Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ – ಸರ್ಕಾರದ ಬೊಕ್ಕಸಕ್ಕೆ 2,026 ಕೋಟಿ ನಷ್ಟ: ಸಿಎಜಿ ವರದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ – ಸರ್ಕಾರದ ಬೊಕ್ಕಸಕ್ಕೆ 2,026 ಕೋಟಿ ನಷ್ಟ: ಸಿಎಜಿ ವರದಿ

Latest

ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ – ಸರ್ಕಾರದ ಬೊಕ್ಕಸಕ್ಕೆ 2,026 ಕೋಟಿ ನಷ್ಟ: ಸಿಎಜಿ ವರದಿ

Public TV
Last updated: January 11, 2025 1:44 pm
Public TV
Share
3 Min Read
Arvind Kejriwal
SHARE

ನವದೆಹಲಿ: ದೆಹಲಿ ಮದ್ಯ ನೀತಿ (Delhi Liquor Policy) ಅಕ್ರಮದಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 2,026 ಕೋಟಿ ರೂ. ಆದಾಯ ನಷ್ಟವಾಗಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ವರದಿ ಬಹಿರಂಗಪಡಿಸಿದೆ.

ಮದ್ಯ ನೀತಿಯಲ್ಲಿ ಬಹಳಷ್ಟು ಲೋಪದೋಷಗಳು ಕಂಡುಬಂದಿದ್ದು, ಪರವಾನಗಿ ನೀಡುವಲ್ಲಿ ನಿಯಮ ಉಲ್ಲಂಘನೆ ಮಾಡಿರುವುದು ವರದಿಯಲ್ಲಿ ಕಂಡುಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: 5 ವರ್ಷಗಳಲ್ಲಿ 64 ಜನರಿಂದ ಲೈಂಗಿಕ ಶೋಷಣೆ – ಕರಾಳ ಅನುಭವ ಬಿಚ್ಚಿಟ್ಟ ದಲಿತ ಬಾಲಕಿ

Arvind Kejriwal

ಈ ಹಿಂದೆ ಕೇಜ್ರಿವಾಲ್‌ ನೇತೃತ್ವದ ಸರ್ಕಾರ (Kejriwal’s Government) ಜಾರಿಗೊಳಿಸಿದ್ದ ಮದ್ಯ ನೀತಿಯು ಉದ್ದೇಶಿತ ಗುರಿ ಸಾಧಿಸುವಲ್ಲಿ ವಿಫಲವಾಗಿದೆ. ಮುಖ್ಯವಾಗಿ ಆಪ್‌ ನಾಯಕರು ಕಿಕ್‌ಬ್ಯಾಕ್‌ ಲಾಭ ಪಡೆದಿದ್ದಾರೆ. ಮದ್ಯ ನೀತಿ ಅನುಷ್ಠಾನಗೊಳಿಸುವಲ್ಲಿ ಅಂದಿನ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನೇತೃತ್ವದ ಸಚಿವರ ಗುಂಪು ತಜ್ಞರ ಸಮಿತಿಯ ಶಿಫಾರಸುಗಳನ್ನು ಕಡೆಗಣಿಸಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮದ್ವೆಯಾಗುವಂತೆ ಒತ್ತಡ – ಲಿವ್‌ ಇನ್‌ ಗೆಳತಿ ಕೊಂದು ಶವವನ್ನ 8 ತಿಂಗಳು ಫ್ರಿಡ್ಜ್‌ನಲ್ಲಿಟ್ಟಿದ್ದ ಸೈಕೋ

ಹೊಸ ಮದ್ಯ ನೀತಿ ದೆಹಲಿಯ ವಿಧಾನಸಭೆಯಲ್ಲಿ ಮಂಡನೆಯಾಗದೆಯೇ ಜಾರಿಗೆ ತರಲಾಗಿದೆ. ನೀತಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಕ್ಯಾಬಿನೆಟ್ ಅಥವಾ ರಾಜ್ಯಪಾಲರ ಅನುಮೋದನೆಯಿಲ್ಲದೆ ತೆಗೆದುಕೊಳ್ಳಲಾಗಿದೆ. ಎಲ್ಲಾ ಘಟಕಗಳಿಗೆ ಬಿಡ್‌ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೇ ಬಿಡ್‌ ದಾರರ ಆರ್ಥಿಕ ಪರಿಸ್ಥಿತಿಯನ್ನೂ ಪರಿಶೀಲಿಸಿರಲಿಲ್ಲ. ಇದರೊಂದಿಗೆ ಹೆಚ್ಚುವರಿಯಾಗಿ ನಿಯಮ ವಿಧಿಸುವವರಿಗೆ ಉದ್ದೇಶಪೂರ್ವಕವಾಗಿ ದಂಡ ವಿಧಿಸುವುದನ್ನು ಕೈಬಿಡಲಾಗಿದೆ ಎಂದು ಸಿಎಜಿ ವರದಿ ಹೇಳಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್‌ ಹೂವು

ಏನಿದು ಹಗರಣ?
ಕೋವಿಡ್‌ 2ನೇ ಅಲೆ ಉತ್ತುಂಗದಲ್ಲಿದ್ದಾಗ ಮನೀಶ್ ಸಿಸೋಡಿಯಾ 2021ರ ಏಪ್ರಿಲ್‌ನಲ್ಲಿ ಕ್ಯಾಬಿನೆಟ್‌ ಅನುಮೋದನೆ ಇಲ್ಲದೇ ಮದ್ಯದಂಗಡಿ ಟೆಂಡರ್‌ಗೆ ಅರ್ಜಿ ಸಲ್ಲಿಸಿದವರ 144.36 ಕೋಟಿ ಪರವಾನಗಿ ಶುಲ್ಕವನ್ನು ಮನ್ನಾ ಮಾಡಲು ಆದೇಶ ಹೊರಡಿಸುತ್ತಾರೆ. ಈ ಮಹತ್ವದ ನಿರ್ಧಾರದ ಬಳಿಕ ಮೇ ತಿಂಗಳಿನಲ್ಲಿ ಕೇಜ್ರಿವಾಲ್‌ ನೇತೃತ್ವದ ಕ್ಯಾಬಿನೆಟ್‌ ಸಭೆ ಕರೆದು ಅಬಕಾರಿ ನೀತಿಯಲ್ಲಿ ಬದಲಾವಣೆ ಮಾಡುತ್ತದೆ. ಮದ್ಯವನ್ನು ಮನೆಗ ಹೋಮ್‌ ಡೆಲಿವರಿ ಮಾಡಬಹುದು ಅಷ್ಟೇ ಅಲ್ಲದೇ ಮದ್ಯದ ಅಂಗಡಿಗಳನ್ನು ಬೆಳಗಿನ ಜಾವ 3 ಗಂಟೆಯವರೆಗೆ ತೆರೆಯಬಹುದು. ಪರವಾನಗಿದಾರರು ಅನಿಯಮಿತ ರಿಯಾಯಿತಿಗಳನ್ನು ನೀಡಲು ನೀತಿ ಅನುಮತಿ ಕಲ್ಪಿಸಿತ್ತು.

Liquor Party 2 e1682567560961

ಲೆಫ್ಟಿನೆಂಟ್‌ ಗವರ್ನರ್‌ ಅವರು ಕ್ಯಾಬಿನೆಟ್‌ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ದೆಹಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯುತ್ತದೆ. ಆದರೆ ಸಿಸೋಡಿಯಾ ಕೈಗೊಂಡ ನಿರ್ಧಾರ ಮುಂದುವರಿಯುತ್ತದೆ. ಸರ್ಕಾರದ ನಿರ್ಧಾರ ಬಗ್ಗೆ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ಲೆಫ್ಟಿನೆಂಟ್‌ ಗವರ್ನರ್‌ ಬಳಿ ದೂರು ನೀಡುತ್ತಾರೆ. ಸಿಸೋಡಿಯಾ ನಿರ್ಧಾರದಿಂದ ಸರ್ಕಾರಕ್ಕೆ ಭಾರೀ ನಷ್ಟವಾಗಿದೆ. ವಿಸ್ಕಿ ಮತ್ತು ವೈನ್‌ ಮಾರಾಟ ಅನುಕ್ರಮವಾಗಿ 60% ಮತ್ತು 87%ರಷ್ಟು ಭಾರೀ ಏರಿಕೆಯಾಗಿದ್ದರೂ ಆದಾಯ 80% ರಷ್ಟು ಇಳಿಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸುತ್ತಾರೆ.

ಕೇಜ್ರಿವಾಲ್‌- ಸಿಸೋಡಿಯಾ ಅವರು ಲೆಫ್ಟಿನೆಂಟ್‌ ಗವರ್ನರ್‌ ಗಮನಕ್ಕೆ ತಾರದೇ ತುರ್ತು ಕ್ಯಾಬಿನೆಟ್‌ ಸಭೆಯನ್ನು ಕರೆಯುತ್ತಾರೆ. ಸಿಸೋಡಿಯಾ ಅಕ್ರಮವಾಗಿ ಹೊರಡಿಸಿದ ಆದೇಶವನ್ನು ಸಕ್ರಮ ಮಾಡಲು ಕ್ಯಾಬಿನೆಟ್‌ನಲ್ಲಿ ಪ್ರಯತ್ನ ಮಾಡಲಾಗುತ್ತದೆ. ಈ ನಿರ್ಧಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಭಾರೀ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸುತ್ತದೆ. ವಿರೋಧ ವ್ಯಕ್ತವಾಗುತ್ತಿದ್ದಂತೆ 2022ರ ಜುಲೈನಲ್ಲಿ ಮದ್ಯ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಲೆಫ್ಟಿನೆಂಟ್‌ ಗವರ್ನರ್‌ ಅವರು ಆದೇಶ ಹೊರಡಿಸುತ್ತಾರೆ. 2022ರ ಜುಲೈನಲ್ಲಿ ಕೇಜ್ರಿವಾಲ್‌ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಬಕಾರಿ ನೀತಿಯನ್ನು ಹಿಂದಕ್ಕೆ ಪಡೆಯುತ್ತದೆ.

TAGGED:Arvind KejriwalCAGDelhi GovernmentLiquor Policy ScamManish Sisodiaಅರವಿಂದ್ ಕೇಜ್ರಿವಾಲ್ಎಎಪಿದೆಹಲಿ ಮದ್ಯ ನೀತಿ ಹಗರಣದೆಹಲಿ ಸರ್ಕಾರ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
8 minutes ago
lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
44 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
55 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
1 hour ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 hour ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?