ಬೆಂಗಳೂರು: ಅಡ್ರೆಸ್ನಲ್ಲಿ ಸಿಂಗಲ್ ಡಿಜಿಟ್ ತಪ್ಪಾಗಿದ್ದಕ್ಕೆ ಗ್ರಾಹಕನ ಮೇಲೆ ಡೆಲಿವರಿ ಬಾಯ್ (Delivery Boy) ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡೆಲಿವರಿ ಕಂಪನಿ ಗ್ರಾಹಕನಿಗೆ ಕ್ಷಮೆಯಾಚಿಸಿದೆ.
ಡೆಲಿವರಿ ಬಾಯ್ ವಿಷ್ಣುವರ್ಧನ್ ಎಂಬಾತ ಗ್ರಾಹಕ ಶಶಾಂಕ್ ಅವರ ಮೇಲೆ ಹಲ್ಲೆ ನಡೆಸಿದ್ದ. ಬೆಂಗಳೂರಿನ (Bengaluru)ಬಸವೇಶ್ವರ ನಗರದಲ್ಲಿ (Basaveshwar Nagar) ಈ ಘಟನೆ ನಡೆದಿತ್ತು. ಮೇ 21ರಂದು ಆ್ಯಪ್ವೊಂದರಲ್ಲಿ ಶಶಾಂಕ್ ಪತ್ನಿ ಆರ್ಡರ್ ಮಾಡಿದ್ದರು. ಇದನ್ನೂ ಓದಿ: ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!
ಡೆಲಿವರಿ ಬಾಯ್ ಬಂದಾಗ ಶಶಾಂಕ್ ನಾದಿನಿ ಸಾಮಗ್ರಿ ತೆಗೆದುಕೊಳ್ಳಲು ಹೋದಾಗ ಅಡ್ರೆಸ್ ವಿಚಾರವಾಗಿ ಬಾಯಿಗೆ ಬಂದಹಾಗೇ ಮಾತಾಡುತ್ತಿದ್ದ. ಇದನ್ನು ಕೇಳಿಸಿಕೊಂಡು ಶಶಾಂಕ್ ಹೊರಗಡೆ ಹೋಗಿ ಆತನೊಂದಿಗೆ ಸ್ವಲ್ಪ ಜೋರಾಗಿ ಮಾತನಾಡಿದ್ದರು. ಆಗ ಒಮ್ಮೆಲೆ ಡೆಲಿವರಿ ಬಾಯ್ ಹಲ್ಲೆ ನಡೆಸಿದ್ದು, ಕಣ್ಣಿಗೆ ಗಾಯವಾಗಿದೆ. ಹಲ್ಲೆ ನಡೆಸಿದ ದೃಶ್ಯಗಳು ಅದೇ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸದ್ಯ ಈ ಘಟನೆ ಕುರಿತು ಶಶಾಂಕ್ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಇದೀಗ ಡೆಲಿವರಿ ಕಂಪನಿ ಶಶಾಂಕ್ ಅವರಿಗೆ ಕ್ಷಮೆ ಕೇಳಿದೆ.
ಈ ಕುರಿತು ಶಶಾಂಕ್ ಮಾತನಾಡಿದ್ದು, ಹಲ್ಲೆಯಿಂದಾಗಿ ನನ್ನ ಕಣ್ಣಿನ ಕೆಳಗಿನ ಮೂಳೆ ಕಟ್ ಆಗಿದೆ. ಹೀಗಾಗಿ ಡಾಕ್ಟರ್ ಇನ್ನೊಮ್ಮೆ ಚೆಕ್ ಮಾಡುತ್ತೇನೆ ಎಂದಿದ್ದು, ಒಂದು ವೇಳೆ ಸರಿಹೋಗದಿದ್ದರೆ ಆಪರೇಷನ್ ಮಾಡಬೇಕು ಎಂದು ಹೇಳಿದ್ದಾರೆ. ಸಂಬಂಧಪಟ್ಟ ಕಂಪನಿಯವರು, ಪೊಲೀಸರು ನನಗೆ ನ್ಯಾಯಕೊಡಿಸಬೇಕು ಎಂದು ಕೇಳಿಕೊಂಡಿದ್ದರು.ಇದನ್ನೂ ಓದಿ: `ಯುವನಿಧಿ’ ಗ್ಯಾರಂಟಿ ಹಣದಿಂದ ಲ್ಯಾಪ್ಟಾಪ್ ಖರೀದಿಸಿದ ವಿದ್ಯಾರ್ಥಿನಿ ಇಶಾ ಆಸಿಫ್