ಬೆಂಗಳೂರು: ಬೆಂಗಳೂರಿನಲ್ಲಿ ಲೋಕಾಯುಕ್ತ (Lokayukta) ಭರ್ಜರಿ ಬೇಟೆಯಾಡಿದೆ. ಬಾರ್ ಲೈಸೆನ್ಸ್ (Bar License) ಪಡೆಯಲು ಬರೋಬ್ಬರಿ 2 ಕೋಟಿಗೂ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟ ಅಬಕಾರಿ ಡಿಸಿ (Excise DC) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಅಬಕಾರಿ ಡಿಸಿ ಜಗದೀಶ್ ನಾಯಕ್, ಚಾಲಕ ಲಕ್ಕಪ್ಪ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರದ ಅಬಕಾರಿ ಭವನದಲ್ಲಿ ಧಿಡೀರ್ ರೇಡ್ ಮಾಡಿದ ಲೋಕಾಯುಕ್ತ ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದೆ. ಇದನ್ನೂ ಓದಿ: ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಹೊಸ ಕಾನೂನು, ಸೈಬರ್ ಕ್ರೈಂ ನಿಯಂತ್ರಣಕ್ಕೆ ಕಠಿಣ ಕ್ರಮ: ಸಿಎಂ ಭರವಸೆ
ಹೌದು, ದೂರುದಾರ ಲಕ್ಷ್ಮಿ ನಾರಾಯಣ ತಮ್ಮ ಮಗನಿಗಾಗಿ ಬಾರ್ ಓಪನ್ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಸಿಎಲ್7 ಮತ್ತು ಮೈಕ್ರೋ ಬ್ರೈವರಿ ಲೈಸೆನ್ಸ್ಗೆ ಸರ್ಕಾರಿ ಫೀಸ್ 21 ಲಕ್ಷ ಕೂಡ ಪಾವತಿಸಿದ್ದರು. ಆದರೆ ಈ ಎರಡು ಲೈಸೆನ್ಸ್ಗಳನ್ನ ಕೊಡಲು ಬೆಂಗಳೂರು ನಗರ ಅಬಕಾರಿ ಡಿಸಿ ಜಗದೀಶ್ ನಾಯ್ಕ್ ಬರೋಬ್ಬರಿ 2.30 ಕೋಟಿ ರೂ. ಲಂಚ ಕೇಳಿದ್ದಾರೆ. ಅದರಲ್ಲಿ 50 ಲಕ್ಷ ರೂ. ಇಂದು ಅಡ್ವಾನ್ಸ್ ಕೊಡಲು ಹೇಳಿದ್ದರು. ಇದರಿಂದ ಲಕ್ಷ್ಮೀನಾರಾಯಣ ನೇರವಾಗಿ ಲೋಕಾಯುಕ್ತ ಪೊಲೀಸರ ಮೊರೆಹೋದರು. ಇದನ್ನೂ ಓದಿ: ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ಜಲ ಸಮಾಧಿ!
ಲೈಸೆನ್ಸ್ ವಿಚಾರಕ್ಕೆ ಕೇಸ್ ದಾಖಲಿಸಿ ಅಖಾಡಕ್ಕೆ ಇಳಿದ ಎಸ್ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದ ಟೀಂ ಬ್ಯಾಟರಾಯನಪುರದಲ್ಲಿರೋ ಅಬಕಾರಿ ಭವನದಲ್ಲೇ 25 ಲಕ್ಷ ಹಣ ಅಡ್ವಾನ್ಸ್ ಸ್ವೀಕರಿಸುತ್ತಿದ್ದ ಡಿಸಿ ಜಗದೀಶ್ ನಾಯ್ಕ್, ಡ್ರೈವರ್ ಲಕ್ಕಪ್ಪನನ್ನ ರೆಡ್ ಹ್ಯಾಂಡ್ ಆಗಿ ಹಿಡಿದು ಮೂವರನ್ನ ಬಂಧಿಸಿದ್ದಾರೆ. ಇದನ್ನೂ ಓದಿ: Indore Crisis | 3 ಲಕ್ಷ ರೂ. ಮೌಲ್ಯದ ನೀರು ಶುದ್ಧೀಕರಣ ಯಂತ್ರ ತಂದ ಕ್ಯಾಪ್ಟನ್ ಗಿಲ್
ಇನ್ನು ಲೋಕಾಯುಕ್ತ ಪೊಲೀಸರ ದಾಳಿ ವೇಳೆ ಹಣ ಸ್ವೀಕರಿಸಿದ್ದ ಸೂಪರಿಂಟೆಂಡೆಂಟ್ ಮತ್ತು ಡ್ರೈವರ್ ಲಕ್ಕಪ್ಪ ಎಸ್ಕೇಪ್ ಆಗಲು ಮುಂದಾಗಿದ್ದರು. ಆದರೆ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದರು. ಸದ್ಯ ಮೂವರು ಆರೋಪಿಗಳನ್ನ ಬಂಧಿಸಿರೋ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಿಗ್ಬಾಸ್ ವಿನ್ನರ್ಗೆ 370000000 ವೋಟ್ – ಗೆಲ್ಲೋದ್ಯಾರು?

