ನವದೆಹಲಿ: ಸೀಜ್ ಮಾಡಿದ್ದ ಮದ್ಯವನ್ನು ನಾಶಪಡಿಸುವ ಬದಲು ದೆಹಲಿ ಸರ್ಕಾರ ಭಾರೀ ರಿಯಾಯಿತಿಯಲ್ಲಿ ಮಾರಾಟ ಮಾಡಲು ಮುಂದಾಗಿದೆ. ಈ ಮೂಲಕ ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟಿದೆ.
ರಾಜ್ಯದಲ್ಲಿ ವಿವಿಧ ಇಲಾಖೆಗಳು ಹಲವು ಸಂದರ್ಭದಲ್ಲಿ ಅಕ್ರಮ ಮದ್ಯವನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಮದ್ಯವನ್ನು ನಾಶ ಮಾಡುವ ಬದಲು ಅದನ್ನು ಶೇ.25ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ದೆಹಲಿ ಸರ್ಕಾರ ಮುಂದಾಗಿದೆ. ಆದ್ದರಿಂದ ಮದ್ಯ ಪ್ರಿಯರ ಚಿತ್ತ ಸದ್ಯ ದೆಹಲಿ ಸರ್ಕಾರದ ಮೇಲಿದೆ.
- Advertisement 2
- Advertisement 3
ಇಲ್ಲಿಯವರೆಗೆ ಕಾನೂನು ಪ್ರಕ್ರಿಯೆಗಳೆಲ್ಲಾ ಮುಗಿದ ಮೇಲೆ ಅಧಿಕಾರಿಗಳ ಸಮ್ಮುಖದಲ್ಲಿ ವಶಪಡಿಸಿಕೊಂಡ ಮದ್ಯವನ್ನು ನಾಶ ಮಾಡಲಾಗುತ್ತಿತ್ತು. ಆದರೆ ಇನ್ನುಮುಂದೆ ಅಬಕಾರಿ ಇಲಾಖೆ ಹಾಗೂ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡ ಮದ್ಯಗಳನ್ನು ಲ್ಯಾಬ್ಗಳಲ್ಲಿ ಪರೀಕ್ಷೆಗೊಳಪಡಿಸಿ, ಅವುಗಳು ಸೇವಿಸಲು ಯೋಗ್ಯವಾಗಿದ್ದರೆ ಮಾತ್ರ ಆ ಮದ್ಯವನ್ನು ಮುಟ್ಟುಗೋಲು ಹಾಕಿದ ಏಳು ದಿನದಲ್ಲಿ ಮಾರಾಟ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
- Advertisement 4
ದೆಹಲಿಯೇ ಈ ವಿಧಾನವನ್ನ ಅಳವಡಿಕೊಂಡ ಮೊದಲ ರಾಜ್ಯವಾಗಲಿದ್ದು, ಮೊದಲ ಹಂತದಲ್ಲಿ 8 ಮಾರಾಟಗಾರರಿಗೆ ಮಾತ್ರ ವಶಪಡಿಸಿಕೊಂಡ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ. ಅಲ್ಲದೆ ಹೀಗೆ ಮಾರಾಟಗೊಳ್ಳುವ ಮದ್ಯಗಳ ಬಾಟಲಿ ಮೇಲೆ `ಅಧಿಕೃತ ಜಪ್ತಿ ಮದ್ಯ’, `ದೆಹಲಿಯಲ್ಲಿ ಮಾರಾಟಕ್ಕೆ ಮಾತ್ರ’ ಎಂದು ನಮೂದಿಸುವುದು ಕಡ್ಡಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿ ವರ್ಷ ಅಬಕಾರಿ ಇಲಾಖೆ ಅಕ್ರಮವಾಗಿ ಸಾಗಿಸುವ ಅಥವಾ ಮಾರಾಟ ಮಾಡುವ ಸುಮಾರು 2.5 ಲಕ್ಷ ಬಾಟಲಿಗಳ ಮದ್ಯವನ್ನು ವಶಪಡಿಸಿಕೊಳ್ಳುತ್ತದೆ. ಆದರೆ 2018-19 ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆ ಬರೋಬ್ಬರಿ 15 ಕೋಟಿ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದೆ.
ಈ ಮದ್ಯಗಳನ್ನು ನೆರೆಯ ಹರ್ಯಾಣದಿಂದ ಕಡಿಮೆ ದರದಲ್ಲಿ ಖರೀದಿಸಿ ದೆಹಲಿಗೆ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಅಲ್ಲದೆ ಇವುಗಳನ್ನು ಮಳಿಗೆಗಲ್ಲಿ ಅನಧಿಕೃತವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.