Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ

Public TV
Last updated: May 29, 2025 6:19 pm
Public TV
Share
3 Min Read
Kamal Haasan Karave Protest Film Chamber
SHARE

ತಮಿಳು ನಟ ಕಮಲ್ ಹಾಸನ್ (Kamal Haasan) ವಿವಾದಾತ್ಮಕ ಹೇಳಿಕೆಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗ್ತಿದೆ. ಆದರೆ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು ಕಮಲ್ ಹಾಸನ್ ಉದ್ಧಟತನ ತೋರಿದ್ದಾರೆ. ನಾನು ಹೇಳಿದ್ದು ನನ್ನ ಪ್ರಕಾರ ಸರಿ, ನಾನು ಕ್ಷಮೆ ಕೇಳಲ್ಲ ಎಂದಿದ್ದಾರೆ. ಇತ್ತ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ತೀವ್ರಗೊಂಡಿದ್ದು, ಅವರ ಸಿನಿಮಾ ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ನಟ ಕಮಲ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆಯೊಡೆದಿದೆ. ಕರವೇ (Karnataka Rakshana Vedike) ಬಣ, ಕನ್ನಡ ಸಂಘಟನೆಗಳು ಚಲನಚಿತ್ರ ವಾಣಿಜ್ಯ ಮಂಡಳಿಯ ಮುಂಭಾಗ ಪ್ರತಿಭಟನೆ ನಡೆಸಿತು. ಕಮಲ್ ಹಾಸನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು

ಕಮಲ್ ಚಿತ್ರ ರಾಜ್ಯದಲ್ಲಿ ಬಿಡುಗಡೆ ಸಂಬಂಧ ಫಿಲಂ ಚೇಂಬರ್‌ನಲ್ಲಿ (Film Chamber) ಸಭೆ ನಡೆಯುತ್ತಿದ್ದ ವೇಳೆಯೇ ಫಿಲಂ ಚೇಂಬರ್‌ಗೆ ಕನ್ನಡಪರ ಹೋರಾಟಗಾರರು ಮುತ್ತಿಗೆ ಹಾಕಿದರು. ಕರವೇ ನಾರಾಯಣಗೌಡರ ಬಣ ಮುತ್ತಿಗೆ ಹಾಕಿ ಕಮಲ್ ಕ್ಷಮೆ ಕೇಳೋವರೆಗೂ ಚಿತ್ರ ಬಿಡುಗಡೆ ಮಾಡದಂತೆ ಆಗ್ರಹಿಸಿದರು. ಫಿಲಂ ಚೇಂಬರ್ ಒಳಗೆ ನುಗ್ಗಿ ಅಧ್ಯಕ್ಷರ ಮುಂದೆ ಕೂತು ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾ ರಿಲೀಸ್ ಆಗಲು ಬಿಡಲ್ಲ. ಸಿನಿಮಾ ಬಿಡುಗಡೆ ಮಾಡುತ್ತಿರುವ ಡಿಸ್ಟ್ರಿಬ್ಯೂಟರ್ ಅವರಿಗೆ ವಾರ್ನಿಂಗ್ ಕೊಡುತ್ತೇವೆ, ಫಿಲಂ ಚೇಂಬರ್ ಚಿತ್ರ ರಿಲೀಸ್ ಆಗೋಕೆ ಬಿಡಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್

ಇನ್ನು ಕನ್ನಡದ ಬಗ್ಗೆ ಕಮಲ್ ಹಾಸನ್ ಅವಿವೇಕದ ಮಾತಾಡಿದ್ದಾರೆ. ಅವರ ಚಿತ್ರ ಕರ್ನಾಟಕದಲ್ಲಿ ರಿಲೀಸ್ ಆಗಬಾರದು. ಕರ್ನಾಟಕದ ಅನ್ನ ತಿಂದ ಕನ್ನಡ ನಟರು ಇದರ ಬಗ್ಗೆ ಧ್ವನಿಯೆತ್ತಬೇಕು. ಕಮಲ್ ಹಾಸನ್ ವಿರುದ್ಧ ಕನ್ನಡ ನಟ-ನಟಿಯರು ಯಾಕೆ ಧ್ವನಿ ಎತ್ತಿಲ್ಲ ಎಂದು ಕರವೇ ಶಿವರಾಮೇಗೌಡ ಪ್ರಶ್ನಿಸಿದರು. ಇದನ್ನೂ ಓದಿ: ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್

ಕಮಲ್ ಹಾಸನ್‌ಗೆ ಮತ್ತೆ ಡೆಡ್‌ಲೈನ್:
ಫಿಲಂ ಚೇಂಬರ್‌ನಲ್ಲಿ ಸಭೆ ಬಳಿಕ ಮಾತಾಡಿದ ಕನ್ನಡ ಹೋರಾಟಗಾರ, ಕರ್ನಾಟಕ ಚಲನಚಿತ್ರ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಕಮಲ ಹಾಸನ್‌ಗೆ ಮತ್ತೆ ಡೆಡ್‌ಲೈನ್ ಕೊಟ್ಟಿದ್ದಾರೆ. ಕಮಲ್ ಹಾಸನ್ ಬಗ್ಗೆ ನಮಗೆ ಯಾರಿಗೂ ಕನಿಕರ ಇಲ್ಲ. ಇಂದು ಅಥವಾ ನಾಳೆ ಒಳಗೆ ಕಮಲ್ ಹಾಸನ್ ಕ್ಷಮೆ ಕೇಳಲೇಬೇಕು. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಮಾಡಿಕೊಡಲ್ಲ. ಕ್ಷಮಾಪಣೆ ಅಂತಾ ಪದ ಬರದಿದ್ದರೆ ಸಿನಿಮಾ ರಿಲೀಸ್ ಮಾಡೋಕೆ ಬಿಡಲ್ಲ ಎಂದು ಗುಡುಗಿದರು. ಇನ್ನು ಡಿಸ್ಟ್ರಿಬ್ಯೂಟರ್ ವೆಂಕಟೇಶ್ ಮಾತನಾಡಿ, ಕನ್ನಡ ಹಾಗೂ ಬ್ಯುಸಿನೆಸ್ ಎರಡೂ ನನಗೆ ಇಂಪಾರ್ಟೆಂಟ್. ಫಿಲಂ ಚೇಂಬರ್ ಸಭೆಯಲ್ಲಿ ಏನೇನು ಆಯ್ತು ಎಲ್ಲವನ್ನು ಕಮಲ್‌ಗೆ ಹೇಳುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

ನಟ ಕಮಲ್ ಹಾಸನ್ ವಿವಾದದ ಬಗ್ಗೆ ನಟ ಶಿವರಾಜ್ ಕುಮಾರ್ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿ ಇದೆ. ನಟ ಕಮಲ್ ಹಾಸನ್‌ಗೆ ಇದೆಲ್ಲ ಗೊತ್ತಾಗುತ್ತೆ. ಕಮಲ್ ಅವರೇ ಅದನ್ನ ಸರಿ ಮಾಡಿಕೊಳ್ಳುತ್ತಾರೆ. ಬರೀ ಬಾಯಿ ಮಾತಲ್ಲಿ ಮಾತ್ರ ಕನ್ನಡ ಎನ್ನಬಾರದು. ಕನ್ನಡಕ್ಕಾಗಿ ಸಾಯುತ್ತೀವಿ, ಹೋರಾಟ ಮಾಡ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ

ಇನ್ನು ಕಮಲ ಹಾಸನ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ನಟಿ ಜಯಮಾಲಾ, ಕಮಲ್ ಹಾಸನ್‌ಗೆ ಅವರ ತಪ್ಪು ಮನವರಿಕೆ ಮಾಡಬೇಕು. ಅವರು ತಿಳಿದು ಹೇಳಿದ್ರೋ, ತಿಳಿಯದೇ ಹೇಳಿದ್ರೋ ಗೊತ್ತಿಲ್ಲ. ಒಂದಂತೂ ಸತ್ಯ. ತಮಿಳಿನಿಂದ ಕನ್ನಡ ಹುಟ್ಟಿಲ್ಲ. ಅವರು ಕ್ಷಮೆ ಕೇಳಬೇಕು. ಇನ್ನು ಕಮಲ್ ಹೀಗೆಲ್ಲಾ ಮಾತನಾಡುವಾಗ ಶಿವಣ್ಣ ಸುಮ್ಮನಿದ್ದರು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಿವಣ್ಣ ಅವರಿಗೆ ಅವತ್ತು ಗೊತ್ತಾಗಿಲ್ಲ. ಆರೋಗ್ಯ ದೃಷ್ಟಿಯಿಂದ ಸ್ವಲ್ಪ ಕುಗ್ಗಿದ್ದಾರೆ. ಹೀಗಾಗಿ ಗೊತ್ತಾಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮತ್ತೆ ಕಮಲ್ ಹಾಸನ್ ಮೊಂಡಾಟ – ಕ್ಷಮೆ ಕೇಳಲ್ಲ ಎಂದ ನಟ

ಇತ್ತ ನಟ ಕಮಲ್ ಹಾಸನ್ ಚಲನಚಿತ್ರಗಳನ್ನ ಕರ್ನಾಟಕದಲ್ಲಿ ನಿರ್ಬಂಧಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಫಿಲಂ ಚೇಂಬರ್‌ಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತು ಒಪ್ಪಲ್ಲ- ಜಗ್ಗೇಶ್ ಖಂಡನೆ

TAGGED:Film ChamberKamal HaasankannadaKarnataka Film Boardtamilಕನ್ನಡಕಮಲ್ ಹಾಸನ್ಕರ್ನಾಟಕ ಚಲನಚಿತ್ರ ಮಂಡಳಿತಮಿಳು
Share This Article
Facebook Whatsapp Whatsapp Telegram

You Might Also Like

operation sindhu 11 kannadigas return safely to bengaluru from war hit iran
Bengaluru City

ಆಪರೇಷನ್ ಸಿಂಧು – ಯುದ್ಧ ಪೀಡಿತ ಇರಾನ್‌ನಿಂದ 11 ಕನ್ನಡಿಗರು ವಾಪಸ್

Public TV
By Public TV
23 minutes ago
Bunker Buster
Latest

ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

Public TV
By Public TV
26 minutes ago
Iran Nuclear Sites
Latest

ಇದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧವಾದ ಕ್ರೂರ ಕೃತ್ಯ – ಅಮೆರಿಕ ದಾಳಿ ಒಪ್ಪಿಕೊಂಡ ಇರಾನ್‌

Public TV
By Public TV
1 hour ago
SRIDEVI
Crime

ಕಲಬುರಗಿ | ನಿವೃತ್ತ ನರ್ಸ್ ಯಡವಟ್ಟಿಗೆ ತಾಯಿ, ನವಜಾತ ಶಿಶು ಬಲಿ

Public TV
By Public TV
2 hours ago
America Strikes In Iran
Latest

ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್‌ ದಾಳಿ

Public TV
By Public TV
2 hours ago
Ind vs Eng
Cricket

ಪೋಪ್‌ – ಡಕೆಟ್‌ ಶತಕದ ಜೊತೆಯಾಟ – ಬುಮ್ರಾ ಏಕಾಂಗಿ ಹೋರಾಟಕ್ಕೆ ಮೂರು ವಿಕೆಟ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?