಗೆ ನಾಯಕತ್ವದ ಕೊರತೆ ಎದುರಾದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಮುಖವನ್ನು ಇಟ್ಟುಕೊಂಡು ಬಿಜೆಪಿ ಮತ ಕೇಳಿತ್ತು. ಇದರಿಂದಾಗಿ ಚುನಾವಣೆ ಕೇಂದ್ರ ಸರ್ಕಾರ ವರ್ಸಸ್ ಕೇಜ್ರಿವಾಲ್ ಎಂದೇ ಬಿಂಬಿತವಾಗಿತ್ತು.

Amit Shah

ಕೇಜ್ರಿವಾಲ್ ಎದುರು ಸಿಎಂ ಅಭ್ಯರ್ಥಿಯನ್ನು ಬಿಜೆಪಿ ಘೋಷಣೆ ಮಾಡಿರಲಿಲ್ಲ. ಡಾ. ಹರ್ಷವರ್ಧನ್, ಮನೋಜ್ ತಿವಾರಿ ಬೆಂಬಲಿಗರ ಕಿತ್ತಾಟದಿಂದಾಗಿ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಬಹಿರಂಗವಾಗಿತ್ತು. ಬಿಜೆಪಿ ಅಭಿವೃದ್ಧಿ ವಿಚಾರ ಬಿಟ್ಟು ಶಾಹೀನ್ ಭಾಗ್, ಪಾಕ್ ವಿಚಾರಕ್ಕೆ ಹೆಚ್ಚು ಒತ್ತು ನೀಡಿತ್ತು. ಇದರ ಜೊತೆ “ಕೇಂದ್ರಕ್ಕೆ ಮೋದಿ, ದೆಹಲಿಗೆ ಕೇಜ್ರಿವಾಲ್” ಎಂಬ ನಿಲುವಿಗೆ ಮತದಾರರು ಬಂದ ಪರಿಣಾಮ ರಾಷ್ಟ್ರ ರಾಜಧಾನಿಯಲ್ಲಿ ಕಮಲ ಮತ್ತು ಕೈಯನ್ನು ಪೊರಕೆ ಗುಡಿಸಿ ಹಾಕಿದೆ.

ಪ್ರಚಾರದ ಕೊನೆಯಲ್ಲಿ ಚುನಾವಣೆ ಭಾವನ್ಮಾಕ ರೂಪ ಪಡೆದುಕೊಂಡಿತ್ತು. ಕೇಂದ್ರ ಸಚಿವ ಪ್ರಕಾಶ್ ಜಾವೇಡ್ಕರ್ ಭಾಷಣದ ಅಬ್ಬರದಲ್ಲಿ ಕೇಜ್ರಿವಾಲ್ ಅವರನ್ನ ಭಯೋತ್ಪಾದಕ ಎಂದಿದ್ದರು. ಇದರಿಂದ ನೊಂದಿದ್ದ ಕೇಜ್ರಿವಾಲ್ ಕಣ್ಣಿರಿಟ್ಟಿದ್ದರು. ಇದನ್ನೇ ಬಳಸಿಕೊಂಡ ಕೇಜ್ರಿವಾಲ್, ನಾನು ನಿಮ್ಮ ಮಗ ನಿಮಗಾಗಿ ಕೆಲಸ ಮಾಡುತ್ತೇನೆ ನನ್ನನ್ನು ಭಯೋತ್ಪಾದಕ ಎನ್ನುತ್ತಾರೆ ಎನ್ನುವ ಮೂಲಕ ಅನುಕಂಪದ ಅಲೆ ಸೃಷ್ಟಿಸುವ ಪ್ರಯತ್ನ ಮಾಡಿ ಮತ ಸೆಳೆಯುವಲ್ಲಿ ಯಶಸ್ವಿಯಾದರು.

Mufflerman ???? pic.twitter.com/OX6e8o3zay

— AAP (@AamAadmiParty) February 11, 2020

TAGGED:aapbjpcongressDelhi Resultskejriwalnarendra modiಅಪ್ಕೇಜ್ರಿವಾಲ್ದೆಹಲಿನರೇಂದ್ರ ಮೋದಿನವದೆಹಲಿಬಿಜೆಪಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Vishnuvardhan Memorial 3
ದಾದಾ ಅಂತ್ಯಕ್ರಿಯೆ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಿ – ಫಿಲ್ಮ್ ಚೇಂಬರ್‌ಗೆ ವಿಷ್ಣು ಅಭಿಮಾನಿಗಳ ಸಂಘ ಮನವಿ
Cinema Latest Sandalwood Top Stories
Actor Jaggesh at mantralaya 1
ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ
Cinema Districts Latest Raichur Sandalwood Top Stories
rana daggubati
ಆನ್‌ಲೈನ್ ಬೆಟ್ಟಿಂಗ್ – ಇ.ಡಿ ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ
Cinema Latest Top Stories
Dhruva Sarja Raghavendra Hegde
ಧ್ರುವ ಬಳಗದ ಆರೋಪಕ್ಕೆ ನಿರ್ದೇಶಕ ರಾಘವೇಂದ್ರ ಹೆಗಡೆ ಸ್ಪಷ್ಟನೆ
Cinema Latest Sandalwood Top Stories
darshan 28 years cinema journey
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
Cinema Latest Sandalwood Top Stories

You Might Also Like

8 Women Die On Way To Temple After Van Falls Off Road On Hilly Terrain In Pune
Crime

30 ಅಡಿ ಕಂದಕಕ್ಕೆ ಉರುಳಿದ ವ್ಯಾನ್ – 8 ಮಹಿಳೆಯರು ಸಾವು, 29 ಮಂದಿಗೆ ಗಾಯ

Public TV
By Public TV
3 hours ago
Dharmasthala Mass Burial Probe NHRC begins work on document collection
Districts

ಧರ್ಮಸ್ಥಳ ಬುರುಡೆ ರಹಸ್ಯ – ದಾಖಲೆ ಸಂಗ್ರಹಿಸುವ ಕೆಲಸ ಆರಂಭಿಸಿದ NHRC

Public TV
By Public TV
4 hours ago
BASAVARAJU FINE
Chamarajanagar

ಸೆಲ್ಫಿ ತೆಗೆಯಲು ಹೋಗಿ ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ ಆಗಿದ್ದ ವ್ಯಕ್ತಿಗೆ 25 ಸಾವಿರ ದಂಡ!

Public TV
By Public TV
4 hours ago
Basavaraj Bommai 1
Districts

ಗದಗ-ಯಲವಿಗಿ ರೈಲ್ವೆ ಯೋಜನೆ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಬೊಮ್ಮಾಯಿ ಮನವಿ

Public TV
By Public TV
4 hours ago
Mansukh Mandaviya
Latest

ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಲೋಕಸಭೆಯಲ್ಲಿ ಐತಿಹಾಸಿಕ ಕ್ರೀಡಾ ಆಡಳಿತ, ಡೋಪಿಂಗ್ ತಡೆ ಮಸೂದೆ ಅಂಗೀಕಾರ

Public TV
By Public TV
5 hours ago
Brijesh Chowta
Latest

ರಾಜ್ಯದಲ್ಲಿ `ಆಯುಷ್ಮಾನ್ ಭಾರತ್’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಕ್ಯಾ.ಚೌಟ ಕಳವಳ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?